<p><strong>ವಿಜಯಪುರ</strong>: ಕೊರೊನಾ ಸೋಂಕು ಕುರಿತಂತೆ ಸಾರ್ವಜನಿಕರು ಆತಂಕ ಪಡಬಾರದು, ಕೊರೊನಾ ಲಸಿಕೆ ಬಗ್ಗೆ ಅಪಪ್ರಚಾರ, ಸುಳ್ಳು ವದಂತಿಯನ್ನು ನಂಬಬಾರದು, ಲಸಿಕೆ ಪಡೆದು ಸೋಂಕು ಹರಡದಂತೆ ತಡೆಗಟ್ಟಲು ಸಹಕರಿಸಬೇಕು ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.</p>.<p>ನಗರ ರಾಜಕುಮಾರ್ ಲೇಔಟ್ನ ಶ್ರೀ ಸಿದ್ಧಿವಿನಾಯಕ ದೇವಸ್ಥಾನ ಆವರಣ ಹಾಗೂ ಭೂತನಾಳ ತಾಂಡಾದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಉಚಿತ ಕೋವಿಡ್ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>ಮುಂಜಾಗೃತಾ ದೃಷ್ಟಿಯಿಂದ ಕೆಮ್ಮುವಾಗ ಮತ್ತು ಸೀನುವಾಗ ಕರವಸ್ತ್ರವನ್ನು ಬಳಸಿ, ಸಾರ್ವಜನಿಕ ಸ್ಥಳದಲ್ಲಿ ಉಗಳಬಾರದು, ಪರಸ್ಪರ ಅಂತರ ಕಾದುಕೊಳ್ಳಬೇಕು, ಮಾಸ್ಕ ಧರಿಸಿ, ಕೈಗಳನ್ನು ಆಗಾಗ ಸೋಪಿನಿಂದ ತೊಳೆಯಿರಿ, ಸ್ವಚ್ಛತೆಯನ್ನು ಕಾಪಾಡಿಕೊಳ್ಳಿ ಎಂದು ಸಲಹೆ ನೀಡಿದರು.</p>.<p>ತೀವ್ರ ಜ್ವರ, ನೆಗಡಿ, ಕೆಮ್ಮು, ಉಸಿರಾಟದ ತೊಂದರೆಯಂತಹ ಲಕ್ಷಣಗಳು ಕಂಡುಬಂದರೆ ಸಮೀಪದ ಆರೋಗ್ಯ ಕೇಂದ್ರಗಳಿಗೆ ತೆರಳಿ ವೈದ್ಯರಲ್ಲಿ ಪರೀಕ್ಷೆ ಮಾಡಿಸಿಕೊಳ್ಳಬೇಕು. ಜಿಲ್ಲಾ ಆಸ್ಪತ್ರೆಯಲ್ಲಿ ಉಚಿತವಾಗಿ ಆರ್.ಟಿ.ಪಿ.ಸಿ.ಆರ್ ಹಾಗೂ ಎಚ್.ಆರ್.ಸಿ.ಟಿ ಸ್ಕ್ಯಾನ್ ಪರೀಕ್ಷೆ ಮಾಡಿಸಿಕೊಳ್ಳಿ, ವೈದ್ಯರ ಸಲಹೆಯಂತೆ ಚಿಕಿತ್ಸೆ ಪಡೆಯಿರಿ ಎಂದರು.</p>.<p>ಕೋವಿಡ್ ವಾರಿಯರ್ಸ್ಗಳಾದ ವೈದ್ಯರು, ಸ್ವಚ್ಛತಾ ಕರ್ಮಿಗಳು, ಪೊಲೀಸ್ ಸಿಬ್ಬಂದಿಯನ್ನು ಗೌರವದಿಂದ ಕಾಣಿ, ಕೋವಿಡ್ ಮಾರ್ಗಸೂಚಿ ಮುರಿದು ಪೊಲೀಸ್ ಸಿಬ್ಬಂದಿಯೊಂದಿಗೆ ವಾದಕ್ಕಿಳಿಯದೇ ಎಲ್ಲರೂ ಸಹ ಜವಾಬ್ದಾರಿಯುತ ನಡೆದುಕೊಳ್ಳಬೇಕು ಎಂದರು.</p>.<p>ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶ್ರೀಹರಿ ಗೊಳಸಂಗಿ, ಸಂಜಯ್ ಪಾಟೀಲ ಕನಮಡಿ, ಚಂದ್ರು ಚೌಧರಿ, ಸಂತೋಷ ಪಾಟೀಲ, ಡಾ.ಜನ್ನತ್ ಮುಶ್ರಿಫ್, ಡಾ.ಉಮೇಶ ನಾಲಾ, ಚಿದಾನಂದ ಹಿರೇಮಠ, ಎಂ.ಎಸ್.ರುದ್ರಗೌಡ್ರ, ಆರ್.ಎಸ್.ಮನಗೂಳಿ, ಆರ್.ಎಸ್.