<p>ವಿಜಯಪುರ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಟ್ಟಡ ನಿರ್ಮಾಣ ಕಾರ್ಮಿಕರು ಕರ್ನಾಟಕ ರಾಜ್ಯ ಸಂಯುಕ್ತ ಕಟ್ಟಡ ಕಾರ್ಮಿಕರ ಸಂಘದ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ಮಾಡಿ, ಮನವಿ ಸಲ್ಲಿಸಿದರು.</p>.<p>ಜಿಲ್ಲಾ ಸಂಚಾಲಕ ಸುನೀಲ ಸಿದ್ರಾಮಶೆಟ್ಟಿ ಮಾತನಾಡಿ, ಕೋವಿಡ್ ಎರಡನೇ ಅಲೆಯ ಲಾಕ್ಡೌನ್ ಪರಿಹಾರವಾಗಿ ₹3 ಸಾವಿರ ಘೋಷಣೆಯಾಗಿದ್ದರೂ ಬಹುಪಾಲು ಕಾರ್ಮಿಕರಿಗೆ ಹಣ ವರ್ಗಾವಣೆ ಆಗಿಲ್ಲ. ಆಧಾರ್ ನಂಬರ್ ಆಧರಿಸಿ ಪಾವತಿ ಮಾಡುತ್ತಿರುವುದರಿಂದ ಆನೇಕ ತಾಂತ್ರಿಕ ತೊಂದರೆ ತಲೆದೋರಿ ಫಲಾನುಭವಿಗಳ ಕೈಗೆ ಹಣ ಸೇರುತ್ತಿಲ್ಲ ಎಂದು ಆರೋಪಿಸಿದರು.</p>.<p>ಬಹಳ ಮಂದಿ ಕಾರ್ಮಿಕರು ತಮ್ಮ ಆಧಾರ್ ಸಂಖ್ಯೆಯನ್ನು ಬ್ಯಾಂಕ್ ಖಾತೆಗೆ ಜೋಡಣೆ ಮಾಡಿಲ್ಲ. ಇಂತವರಿಗೆ ನಗದು ವರ್ಗಾವಣೆ ಆಗಿಲ್ಲ. ಆಧಾರ್ ಜೋಡಣೆ ಮಾಡಿದಿದ್ದರು ಪರಿಹಾರ ವಿತರಣೆ ಮಾಡಬೇಕು ಎಂದು ಆಗ್ರಹಿಸಿದರು.</p>.<p>ಲಾಕ್ಡೌನ್ ಹಿನ್ನೆಲೆಯಲ್ಲಿ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಆಹಾರ ಕಿಟ್ ನೀಡುವ ವಿಚಾರದಲ್ಲಿ ಸಗಟು ಮಾರಾಟ ದರದ ದುಪ್ಪಟ್ಟು ಹಣ ನೀಡಿ ಖರೀದಿ ಮಾಡಿರುವುದು, ಕಳಪೆ ಆಹಾರ ಸಾಮಗ್ರಿ ನೀಡಲಾಗಿದೆ ಎಂದು ಆರೋಪಿಸಿದರು.</p>.<p>ವೈದ್ಯಕೀಯ ವೆಚ್ಚ ಸಂಪೂರ್ಣ ಭರಿಸಬೇಕು, ಮದುವೆ ಸಹಾಯಧನ ವಿಳಂಬವಾಗುತ್ತಿದ್ದು ತಕ್ಷಣ ನೀಡಬೇಕು, ಸಹಜ ಮರಣ ಪರಿಹಾರದ ಮೊತ್ತ ಹೆಚ್ಚಿಸಬೇಕು, ಹೆರಿಗೆ ಭತ್ಯೆಯನ್ನು ಪುರುಷ ಫಲಾನುಭವಿಯ ಪತ್ನಿಗೂ ವಿಸ್ತರಿಸಬೇಕು, ಮನೆ ನಿರ್ಮಾಣಕ್ಕೆ ₹ 5 ಲಕ್ಷ ಸಹಾಯಧನ ನೀಡಬೇಕು ಎಂದು ಆಗ್ರಹಿಸಿದರು.</p>.<p>ಜಿಲ್ಲಾ ಸಹಸಂಚಾಲಕಿ ಮಹಾದೇವಿ ಧರ್ಮಶೆಟ್ಟಿ, ಆಕಾಶ ರಾಮತೀರ್ಥ, ಫಾತಿಮಾ ಶೇಖ್, ನೂರ್ಜಾನ್ ಮುಜಾವರ, ಮಹಮ್ಮದ್ ನದಾಫ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.</p>.<p>****</p>.<p>ಅರ್ಹ ಕಾರ್ಮಿಕರಿಗೆ ಆಹಾರದ ಕಿಟ್ ಸಿಗುತ್ತಿಲ್ಲ, ಇದನ್ನು ಕಾರ್ಮಿಕ ಇಲಾಖೆ ಅಥವಾ ಕಾರ್ಮಿಕ ಸಂಘಗಳ ಮೂಲಕ ವಿತರಣೆ ಮಾಡಬೇಕು<br />–ಮಹಾದೇವಿ ಧರ್ಮಶೆಟ್ಟಿ, ಜಿಲ್ಲಾ ಸಹಸಂಚಾಲಕಿ<br />ಕರ್ನಾಟಕ ರಾಜ್ಯ ಸಂಯುಕ್ತ ಕಟ್ಟಡ ಕಾರ್ಮಿಕರ ಸಂಘ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ವಿಜಯಪುರ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಟ್ಟಡ ನಿರ್ಮಾಣ ಕಾರ್ಮಿಕರು ಕರ್ನಾಟಕ ರಾಜ್ಯ ಸಂಯುಕ್ತ ಕಟ್ಟಡ ಕಾರ್ಮಿಕರ ಸಂಘದ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ಮಾಡಿ, ಮನವಿ ಸಲ್ಲಿಸಿದರು.