<p><strong>ವಿಜಯಪುರ</strong>: ನಗರ ಸೇರಿದಂತೆ ಜಿಲ್ಲೆಯಾದ್ಯಂತ ಬುಧವಾರ ಬೆಳಿಗ್ಗೆಯಿಂದ ಸಂಜೆ ವರೆಗೂ ಗಜಾನನನ್ನು ಮನೆ, ದೇವಸ್ಥಾನ, ಶಾಲೆ, ಕಾಲೇಜು, ಸಾರ್ವಜನಿಕ ಸ್ಥಳಗಲ್ಲಿ ನಿರ್ಮಿಸಿರುವ ಪೆಂಡಾಲ್ಗಳಿಗೆ ಭಕ್ತಿ, ಭಾವದಿಂದ ಆಹ್ವಾನ ಮಾಡಿ ಪ್ರತಿಷ್ಠಾಪಿಸಲಾಯಿತು.</p>.<p>ತೆರೆದ ವಾಹನಗಳಲ್ಲಿ ಗಣೇಶನ ಮೂರ್ತಿಗಳನ್ನು ಇರಿಸಿಭಜನೆ, ಬಾಜಾ ಭಜಂತ್ರಿ, ಡೊಳ್ಳಿನ ವಾದ್ಯ, ಡಿಜೆ, ಗುಲಾಲಿನ ರಂಗು, ಟಪ್ಪಾಂಗುಚ್ಚಿ ನೃತ್ಯದೊಂದಿಗೆ ಸಾಲು, ಸಾಲಾಗಿ ಮೆರವಣಿಗೆ ಮೂಲಕ ಅದ್ಧೂರಿಯಾಗಿ ಸ್ವಾಗತಿಸಿ, ಪ್ರತಿಷ್ಠಾಪಿಸಿ ಪೂಜೆ ಸಲ್ಲಿಸಲಾಯಿತು.</p>.<p>ಗಣೇಶೋತ್ಸವ ಸಮಿತಿಗಳು ಆಕರ್ಷಕ ಪೆಂಡಾಲ್, ಮಂಟಪಗಳನ್ನುನಿರ್ಮಿಸಿ, ವೈವಿಧ್ಯಮಯವಾದ ವಿದ್ಯುತ್ ದೀಪಗಳಿಂದ ಆಲಂಕರಿಸಿದ್ದು, ನೋಡುಗರ ಗಮನ ಸೆಳೆಯುತ್ತಿವೆ. ಪಟಾಕಿ, ಸಿಡಿಮದ್ದುಗಳನ್ನು ಸಿಡಿಸಿ ಸಂಭ್ರಮಿಸಿದರು.</p>.<p>ಗುರುವಾರ ಸಾರ್ವಜನಿಕ ಗಣೇಶೋತ್ಸವ ಸಮಿತಿಗಳಿಂದ ವೈವಿಧ್ಯಮಯ ಧಾರ್ಮಿಕ, ಸಾಂಸ್ಕೃತಿಕ ಹಾಗೂ ಮನರಂಜನ ಕಾರ್ಯಕ್ರಮಗಳು ನಡೆದವು. ಭಕ್ತರು ಕುಟುಂಬ ಸಮೇತರಾಗಿ ಭೇಟಿ ನೀಡಿ, ಗಣಪನ ದರ್ಶನ ಪಡೆದರು.</p>.<p>ರಾತ್ರಿ ವೇಳೆ ಸುರಿದ ಧಾರಾಕಾರ ಮಳೆ ಮತ್ತು ವಿದ್ಯುತ್ ಕೈಕೊಟ್ಟ ಕಾರಣ ಪೆಂಡಾಲ್ಗಳಲ್ಲಿ ಸಾರ್ವಜನಿಕ ಉತ್ಸವ ಸಮಿತಿಯ ಪದಾಧಿಕಾರಿಗಳಿಗೆ ತೊಂದರೆಯಾಯಿತು.</p>.<p>ಗಣೇಶೋತ್ಸವದ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ನಗರದಲ್ಲಿ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆ.</p>.<p><strong>ಸಾರ್ವಜನಿಕರಿಗೆ ಜಿಲ್ಲಾಧಿಕಾರಿ ಮನವಿ</strong></p>.<p>ಕೆರೆ-ಕಟ್ಟೆ ಮತ್ತು ತೆರೆದ ಬಾವಿಗಳಲ್ಲಿ ಸಾರ್ವಜನಿಕರು ಗಣೇಶ ವಿಗ್ರಹಗಳ ವಿಸರ್ಜನೆ ಮಾಡಬಾರದು ಎಂದುಜಿಲ್ಲಾಧಿಕಾರಿ ವಿಜಯ ಮಹಾಂತೇಶ್ ಮನವಿ ಮಾಡಿದ್ದಾರೆ.</p>.