ಈ ಬಾರಿ ವಿಜಯಪುರದಲ್ಲಿ ಗೆಲುವಿನ ಬಾವುಟ ಹಾರಿಸಲೇ ಬೇಕು ಎಂಬ ಪ್ರಯತ್ನ ಕಾಂಗ್ರೆಸ್ ನಡೆಸಿದೆ. ಸಚಿವರು, ಶಾಸಕರು, ಮಾಜಿ ಶಾಸಕರು, ಮುಖಂಡರು, ಕಾರ್ಯಕರ್ತರು ಒಟ್ಟುಗೂಡಿ ಮತದಾರರನ್ನು ಒಲಿಸಿಕೊಳ್ಳಲು ಶಕ್ತಿ ಮೀರಿ ಪ್ರಯತ್ನ ನಡೆಸಿದ್ದಾರೆ. ಅಲ್ಲದೇ, ರಾಜ್ಯ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳು ಹಾಗೂ ‘ಇಂಡಿಯಾ’ ಒಕ್ಕೂಟ ನೀಡಿರುವ ಭರವಸೆಗಳು ಕೈಹಿಡಿಯಲಿವೆ ಎಂಬ ಲೆಕ್ಕಾಚಾರದಲ್ಲಿ ಕಾಂಗ್ರೆಸ್ ಇದೆ.