</p>.<p>ಜಿಲ್ಲಾ ಸಂಚಾಲಕ ಸುನೀಲ ಸಿದ್ರಾಮಶೆಟ್ಟಿ ಮಾತನಾಡಿ, ಕೋವಿಡ್ ಎರಡನೇ ಅಲೆಯ ಲಾಕ್ಡೌನ್ ಪರಿಹಾರವಾಗಿ ₹3 ಸಾವಿರ ಘೋಷಣೆಯಾಗಿದ್ದರೂ ಬಹುಪಾಲು ಕಾರ್ಮಿಕರಿಗೆ ಹಣ ವರ್ಗಾವಣೆ ಆಗಿಲ್ಲ. ಆಧಾರ್ ನಂಬರ್ ಆಧರಿಸಿ ಪಾವತಿ ಮಾಡುತ್ತಿರುವುದರಿಂದ ಆನೇಕ ತಾಂತ್ರಿಕ ತೊಂದರೆ ತಲೆದೋರಿ ಫಲಾನುಭವಿಗಳ ಕೈಗೆ ಹಣ ಸೇರುತ್ತಿಲ್ಲ ಎಂದು ಆರೋಪಿಸಿದರು.</p>.<p>ಬಹಳ ಮಂದಿ ಕಾರ್ಮಿಕರು ತಮ್ಮ ಆಧಾರ್ ಸಂಖ್ಯೆಯನ್ನು ಬ್ಯಾಂಕ್ ಖಾತೆಗೆ ಜೋಡಣೆ ಮಾಡಿಲ್ಲ. ಇಂತವರಿಗೆ ನಗದು ವರ್ಗಾವಣೆ ಆಗಿಲ್ಲ. ಆಧಾರ್ ಜೋಡಣೆ ಮಾಡಿದಿದ್ದರು ಪರಿಹಾರ ವಿತರಣೆ ಮಾಡಬೇಕು ಎಂದು ಆಗ್ರಹಿಸಿದರು.</p>.<p>ಲಾಕ್ಡೌನ್ ಹಿನ್ನೆಲೆಯಲ್ಲಿ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಆಹಾರ ಕಿಟ್ ನೀಡುವ ವಿಚಾರದಲ್ಲಿ ಸಗಟು ಮಾರಾಟ ದರದ ದುಪ್ಪಟ್ಟು ಹಣ ನೀಡಿ ಖರೀದಿ ಮಾಡಿರುವುದು, ಕಳಪೆ ಆಹಾರ ಸಾಮಗ್ರಿ ನೀಡಲಾಗಿದೆ ಎಂದು ಆರೋಪಿಸಿದರು.</p>.<p>ವೈದ್ಯಕೀಯ ವೆಚ್ಚ ಸಂಪೂರ್ಣ ಭರಿಸಬೇಕು, ಮದುವೆ ಸಹಾಯಧನ ವಿಳಂಬವಾಗುತ್ತಿದ್ದು ತಕ್ಷಣ ನೀಡಬೇಕು, ಸಹಜ ಮರಣ ಪರಿಹಾರದ ಮೊತ್ತ ಹೆಚ್ಚಿಸಬೇಕು, ಹೆರಿಗೆ ಭತ್ಯೆಯನ್ನು ಪುರುಷ ಫಲಾನುಭವಿಯ ಪತ್ನಿಗೂ ವಿಸ್ತರಿಸಬೇಕು, ಮನೆ ನಿರ್ಮಾಣಕ್ಕೆ ₹ 5 ಲಕ್ಷ ಸಹಾಯಧನ ನೀಡಬೇಕು ಎಂದು ಆಗ್ರಹಿಸಿದರು.</p>.<p>ಜಿಲ್ಲಾ ಸಹಸಂಚಾಲಕಿ ಮಹಾದೇವಿ ಧರ್ಮಶೆಟ್ಟಿ, ಆಕಾಶ ರಾಮತೀರ್ಥ, ಫಾತಿಮಾ ಶೇಖ್, ನೂರ್ಜಾನ್ ಮುಜಾವರ, ಮಹಮ್ಮದ್ ನದಾಫ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.</p>.<p>****</p>.<p>ಅರ್ಹ ಕಾರ್ಮಿಕರಿಗೆ ಆಹಾರದ ಕಿಟ್ ಸಿಗುತ್ತಿಲ್ಲ, ಇದನ್ನು ಕಾರ್ಮಿಕ ಇಲಾಖೆ ಅಥವಾ ಕಾರ್ಮಿಕ ಸಂಘಗಳ ಮೂಲಕ ವಿತರಣೆ ಮಾಡಬೇಕು<br />–ಮಹಾದೇವಿ ಧರ್ಮಶೆಟ್ಟಿ, ಜಿಲ್ಲಾ ಸಹಸಂಚಾಲಕಿ<br />ಕರ್ನಾಟಕ ರಾಜ್ಯ ಸಂಯುಕ್ತ ಕಟ್ಟಡ ಕಾರ್ಮಿಕರ ಸಂಘ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>