<p><strong>ವಿಜಯಪುರ</strong>: ನಗರದಲ್ಲಿ ಸೋಮವಾರ ಬೆಳಿಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನುಪಮ್ ಅಗರವಾಲ್, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ರಾಮ್ ಅರಸಿದ್ದಿ ಸಿಬ್ಬಂದಿಯೊಂದಿಗೆ ಸ್ವತಃ ರಸ್ತೆಗಳಿದು ವಾಹನಗಳ ತಪಾಸಣೆ ನಡೆಸಿ, ಅನಗತ್ಯ ಓಡಾಟಕ್ಕೆ ಕಡಿವಾಣ ಹಾಕಿದರು.</p>.<p>ಅನಗತ್ಯವಾಗಿ ಸಂಚರಿಸುತ್ತಿದ್ದ ವಾಹನಗಳನ್ನು ವಶಕ್ಕೆ ಪಡೆದು, ದಂಡ ವಿಧಿಸಿದರು. ವಾಹನಗಳನ್ನು ಠಾಣೆಯಲ್ಲಿ ನಿಲ್ಲಿಸಿ, ನಡೆದುಕೊಂಡು ಹೋಗುವಂತೆ ಕೆಲವರಿಗೆ ಎಚ್ಚರಿಕೆ ನೀಡಿ ಕಳುಹಿಸಿದರು.</p>.<p>ಮಹಾರಾಷ್ಟ್ರ-ಕರ್ನಾಟಕ ಗಡಿಯ ಚೆಕ್ ಪೋಸ್ಟ್ ಗಳಲ್ಲಿ ತಪಾಸಣೆ ಬಿಗಿಗೊಳಿಸಲಾಗಿದೆ. ವಿಜಯಪುರ ನಗರ ಪ್ರವೇಶಿಸುವ ಹಾಗೂ ನಗರದಿಂದ ಹೊರಗೆ ಹೋಗುವ ವಾಹನಗಳನ್ನು ತೀವ್ರ ತಪಾಸಣೆ ಮಾಡಲಾಗುತ್ತಿದೆ.</p>.<p>ವಿಜಯಪುರ-ಹುಬ್ಬಳ್ಳಿ, ವಿಜಯಪುರ-ಕಲಬುರ್ಗಿ, ಸೊಲ್ಲಾಪುರ-ಬೆಂಗಳೂರು, ವಿಜಯಪುರ-ಅಥಣಿ ಹೆದ್ದಾರಿಗಳಲ್ಲಿ ಅಂತರ್ ಜಿಲ್ಲೆಗಳನ್ನು ಸಂಪರ್ಕಿಸುವ ಸ್ಥಳಗಳಲ್ಲಿ ಬ್ಯಾರಿಕೇಡ್ಗಳನ್ನು ನಿರ್ಮಿಸಿದ್ದು, ಹೊರ ಜಿಲ್ಲೆಯ ವಾಹನಗಳು ಜಿಲ್ಲೆ ಪ್ರವೇಶಿಸದಂತೆ ತಡೆಯಲಾಗುತ್ತಿದೆ. ಜಿಲ್ಲೆಯಿಂದಲೂ ಹೊರಕ್ಕೆ ಹೋಗಲು ಬಿಡುತ್ತಿಲ್ಲ. ಅಗತ್ಯ ಸೇವೆ ಒದಗಿಸುವ ವಾಹನಗಳ ಸಂಚಾರಕ್ಕೆ ಮಾತ್ರ ಅವಕಾಶ ನೀಡಲಾಗುತ್ತಿದೆಯಾದರೂ ತಪಾಸಣೆ ಮಾಡಿ ಬಿಡಲಾಗುತ್ತಿದೆ.</p>.<p>ಹಿಂದಿನ ದಿನಗಳಿಗೆ ಹೋಲಿಸಿದರೆ ಸೋಮವಾರ ವಾಹನ ಹಾಗೂ ಜನ ಸಂಚಾರ ಸಾಕಷ್ಟು ಪ್ರಮಾಣದಲ್ಲಿ ಕಡಿಮೆ ಇತ್ತು. ಪೊಲೀಸರ ಕಟ್ಟುನಿಟ್ಟಿನ ಕ್ರಮದಿಂದ ಆಸ್ಪತ್ರೆ, ಮೆಡಿಕಲ್, ವಿವಿಧ ಕಚೇರಿಗಳಿಗೆ ತೆರಳುವವರು ರಸ್ತೆ ಮೇಲೆ ಸಾಕಷ್ಟು ತೊಂದರೆ ಅನುಭವಿಸುವಂತಾಗಿದೆ.</p>.