ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊರೊನಾ ಸೋಂಕಿತರ ಸಂಖ್ಯೆ 70ಕ್ಕೆ ಏರಿಕೆ

ಇಬ್ಬರು ರೋಗಿಗಳು ಗುಣಮುಖ ಆಸ್ಪತ್ರೆಯಿಂದ ಬಿಡುಗಡೆ
Last Updated 25 ಮೇ 2020, 14:28 IST
ಅಕ್ಷರ ಗಾತ್ರ

ವಿಜಯಪುರ: ಜಿಲ್ಲೆಯಲ್ಲಿ ಭಾನುವಾರ 28 ವರ್ಷ ವಯಸ್ಸಿನ ಮಹಿಳೆ(ಪಿ2136)ಯೊಬ್ಬರಿಗೆ ಕೋವಿಡ್-19 ಸೊಂಕು ತಗುಲಿದೆ.

ಮಹಾರಾಷ್ಟ್ರ ಪ್ರವಾಸದ ಹಿನ್ನೆಲೆ ಸೋಂಕು ತಗುಲಿದ್ದು, ಅವರನ್ನು ಕ್ವಾರೈಂಟನ್ ಮಾಡಿ, ಅವಶ್ಯಕ ಚಿಕಿತ್ಸೆಯನ್ನು ಜಿಲ್ಲಾಸ್ಪತ್ರೆಯಲ್ಲಿ ನೀಡಲಾಗುತ್ತಿದೆ.

ಜಿಲ್ಲೆಯಲ್ಲಿ ಈವರೆಗೆ ಒಟ್ಟು 70 ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದ್ದು, ಇದರಲ್ಲಿ 44 ಜನರು ಗುಣಮುಖರಾಗಿ ಜಿಲ್ಲಾಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಇನ್ನುಳಿದ 22ಕೋವಿಡ್ ಸೋಂಕಿತ ರೋಗಿಗಳಿದ್ದು, ನಾಲ್ವರು ಮೃತಪಟ್ಟಿದ್ದಾರೆ.

ಇಬ್ಬರು ಗುಣಮುಖ:

ಕೋವಿಡ್-19ದಿಂದ ಗುಣಮುಖರಾದ ಇಬ್ಬರು ಸೋಮವಾರ ಜಿಲ್ಲಾ ಆಸ್ಪತ್ರೆಯಿಂದ ಬಿಡುಗಡೆಯಾದರು. ಈ ಮೂಲಕ ಒಟ್ಟು 44 ರೋಗಿಗಳು ಗುಣಮುಖರಾಗಿ, ಮನೆಗೆ ಮರಳಿದ್ದಾರೆ ಎಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ್ ತಿಳಿಸಿದ್ದಾರೆ.

22 ವರ್ಷ ವಯಸ್ಸಿನ ಯುವಕ(ಪಿ594) ಹಾಗೂ 20 ವರ್ಷ ವಯಸ್ಸಿನ ಯುವತಿ (ಪಿ856) ಗುಣಮುಖರಾಗಿ, ಬಿಡುಗಡೆಯಾದರು. ಆಸ್ಪತ್ರೆಯಲ್ಲಿ ಸದ್ಯ 22 ಸಕ್ರಿಯ ಕೋವಿಡ್ ರೋಗಿಗಳಿದ್ದು, ಪರಿಣಾಮಕಾರಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಈ ಗುಣಮುಖ ರೋಗಿಗಳ ಬಿಡುಗಡೆ ಸಂದರ್ಭದಲ್ಲಿ ಡಾ ಶರಣಪ್ಪ ಕಟ್ಟಿ, ಡಾ ಲಕ್ಕಣ್ಣವರ್,ಡಾ ಸಂದೀಪ್ ಸಜ್ಜನ್, ಆರ್.ಎನ್. ಸಾವಳಗಿ, ಡಾ ಬಿರಾದಾರ್, ಡಾ ಇಂಗಳೆ, ಜಗದೀಶ್ ಮಾಣಕರ್, ಜಿ.ಸಿ.ಉಪಾಸೆ, ಅಶೋಕ್ ಬೆಳ್ಳಣ್ಣವರ್, ಸಂತೋಷ ಬಿರಾದಾರ್, ಅಜಿತ್ ಕೊಟ್ನಿಸ್ ಇದ್ದರು.

ವಿಚಾರಣ ಸಂಕಿರಣ ನಾಳೆ

ಬಿ.ಎಲ್.ಡಿ.ಇ ಸಂಸ್ಥೆ ಹಾಗೂ ಜಿಲ್ಲಾಡಳಿತದ ಅಶ್ರಯದಲ್ಲಿ ಬಿ.ಎಲ್.ಡಿ.ಇ ನರ್ಸಿಂಗ್‌ ಕಾಲೇಜಿನಲ್ಲಿ ಮೇ27ರಂದು ಬೆಳಿಗ್ಗೆ 9.30ಕ್ಕೆ ‘ಕೋವಿಡ್-19 ತಡೆಗಟ್ಟುವಲ್ಲಿ ಜಿಲ್ಲಾಡಳಿತದ ಪಾತ್ರ’ ಎಂಬ ವಿಷಯಕ್ಕೆ ಸಂಬಂಧಿಸಿದಂತೆ ಆನ್‍ಲೈನ್ ವಿಚಾರ ಸಂಕಿರಣವನ್ನು ಹಮ್ಮಿಕೊಳ್ಳಲಾಗಿದೆ.

ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಔದ್ರಾಮ್, ಮಹಾನಗರ ಪಾಲಿಕೆ ಆಯುಕ್ತ ಶ್ರೀಹರ್ಷಾ ಶೆಟ್ಟಿ, ಜಿಲ್ಲಾ ಸರ್ವೆಲೆನ್ಸ್ ಅಧಿಕಾರಿ ಡಾ.ಎಂ.ಬಿ.ಬಿರಾದಾರ ವಿಚಾರ ಸಂಕಿರಣದಲ್ಲಿ ಭಾಗವಹಿಸಲಿದ್ದಾರೆ.

ವಿದ್ಯಾರ್ಥಿಗಳು, ಹಿರಿಯ ನಾಗರಿಕರಿಗಾಗಿ ಕೊರೊನಾ ಕಾಯಿಲೆ ತಡೆಗಟ್ಟುವಲ್ಲಿ ಜಿಲ್ಲಾಡಳಿತ ಎಷ್ಟು ಪರಿಣಾಮಕಾರಿಯಾದ ಕ್ರಮಗಳನ್ನು ಜಾರಿ ತಂದಿದೆ ಮತ್ತು ತರುವಲ್ಲಿ ಶ್ರಮಿಸುತ್ತಿರುವ ಕುರಿತ ತಮ್ಮ ಅಭಿಪ್ರಾಯಗಳನ್ನು ಆನ್‍ಲೈನ್ http://forms.gle/uD2pJFu8XdXYZEs7 ಮತ್ತು www.bldeanursing.ac.in ಲಿಂಕ್ ಮೂಲಕ ಹೆಸರು ನೋಂದಣಿ ಮಾಡಿ, ವಿಚಾರ ವಿನಿಮಯ ಮಾಡಿಕೊಳ್ಳಬಹುದಾಗಿದೆ ಎಂದು ಬಿ.ಎಂ.ಪಾಟೀಲ್ ನರ್ಸಿಂಗ್ ಕಾಲೇಜು ಪ್ರಾಚಾರ್ಯ ಶೋಲ್ಮೋನ್ ಚೋಪಡೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT