ವಿಜಯಪುರ: ಶಿಕ್ಷಕರು, ಉಪನ್ಯಾಸಕರು, ಪ್ರಾಧ್ಯಾಪಕರು ಹಾಗೂ ಶಿಕ್ಷಣ ಇಲಾಖೆ ಸಿಬ್ಬಂದಿಯನ್ನು ಕೊರೊನಾ ವಾರಿಯರ್ಸ್ ಎಂದು ಪರಿಗಣಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಅರುಣ ಶಹಾಪೂರ ಅವರು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಬೆಂಗಳೂರಿನಲ್ಲಿ ಆರೋಗ್ಯ ಸಚಿವ ಡಾ.ಸುಧಾರಕರ್ ಅವರನ್ನುಶಹಾಪೂರ ಸೋಮವಾರ ಭೇಟಿ ಮಾಡಿ ಈ ಸಂಬಂಧ ಮನವಿ ಸಲ್ಲಿಸಿದ್ದಾರೆ.
ಶಿಕ್ಷಣ ಇಲಾಖೆಯ ಶಿಕ್ಷಕರು, ಉಪನ್ಯಾಸಕರು, ಪ್ರಾಧ್ಯಾಪಕರು ಹಾಗೂ ಬೋಧಕೇತರ ಸಿಬ್ಬಂದಿಯನ್ನು ಕೋವಿಡ್ ಕಾರ್ಯಕ್ಕಾಗಿ ತೊಡಗಿಸಿಕೊಳ್ಳಲಾಗಿದೆ. ಆದರೆ, ಅವರನ್ನು ಇದುವರೆಗೂ ಕೊರೊನಾ ವಾರಿಯರ್ಸ್ ಪರಿಗಣಿಸಿಲ್ಲ ಎಂದು ಹೇಳಿದ್ದಾರೆ.
ಬಹಳಷ್ಟು ಶಿಕ್ಷಕರು, ಶಿಕ್ಷಣ ಇಲಾಖೆ ಸಿಬ್ಬಂದಿ ಕೋವಿಡ್ ಸೋಂಕಿನಿಂದಾಗಿ ಸಾವಿಗೀಡಾಗಿದ್ದಾರೆ. ಆಗುತ್ತಲೂ ಇದ್ದಾರೆ. ಹೀಗಾಗಿ ಅವರನ್ನು ಕೊರೊನಾ ವಾರಿಯರ್ಸ್ ಎಂದು ಪರಿಗಣಿಸಿ, ಅವರಿಗೆ ಅಗತ್ಯವಾದ ಸೌಲಭ್ಯಗಳನ್ನು ನೀಡಬೇಕು ಎಂದು ಮನವಿ ಮಾಡಿದ್ದಾರೆ.