<p><strong>ವಿಜಯಪುರ: </strong>ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಮದುವೆ ಮತ್ತಿತರರ ಶುಭ ಕಾರ್ಯಕ್ರಮಗಳನ್ನು ನಡೆಸಲು ಅನುಕೂಲವಾಗುವಂತೆ ನಗರದಲ್ಲಿ ಪೊಲೀಸ್ ಕಲ್ಯಾಣ ಮಂಟಪ ಶೀಘ್ರ ನಿರ್ಮಾಣ ಮಾಡಲಾಗುವುದು ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಭರವಸೆ ನೀಡಿದರು.</p>.<p>ನಗರದಲ್ಲಿ ಗುರುವಾರ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.</p>.<p>ಬೆಂಗಳೂರು ಮಾದರಿಯಲ್ಲಿ ವಿಜಯಪುರದಲ್ಲೂ ಪೊಲೀಸ್ ತುರ್ತು ದೂರವಾಣಿ ಸಂಖ್ಯೆ 112 ಆರಂಭಿಸಲಾಗುವುದು ಎಂದು ಅವರು ಹೇಳಿದರು.</p>.<p>ಪೊಲೀಸ್ ಇಲಾಖೆ ಕಟ್ಟಡ, ಕ್ವಾಟ್ರರ್ಸ್ ನಿರ್ಮಾಣ, ಜಿಲ್ಲೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ, ಬಡ್ತಿ ಸೇರಿದಂತೆ ಮೂಲಸೌಲಭ್ಯ ಒದಗಿಸಲು ಆದ್ಯತೆ ನೀಡಲಾಗುವುದು ಎಂದು ತಿಳಿಸಿದರು.</p>.<p>ಪೊಲೀಸರು ತಮ್ಮ ದೈನಿಂದನ ಕಾರ್ಯಗಳ ಜೊತೆಗೆ ಕೋವಿಡ್ ವಾರಿಯರ್ಸ್ಗಳಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ. ಹೀಗಾಗಿ ಅವರಿಗೆ ವಿಶೇಷವಾಗಿ ಅಭಿನಂದನೆ ಸಲ್ಲಿಸುತ್ತೇನೆ ಎಂದರು.</p>.<p>ಕೋವಿಡ್ ಸಂದರ್ಭದಲ್ಲಿಪೊಲೀಸರು ಹಳೆಯ ಪದ್ಧತಿಯಂತೆ ಕಾರ್ಯ ನಿರ್ವಹಿಸಲು ಆಗದು, ಹೀಗಾಗಿ ಅಪರಾಧಿಗಳನ್ನು ಬಂಧಿಸಿದ ಬಳಿಕ ಕೋರ್ಟ್ಗೆ ಹಾಜರು ಪಡಿಸುವ ಬದಲು ವಿಡಿಯೋ ಸಂವಾದದ ಮೂಲಕ ಹಾಜರು ಪಡಿಸಲಾಗುತ್ತಿದೆ ಎಂದು ಹೇಳಿದರು.</p>.<p>ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನುಮಪ್ ಅಗರವಾಲ್, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಮ ಅರಸಿದ್ದಿ ಮತ್ತಿತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ: </strong>ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಮದುವೆ ಮತ್ತಿತರರ ಶುಭ ಕಾರ್ಯಕ್ರಮಗಳನ್ನು ನಡೆಸಲು ಅನುಕೂಲವಾಗುವಂತೆ ನಗರದಲ್ಲಿ ಪೊಲೀಸ್ ಕಲ್ಯಾಣ ಮಂಟಪ ಶೀಘ್ರ ನಿರ್ಮಾಣ ಮಾಡಲಾಗುವುದು ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಭರವಸೆ ನೀಡಿದರು.</p>.<p>ನಗರದಲ್ಲಿ ಗುರುವಾರ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.</p>.<p>ಬೆಂಗಳೂರು ಮಾದರಿಯಲ್ಲಿ ವಿಜಯಪುರದಲ್ಲೂ ಪೊಲೀಸ್ ತುರ್ತು ದೂರವಾಣಿ ಸಂಖ್ಯೆ 112 ಆರಂಭಿಸಲಾಗುವುದು ಎಂದು ಅವರು ಹೇಳಿದರು.</p>.<p>ಪೊಲೀಸ್ ಇಲಾಖೆ ಕಟ್ಟಡ, ಕ್ವಾಟ್ರರ್ಸ್ ನಿರ್ಮಾಣ, ಜಿಲ್ಲೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ, ಬಡ್ತಿ ಸೇರಿದಂತೆ ಮೂಲಸೌಲಭ್ಯ ಒದಗಿಸಲು ಆದ್ಯತೆ ನೀಡಲಾಗುವುದು ಎಂದು ತಿಳಿಸಿದರು.</p>.<p>ಪೊಲೀಸರು ತಮ್ಮ ದೈನಿಂದನ ಕಾರ್ಯಗಳ ಜೊತೆಗೆ ಕೋವಿಡ್ ವಾರಿಯರ್ಸ್ಗಳಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ. ಹೀಗಾಗಿ ಅವರಿಗೆ ವಿಶೇಷವಾಗಿ ಅಭಿನಂದನೆ ಸಲ್ಲಿಸುತ್ತೇನೆ ಎಂದರು.</p>.<p>ಕೋವಿಡ್ ಸಂದರ್ಭದಲ್ಲಿಪೊಲೀಸರು ಹಳೆಯ ಪದ್ಧತಿಯಂತೆ ಕಾರ್ಯ ನಿರ್ವಹಿಸಲು ಆಗದು, ಹೀಗಾಗಿ ಅಪರಾಧಿಗಳನ್ನು ಬಂಧಿಸಿದ ಬಳಿಕ ಕೋರ್ಟ್ಗೆ ಹಾಜರು ಪಡಿಸುವ ಬದಲು ವಿಡಿಯೋ ಸಂವಾದದ ಮೂಲಕ ಹಾಜರು ಪಡಿಸಲಾಗುತ್ತಿದೆ ಎಂದು ಹೇಳಿದರು.</p>.<p>ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನುಮಪ್ ಅಗರವಾಲ್, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಮ ಅರಸಿದ್ದಿ ಮತ್ತಿತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>