<p>ಬಣ್ಣ ಮತ್ತು ರಸಾಯನಲೇಪಿತ ಮೂರ್ತಿಗಳನ್ನು ವಿಸರ್ಜನೆ ಮಾಡಿದಲ್ಲಿ ಕೆರೆ ಮತ್ತು ಬಾವಿಯ ನೀರಿನಲ್ಲಿರುವ ಅಸಂಖ್ಯೆ ಜೀವರಾಶಿಗಳಿಗೆ ಮಾರಕವಾಗಿ ಪರಿಣಮಿಸಲಿದೆ ಎಂದು ಅವರು ತಿಳಿಸಿದ್ದಾರೆ.</p>.<p>ಸಾರ್ವಜನಿಕರಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗದಂತೆ ಗಣೇಶ ವಿಗ್ರಹಗಳ ವಿಸರ್ಜನೆ ಕಾರ್ಯಕ್ರಮ ನಡೆಯುವಂತಾಗಬೇಕು. ಕೃತಕ ಹೊಂಡಗಳು ಸುಭದ್ರವಾಗಿರುವಂತೆ ನೋಡಿಕೊಳ್ಳಬೇಕು ಮತ್ತು ಹೊಂಡದ ಸುತ್ತಲು ಸಾಕಷ್ಟು ಸ್ಥಳವಕಾಶವಿರುವ ಹಾಗೆ ವ್ಯವಸ್ಥೆ ಮಾಡಬೇಕು ಎಂದು ಸೂಚಿಸಿದರು.</p>.<p>ಮಹಾನಗರ ಪಾಲಿಕೆಯ ಆಯುಕ್ತ ವಿಜಯಕುಮಾರ ಮೆಕ್ಕಳಕೆ ಅವರೊಂದಿಗೆ ನಗರದ<br />ತಾಜ್ ಬಾವಡಿ ಸೇರಿದಂತೆ ವಿವೆಧೆಡೆ ತೆರಳಿ, ಮಹಾನಗರ ಪಾಲಿಕೆಯಿಂದ ತಾತ್ಕಾಲಿಕವಾಗಿ ನಿರ್ಮಾಣ ಮಾಡಿದ ಹೊಂಡಗಳ ಹಾಗೂ ಸಂಚಾರಿ ಗಣೇಶ ಮೂರ್ತಿ ವಿಸರ್ಜನಾ ವಾಹನ ವ್ಯವಸ್ಥೆಯ ಸಮಗ್ರ ಮಾಹಿತಿ ಪಡೆದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ</strong>: ನಗರ ಸೇರಿದಂತೆ ಜಿಲ್ಲೆಯಾದ್ಯಂತ ಬುಧವಾರ ಬೆಳಿಗ್ಗೆಯಿಂದ ಸಂಜೆ ವರೆಗೂ ಗಜಾನನನ್ನು ಮನೆ, ದೇವಸ್ಥಾನ, ಶಾಲೆ, ಕಾಲೇಜು, ಸಾರ್ವಜನಿಕ ಸ್ಥಳಗಲ್ಲಿ ನಿರ್ಮಿಸಿರುವ ಪೆಂಡಾಲ್ಗಳಿಗೆ ಭಕ್ತಿ, ಭಾವದಿಂದ ಆಹ್ವಾನ ಮಾಡಿ ಪ್ರತಿಷ್ಠಾಪಿಸಲಾಯಿತು.</p>.<p>ತೆರೆದ ವಾಹನಗಳಲ್ಲಿ ಗಣೇಶನ ಮೂರ್ತಿಗಳನ್ನು ಇರಿಸಿಭಜನೆ, ಬಾಜಾ ಭಜಂತ್ರಿ, ಡೊಳ್ಳಿನ ವಾದ್ಯ, ಡಿಜೆ, ಗುಲಾಲಿನ ರಂಗು, ಟಪ್ಪಾಂಗುಚ್ಚಿ ನೃತ್ಯದೊಂದಿಗೆ ಸಾಲು, ಸಾಲಾಗಿ ಮೆರವಣಿಗೆ ಮೂಲಕ ಅದ್ಧೂರಿಯಾಗಿ ಸ್ವಾಗತಿಸಿ, ಪ್ರತಿಷ್ಠಾಪಿಸಿ ಪೂಜೆ ಸಲ್ಲಿಸಲಾಯಿತು.</p>.<p>ಗಣೇಶೋತ್ಸವ ಸಮಿತಿಗಳು ಆಕರ್ಷಕ ಪೆಂಡಾಲ್, ಮಂಟಪಗಳನ್ನುನಿರ್ಮಿಸಿ, ವೈವಿಧ್ಯಮಯವಾದ ವಿದ್ಯುತ್ ದೀಪಗಳಿಂದ ಆಲಂಕರಿಸಿದ್ದು, ನೋಡುಗರ ಗಮನ ಸೆಳೆಯುತ್ತಿವೆ. ಪಟಾಕಿ, ಸಿಡಿಮದ್ದುಗಳನ್ನು ಸಿಡಿಸಿ ಸಂಭ್ರಮಿಸಿದರು.</p>.