ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾಡ ಪಿಸ್ತೂಲ್‌, ಜೀವಂತ ಗುಂಡು ವಶ: ಮೂವರ ಬಂಧನ

Last Updated 5 ನವೆಂಬರ್ 2020, 11:29 IST
ಅಕ್ಷರ ಗಾತ್ರ

ವಿಜಯಪುರ: ನಗರದ ರಿಂಗ್‌ ರೋಡ್‌ನಜಮಖಂಡಿ ನಾಕಾ ಬಳಿ ಬುಧವಾರ ಮೂವರು ಆರೋಪಿಗಳನ್ನು ಬಂಧಿಸಿ ಅವರಿಂದ ಒಂದು ನಾಡ ಪಿಸ್ತೂಲ್‌, ಒಂದು ಜೀವಂತ ಗುಂಡು ಹಾಗೂ ಎರಡು ಕಬ್ಬಿಣದ ಮಚ್ಚುಗಳನ್ನು ಗಾಂಧಿಚೌಕ ಠಾಣೆ ಪಿಎಸ್‌ಐ ಶರಣಗೌಡ ಬಿ. ಗೌಡರ ವಶಪಡಿಸಿಕೊಂಡಿದ್ದಾರೆ.

ಯಾದಗಿರಿ ಜಿಲ್ಲೆ ಯಾಳಗಿ ಗ್ರಾಮದ ರಾಮರೆಡ್ಡಿ ಮಾಲಿಪಾಟೀಲ, ಬೆಂಗಳೂರಿನ ಶ್ರೀರಾಮಪುರಂದಸುರೇಶ ತುಂಗರಾಜ ಮತ್ತು ವಿನೋದ ರಾಜಾ ಬಂಧಿತ ಆರೋಪಿಗಳಾಗಿದ್ದಾರೆ.

ಆರೋಪಿಗಳು ಯಾವುದೇ ಲೈಸನ್ಸ್‌ ಇಲ್ಲದೇ ನಾಡ ಪಿಸ್ತೂಲ್‌ ಇಟ್ಟುಕೊಂಡು ಬೈಕ್‌ನಲ್ಲಿ ಹೋಗುತ್ತಿದ್ದಾಗ ತಪಾಸಣೆ ವೇಳೆ ಪತ್ತೆಯಾಗಿದೆ. ವೈಯಕ್ತಿ ರಕ್ಷಣೆ ಸಲುವಾಗಿ ತಮ್ಮ ಬಳಿ ಇಟ್ಟುಕೊಂಡಿರುವುದಾಗಿ ಆರೋಪಿಗಳು ಹೇಳಿಕೆ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT