ದೇಶದಲ್ಲಿ ಕೊರೊನಾ ಸೋಂಕು ದಿನೇ ದಿನೇ ಉಲ್ಬಣವಾಗುತ್ತಿದೆ. ಕೋವಿಡ್ ಪರಿಸ್ಥಿತಿ ಗಂಭೀರ ಆಗುತ್ತಿರುವ ಹೊತ್ತಿನಲ್ಲಿ ಜನರ ಜೀವ ಉಳಿಸಲು ಹೆಣಗಾಡುತ್ತಿರುವ ವೈದ್ಯರು, ತಳಮಟ್ಟದ ಆಶಾ ಕಾರ್ಯಕರ್ತೆಯರು, ಅಂಬುಲೆನ್ಸ್ ಚಾಲಕರು, ಆರೋಗ್ಯ ಸಿಬ್ಬಂದಿಯಂತಹ ಬಡಪಾಯಿಗಳಿಗೆ ಇನ್ನು ವಿಮೆ ಭದ್ರತೆ ಇಲ್ಲದಂತಾಗಿರುವುದು ಖಂಡನೀಯ ಎಂದು ಸಂಘ ತಿಳಿಸಿದೆ.