ಕೋಳಿ, ರವಿ ದೇಶಪಾಂಡೆ, ರಾಜಶೇಖರ ಭಜಂತ್ರಿ, ನಾಗರಾಜ ಮುಳವಾಡ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ</strong>: ಕೊರೊನಾ ಸೋಂಕು ಕುರಿತಂತೆ ಸಾರ್ವಜನಿಕರು ಆತಂಕ ಪಡಬಾರದು, ಕೊರೊನಾ ಲಸಿಕೆ ಬಗ್ಗೆ ಅಪಪ್ರಚಾರ, ಸುಳ್ಳು ವದಂತಿಯನ್ನು ನಂಬಬಾರದು, ಲಸಿಕೆ ಪಡೆದು ಸೋಂಕು ಹರಡದಂತೆ ತಡೆಗಟ್ಟಲು ಸಹಕರಿಸಬೇಕು ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.</p>.<p>ನಗರ ರಾಜಕುಮಾರ್ ಲೇಔಟ್ನ ಶ್ರೀ ಸಿದ್ಧಿವಿನಾಯಕ ದೇವಸ್ಥಾನ ಆವರಣ ಹಾಗೂ ಭೂತನಾಳ ತಾಂಡಾದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಉಚಿತ ಕೋವಿಡ್ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>ಮುಂಜಾಗೃತಾ ದೃಷ್ಟಿಯಿಂದ ಕೆಮ್ಮುವಾಗ ಮತ್ತು ಸೀನುವಾಗ ಕರವಸ್ತ್ರವನ್ನು ಬಳಸಿ, ಸಾರ್ವಜನಿಕ ಸ್ಥಳದಲ್ಲಿ ಉಗಳಬಾರದು, ಪರಸ್ಪರ ಅಂತರ ಕಾದುಕೊಳ್ಳಬೇಕು, ಮಾಸ್ಕ ಧರಿಸಿ, ಕೈಗಳನ್ನು ಆಗಾಗ ಸೋಪಿನಿಂದ ತೊಳೆಯಿರಿ, ಸ್ವಚ್ಛತೆಯನ್ನು ಕಾಪಾಡಿಕೊಳ್ಳಿ ಎಂದು ಸಲಹೆ ನೀಡಿದರು.</p>.<p>ತೀವ್ರ ಜ್ವರ, ನೆಗಡಿ, ಕೆಮ್ಮು, ಉಸಿರಾಟದ ತೊಂದರೆಯಂತಹ ಲಕ್ಷಣಗಳು ಕಂಡುಬಂದರೆ ಸಮೀಪದ ಆರೋಗ್ಯ ಕೇಂದ್ರಗಳಿಗೆ ತೆರಳಿ ವೈದ್ಯರಲ್ಲಿ ಪರೀಕ್ಷೆ ಮಾಡಿಸಿಕೊಳ್ಳಬೇಕು. ಜಿಲ್ಲಾ ಆಸ್ಪತ್ರೆಯಲ್ಲಿ ಉಚಿತವಾಗಿ ಆರ್.ಟಿ.ಪಿ.ಸಿ.ಆರ್ ಹಾಗೂ ಎಚ್.ಆರ್.ಸಿ.ಟಿ ಸ್ಕ್ಯಾನ್ ಪರೀಕ್ಷೆ ಮಾಡಿಸಿಕೊಳ್ಳಿ, ವೈದ್ಯರ ಸಲಹೆಯಂತೆ ಚಿಕಿತ್ಸೆ ಪಡೆಯಿರಿ ಎಂದರು.</p>.<p>ಕೋವಿಡ್ ವಾರಿಯರ್ಸ್ಗಳಾದ ವೈದ್ಯರು, ಸ್ವಚ್ಛತಾ ಕರ್ಮಿಗಳು, ಪೊಲೀಸ್ ಸಿಬ್ಬಂದಿಯನ್ನು ಗೌರವದಿಂದ ಕಾಣಿ, ಕೋವಿಡ್ ಮಾರ್ಗಸೂಚಿ ಮುರಿದು ಪೊಲೀಸ್ ಸಿಬ್ಬಂದಿಯೊಂದಿಗೆ ವಾದಕ್ಕಿಳಿಯದೇ ಎಲ್ಲರೂ ಸಹ ಜವಾಬ್ದಾರಿಯುತ ನಡೆದುಕೊಳ್ಳಬೇಕು ಎಂದರು.</p>.<p>ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶ್ರೀಹರಿ ಗೊಳಸಂಗಿ, ಸಂಜಯ್ ಪಾಟೀಲ ಕನಮಡಿ, ಚಂದ್ರು ಚೌಧರಿ, ಸಂತೋಷ ಪಾಟೀಲ, ಡಾ.ಜನ್ನತ್ ಮುಶ್ರಿಫ್, ಡಾ.ಉಮೇಶ ನಾಲಾ, ಚಿದಾನಂದ ಹಿರೇಮಠ, ಎಂ.ಎಸ್.ರುದ್ರಗೌಡ್ರ, ಆರ್.ಎಸ್.ಮನಗೂಳಿ, ಆರ್.ಎಸ್.ಕೋಳಿ, ರವಿ ದೇಶಪಾಂಡೆ, ರಾಜಶೇಖರ ಭಜಂತ್ರಿ, ನಾಗರಾಜ ಮುಳವಾಡ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>