ವಿಜಯಪುರ: ನಗರದ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಆವರಣದಲ್ಲಿ ಜಿಲ್ಲಾಡಳಿತ ಏರ್ಪಡಿಸಿದ್ದ ಸ್ವಾತಂತ್ಸೋವ ಧ್ವಜಾರೋಹಣ ಕಾರ್ಯಕ್ರಮಕ್ಕೆ ಮುಜರಾಯಿ, ಹಜ್ ಮತ್ತು ವಕ್ಪ್ ಸಚಿವೆ ಶಶಿಕಲಾ ಜೊಲ್ಲೆ ಆಗಮಿಸುತ್ತಿದ್ದ ವೇಳೆ ಕಾಂಗ್ರೆಸ್ ಮಹಿಳಾ ಕಾರ್ಯಕರ್ತೆಯರು ಅಡ್ಡಗಟ್ಟಿ ಘೇರಾವ್ ಹಾಕಿದರು.
ವಿಜಯಪುರ ಜಿಲ್ಲೆಗೆ ಭ್ರಷ್ಟ ಸಚಿವೆ ಬೇಡ, ಧ್ವಜಾರೋಹಣ ಮಾಡುವುದು ಬೇಡ ಎಂದು ಘೋಷಣೆ ಕೂಗಿ, ಕಪ್ಪು ಬಟ್ಟೆ ಪ್ರದರ್ಶಿಸಿದರು.
ಪ್ರತಿಭಟನಾಕಾರರನ್ನು ಪೊಲೀಸರು ತಡೆದು, ವಶಕ್ಕೆ ಪಡೆದರು.