<p>ಗುರುವಾರ ಸಾರ್ವಜನಿಕ ಗಣೇಶೋತ್ಸವ ಸಮಿತಿಗಳಿಂದ ವೈವಿಧ್ಯಮಯ ಧಾರ್ಮಿಕ, ಸಾಂಸ್ಕೃತಿಕ ಹಾಗೂ ಮನರಂಜನ ಕಾರ್ಯಕ್ರಮಗಳು ನಡೆದವು. ಭಕ್ತರು ಕುಟುಂಬ ಸಮೇತರಾಗಿ ಭೇಟಿ ನೀಡಿ, ಗಣಪನ ದರ್ಶನ ಪಡೆದರು.</p>.<p>ರಾತ್ರಿ ವೇಳೆ ಸುರಿದ ಧಾರಾಕಾರ ಮಳೆ ಮತ್ತು ವಿದ್ಯುತ್ ಕೈಕೊಟ್ಟ ಕಾರಣ ಪೆಂಡಾಲ್ಗಳಲ್ಲಿ ಸಾರ್ವಜನಿಕ ಉತ್ಸವ ಸಮಿತಿಯ ಪದಾಧಿಕಾರಿಗಳಿಗೆ ತೊಂದರೆಯಾಯಿತು.</p>.<p>ಗಣೇಶೋತ್ಸವದ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ನಗರದಲ್ಲಿ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆ.</p>.<p><strong>ಸಾರ್ವಜನಿಕರಿಗೆ ಜಿಲ್ಲಾಧಿಕಾರಿ ಮನವಿ</strong></p>.<p>ಕೆರೆ-ಕಟ್ಟೆ ಮತ್ತು ತೆರೆದ ಬಾವಿಗಳಲ್ಲಿ ಸಾರ್ವಜನಿಕರು ಗಣೇಶ ವಿಗ್ರಹಗಳ ವಿಸರ್ಜನೆ ಮಾಡಬಾರದು ಎಂದುಜಿಲ್ಲಾಧಿಕಾರಿ ವಿಜಯ ಮಹಾಂತೇಶ್ ಮನವಿ ಮಾಡಿದ್ದಾರೆ.</p>.<p>ಬಣ್ಣ ಮತ್ತು ರಸಾಯನಲೇಪಿತ ಮೂರ್ತಿಗಳನ್ನು ವಿಸರ್ಜನೆ ಮಾಡಿದಲ್ಲಿ ಕೆರೆ ಮತ್ತು ಬಾವಿಯ ನೀರಿನಲ್ಲಿರುವ ಅಸಂಖ್ಯೆ ಜೀವರಾಶಿಗಳಿಗೆ ಮಾರಕವಾಗಿ ಪರಿಣಮಿಸಲಿದೆ ಎಂದು ಅವರು ತಿಳಿಸಿದ್ದಾರೆ.</p>.<p>ಸಾರ್ವಜನಿಕರಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗದಂತೆ ಗಣೇಶ ವಿಗ್ರಹಗಳ ವಿಸರ್ಜನೆ ಕಾರ್ಯಕ್ರಮ ನಡೆಯುವಂತಾಗಬೇಕು. ಕೃತಕ ಹೊಂಡಗಳು ಸುಭದ್ರವಾಗಿರುವಂತೆ ನೋಡಿಕೊಳ್ಳಬೇಕು ಮತ್ತು ಹೊಂಡದ ಸುತ್ತಲು ಸಾಕಷ್ಟು ಸ್ಥಳವಕಾಶವಿರುವ ಹಾಗೆ ವ್ಯವಸ್ಥೆ ಮಾಡಬೇಕು ಎಂದು ಸೂಚಿಸಿದರು.</p>.<p>ಮಹಾನಗರ ಪಾಲಿಕೆಯ ಆಯುಕ್ತ ವಿಜಯಕುಮಾರ ಮೆಕ್ಕಳಕೆ ಅವರೊಂದಿಗೆ ನಗರದ<br />ತಾಜ್ ಬಾವಡಿ ಸೇರಿದಂತೆ ವಿವೆಧೆಡೆ ತೆರಳಿ, ಮಹಾನಗರ ಪಾಲಿಕೆಯಿಂದ ತಾತ್ಕಾಲಿಕವಾಗಿ ನಿರ್ಮಾಣ ಮಾಡಿದ ಹೊಂಡಗಳ ಹಾಗೂ ಸಂಚಾರಿ ಗಣೇಶ ಮೂರ್ತಿ ವಿಸರ್ಜನಾ ವಾಹನ ವ್ಯವಸ್ಥೆಯ ಸಮಗ್ರ ಮಾಹಿತಿ ಪಡೆದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>