<p><strong>ವಿಜಯಪುರ: </strong>ನಗರ ಸೇರಿದಂತೆ ಜಿಲ್ಲೆಯ ವಿವಿಧೆಡೆ ಸೋಮವಾರವೂ ಸಾಧಾರಣ ಮಳೆಯಾಗಿದೆ.</p>.<p>ಸೋಮವಾರ ಗುಡುಗು, ಸಿಡಿಲಿನ ಆರ್ಭಟ ಅಧಿಕವಾಗಿತ್ತು. ಸಿಡಿಲಿಗೆದೇವರಹಿಪ್ಪರಗಿ ತಾಲ್ಲೂಕಿನ ಪಡಗಾನೂರ ಗ್ರಾಮದ ಲಕ್ಷ್ಮೀಬಾಯಿ ಅರ್ಜುನ ತಳವಾರ(50) ಜೀವ ತೆತ್ತಿದ್ದಾರೆ. ಮುದ್ದೇಬಿಹಾಳ ತಾಲ್ಲೂಕಿನ ಸಿದ್ದಾಪೂರ ಪಿ.ಟಿ.ಗ್ರಾಮದಲ್ಲಿ ಗಿಡಕ್ಕೆ ಕಟ್ಟಿದ್ದ ಎಮ್ಮೆಗೆ ಸಿಡಿಲು ಬಡಿದು ಸಾವಿಗೀಡಾಗಿದೆ.</p>.<p>ವಿಜಯಪುರ ನಗರದಲ್ಲಿ ಗುಡುಗು, ಸಿಡಿಲಿನೊಂದಿಗೆ ಸಾಧಾರಣ ಮಳೆಯಾಯಿತು. ಯುಗಾದಿ ಖರೀದಿಗೆ ಅಡಚಣೆಯಾಯಿತು. ತಿಕೋಟಾ ಭಾಗದಲ್ಲಿ ದ್ರಾಕ್ಷಿ ಬೆಳೆಗಾರರಿಗೆ ಮಳೆಯಿಂದ ಹಾನಿಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ: </strong>ನಗರ ಸೇರಿದಂತೆ ಜಿಲ್ಲೆಯ ವಿವಿಧೆಡೆ ಸೋಮವಾರವೂ ಸಾಧಾರಣ ಮಳೆಯಾಗಿದೆ.</p>.<p>ಸೋಮವಾರ ಗುಡುಗು, ಸಿಡಿಲಿನ ಆರ್ಭಟ ಅಧಿಕವಾಗಿತ್ತು. ಸಿಡಿಲಿಗೆದೇವರಹಿಪ್ಪರಗಿ ತಾಲ್ಲೂಕಿನ ಪಡಗಾನೂರ ಗ್ರಾಮದ ಲಕ್ಷ್ಮೀಬಾಯಿ ಅರ್ಜುನ ತಳವಾರ(50) ಜೀವ ತೆತ್ತಿದ್ದಾರೆ. ಮುದ್ದೇಬಿಹಾಳ ತಾಲ್ಲೂಕಿನ ಸಿದ್ದಾಪೂರ ಪಿ.ಟಿ.ಗ್ರಾಮದಲ್ಲಿ ಗಿಡಕ್ಕೆ ಕಟ್ಟಿದ್ದ ಎಮ್ಮೆಗೆ ಸಿಡಿಲು ಬಡಿದು ಸಾವಿಗೀಡಾಗಿದೆ.</p>.<p>ವಿಜಯಪುರ ನಗರದಲ್ಲಿ ಗುಡುಗು, ಸಿಡಿಲಿನೊಂದಿಗೆ ಸಾಧಾರಣ ಮಳೆಯಾಯಿತು. ಯುಗಾದಿ ಖರೀದಿಗೆ ಅಡಚಣೆಯಾಯಿತು. ತಿಕೋಟಾ ಭಾಗದಲ್ಲಿ ದ್ರಾಕ್ಷಿ ಬೆಳೆಗಾರರಿಗೆ ಮಳೆಯಿಂದ ಹಾನಿಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>