<p>ಬೆಳಿಗ್ಗೆ6ರಿಂದ 10ರ ವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಲಾಗಿತ್ತಾದರೂ ಕಠಿಣ ನಿರ್ಬಂಧಗಳಿಗೆ ಅಂಜಿದ ಜನರು ಹೊರಗೆ ಬರಲು ಹಿಂದೇಟು ಹಾಕಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ</strong>: ನಗರದಲ್ಲಿ ಸೋಮವಾರ ಬೆಳಿಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನುಪಮ್ ಅಗರವಾಲ್, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ರಾಮ್ ಅರಸಿದ್ದಿ ಸಿಬ್ಬಂದಿಯೊಂದಿಗೆ ಸ್ವತಃ ರಸ್ತೆಗಳಿದು ವಾಹನಗಳ ತಪಾಸಣೆ ನಡೆಸಿ, ಅನಗತ್ಯ ಓಡಾಟಕ್ಕೆ ಕಡಿವಾಣ ಹಾಕಿದರು.</p>.<p>ಅನಗತ್ಯವಾಗಿ ಸಂಚರಿಸುತ್ತಿದ್ದ ವಾಹನಗಳನ್ನು ವಶಕ್ಕೆ ಪಡೆದು, ದಂಡ ವಿಧಿಸಿದರು. ವಾಹನಗಳನ್ನು ಠಾಣೆಯಲ್ಲಿ ನಿಲ್ಲಿಸಿ, ನಡೆದುಕೊಂಡು ಹೋಗುವಂತೆ ಕೆಲವರಿಗೆ ಎಚ್ಚರಿಕೆ ನೀಡಿ ಕಳುಹಿಸಿದರು.</p>.<p>ಮಹಾರಾಷ್ಟ್ರ-ಕರ್ನಾಟಕ ಗಡಿಯ ಚೆಕ್ ಪೋಸ್ಟ್ ಗಳಲ್ಲಿ ತಪಾಸಣೆ ಬಿಗಿಗೊಳಿಸಲಾಗಿದೆ. ವಿಜಯಪುರ ನಗರ ಪ್ರವೇಶಿಸುವ ಹಾಗೂ ನಗರದಿಂದ ಹೊರಗೆ ಹೋಗುವ ವಾಹನಗಳನ್ನು ತೀವ್ರ ತಪಾಸಣೆ ಮಾಡಲಾಗುತ್ತಿದೆ.</p>.<p>ವಿಜಯಪುರ-ಹುಬ್ಬಳ್ಳಿ, ವಿಜಯಪುರ-ಕಲಬುರ್ಗಿ, ಸೊಲ್ಲಾಪುರ-ಬೆಂಗಳೂರು, ವಿಜಯಪುರ-ಅಥಣಿ ಹೆದ್ದಾರಿಗಳಲ್ಲಿ ಅಂತರ್ ಜಿಲ್ಲೆಗಳನ್ನು ಸಂಪರ್ಕಿಸುವ ಸ್ಥಳಗಳಲ್ಲಿ ಬ್ಯಾರಿಕೇಡ್ಗಳನ್ನು ನಿರ್ಮಿಸಿದ್ದು, ಹೊರ ಜಿಲ್ಲೆಯ ವಾಹನಗಳು ಜಿಲ್ಲೆ ಪ್ರವೇಶಿಸದಂತೆ ತಡೆಯಲಾಗುತ್ತಿದೆ. ಜಿಲ್ಲೆಯಿಂದಲೂ ಹೊರಕ್ಕೆ ಹೋಗಲು ಬಿಡುತ್ತಿಲ್ಲ. ಅಗತ್ಯ ಸೇವೆ ಒದಗಿಸುವ ವಾಹನಗಳ ಸಂಚಾರಕ್ಕೆ ಮಾತ್ರ ಅವಕಾಶ ನೀಡಲಾಗುತ್ತಿದೆಯಾದರೂ ತಪಾಸಣೆ ಮಾಡಿ ಬಿಡಲಾಗುತ್ತಿದೆ.</p>.<p>ಹಿಂದಿನ ದಿನಗಳಿಗೆ ಹೋಲಿಸಿದರೆ ಸೋಮವಾರ ವಾಹನ ಹಾಗೂ ಜನ ಸಂಚಾರ ಸಾಕಷ್ಟು ಪ್ರಮಾಣದಲ್ಲಿ ಕಡಿಮೆ ಇತ್ತು. ಪೊಲೀಸರ ಕಟ್ಟುನಿಟ್ಟಿನ ಕ್ರಮದಿಂದ ಆಸ್ಪತ್ರೆ, ಮೆಡಿಕಲ್, ವಿವಿಧ ಕಚೇರಿಗಳಿಗೆ ತೆರಳುವವರು ರಸ್ತೆ ಮೇಲೆ ಸಾಕಷ್ಟು ತೊಂದರೆ ಅನುಭವಿಸುವಂತಾಗಿದೆ.</p>.<p>ಬೆಳಿಗ್ಗೆ6ರಿಂದ 10ರ ವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಲಾಗಿತ್ತಾದರೂ ಕಠಿಣ ನಿರ್ಬಂಧಗಳಿಗೆ ಅಂಜಿದ ಜನರು ಹೊರಗೆ ಬರಲು ಹಿಂದೇಟು ಹಾಕಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>