<p><strong>ವಿಜಯಪುರ:</strong> ರಾಜ್ಯದ ಜನತೆಗೆ ಪ್ರವಾಹ ಮತ್ತು ಅತಿವೃಷ್ಟಿಯಿಂದಾದ ಹಾನಿಗೆ ಪರಿಹಾರದ ಚಿಂತೆಯಾದರೆ ಕಾಂಗ್ರೆಸ್ಸಿಗರಿಗೆ ಮುಖ್ಯಮಂತ್ರಿ ಸ್ಥಾನ, ಮಂತ್ರಿ ಪದವಿಯ ಚಿಂತೆಯಾಗಿದೆ ಎಂದು ಸಂಸದ ರಮೆಶ ಜಿಗಜಿಣಗಿ ಕಿಡಿಕಾರಿದರು.</p>.<p>‘ಜನ ಸಂಕಷ್ಟದಲ್ಲಿದ್ದು ಪರಿಹಾರಕ್ಕೆ ಅಂಗಲಾಚುತ್ತಿದ್ದರೆ ಜನಪ್ರತಿನಿಧಿಗಳು ಅಧಿಕಾರದ ಹಪಹಪಿಗಿಳಿದಿದ್ದಾರೆ. ಇವರ ಕಚ್ಚಾಟ, ಪರಸ್ಪರ ಪೈಪೋಟಿಯಿಂದಾಗಿ ಅಭಿವೃದ್ಧಿ ಪರ ಚರ್ಚೆ, ಜನಪರ ಕಾಳಜಿ, ನೆರವಿನ ನಿರೀಕ್ಷೆಗಳೆಲ್ಲವೂ ಮಣ್ಣುಪಾಲಾಗುತ್ತಿದೆ’ ಎಂದು ಪ್ರಕಟಣೆಯಲ್ಲಿ ಆರೋಪಿಸಿದ್ದಾರೆ.</p>.<p>‘ಅತಿವೃಷ್ಟಿ ಹಾಗೂ ಪ್ರವಾಹದಿಂದಾಗಿ ತೊಗರಿ, ಹತ್ತಿ, ಮೆಕ್ಕೆಜೋಳ, ಈರುಳ್ಳಿ ಸೇರಿದಂತೆ ಹಲವು ಬೆಳೆಗಳು ಹಾಳಾಗಿದ್ದು, ರೈತರು ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದಾರೆ. ಹಿಂಗಾರು ಹಂಗಾಮು ಆರಂಭಗೊಳ್ಳುತ್ತಿದ್ದು, ಸಕಾಲಕ್ಕೆ ರಸಗೊಬ್ಬರ ಹಾಗೂ ಬಿತ್ತನೆ ಬೀಜದ ನಿರೀಕ್ಷೆಯಲ್ಲಿದ್ದಾರೆ. ಆದರೆ ಈ ಸರ್ಕಾರ ಮತ್ತು ಅದರ ಶಾಸಕರು ಇತ್ತ ಗಮನ ಕೊಡದೇ ಅಧಿಕಾರಕ್ಕಾಗಿ ಕಿತ್ತಾಟ ನಡೆಸಿರುವುದು ನಾಚಿಕೆಗೇಡು’ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ:</strong> ರಾಜ್ಯದ ಜನತೆಗೆ ಪ್ರವಾಹ ಮತ್ತು ಅತಿವೃಷ್ಟಿಯಿಂದಾದ ಹಾನಿಗೆ ಪರಿಹಾರದ ಚಿಂತೆಯಾದರೆ ಕಾಂಗ್ರೆಸ್ಸಿಗರಿಗೆ ಮುಖ್ಯಮಂತ್ರಿ ಸ್ಥಾನ, ಮಂತ್ರಿ ಪದವಿಯ ಚಿಂತೆಯಾಗಿದೆ ಎಂದು ಸಂಸದ ರಮೆಶ ಜಿಗಜಿಣಗಿ ಕಿಡಿಕಾರಿದರು.</p>.<p>‘ಜನ ಸಂಕಷ್ಟದಲ್ಲಿದ್ದು ಪರಿಹಾರಕ್ಕೆ ಅಂಗಲಾಚುತ್ತಿದ್ದರೆ ಜನಪ್ರತಿನಿಧಿಗಳು ಅಧಿಕಾರದ ಹಪಹಪಿಗಿಳಿದಿದ್ದಾರೆ. ಇವರ ಕಚ್ಚಾಟ, ಪರಸ್ಪರ ಪೈಪೋಟಿಯಿಂದಾಗಿ ಅಭಿವೃದ್ಧಿ ಪರ ಚರ್ಚೆ, ಜನಪರ ಕಾಳಜಿ, ನೆರವಿನ ನಿರೀಕ್ಷೆಗಳೆಲ್ಲವೂ ಮಣ್ಣುಪಾಲಾಗುತ್ತಿದೆ’ ಎಂದು ಪ್ರಕಟಣೆಯಲ್ಲಿ ಆರೋಪಿಸಿದ್ದಾರೆ.</p>.<p>‘ಅತಿವೃಷ್ಟಿ ಹಾಗೂ ಪ್ರವಾಹದಿಂದಾಗಿ ತೊಗರಿ, ಹತ್ತಿ, ಮೆಕ್ಕೆಜೋಳ, ಈರುಳ್ಳಿ ಸೇರಿದಂತೆ ಹಲವು ಬೆಳೆಗಳು ಹಾಳಾಗಿದ್ದು, ರೈತರು ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದಾರೆ. ಹಿಂಗಾರು ಹಂಗಾಮು ಆರಂಭಗೊಳ್ಳುತ್ತಿದ್ದು, ಸಕಾಲಕ್ಕೆ ರಸಗೊಬ್ಬರ ಹಾಗೂ ಬಿತ್ತನೆ ಬೀಜದ ನಿರೀಕ್ಷೆಯಲ್ಲಿದ್ದಾರೆ. ಆದರೆ ಈ ಸರ್ಕಾರ ಮತ್ತು ಅದರ ಶಾಸಕರು ಇತ್ತ ಗಮನ ಕೊಡದೇ ಅಧಿಕಾರಕ್ಕಾಗಿ ಕಿತ್ತಾಟ ನಡೆಸಿರುವುದು ನಾಚಿಕೆಗೇಡು’ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>