‘ಮನೆಯಿಂದ ಹೊರ ಬರದ ರೀತಿಯಲ್ಲಿ ಕಟಿಗಿ, ಮುಳ್ಳು ಕಟ್ಟಿದರು. ಆರೈಕೆ ಮಾಡುವ ಮಗನಿಗೂ ಸೋಂಕು ಬಂದಿದ್ದರಿಂದ ಅವನನ್ನು ಕೋವಿಡ್ ಸೆಂಟರ್ ಗೆ ಸೇರಿಸಿದರು. ಆಗ ನನ್ನ ಆರೈಕೆಗೆ ಬಂದವನೇ ನನ್ನ ಮಗಳ ಮಗ. 14 ದಿನಗಳ ಕಾಲ ನನ್ನನ್ನು ಮೊಮ್ಮಗ ಮಗುವಿನಂತೆ ಆರೈಕೆ ಮಾಡಿದ. ಜನರಾಡುವ ಮಾತುಗಳಿಗೆ ಕಿವಿಗೊಡಲಿಲ್ಲ. ಸಕಾರಾತ್ಮಕ ಭಾವನೆ, ಗಟ್ಟಿತನವೇ ಕೊರೊನಾ ಸೋಲಿಸುವ ಅಸ್ತ್ರವಾಯಿತು’ ಎಂದರು.