<p><strong>ವಿಜಯಪುರ: </strong>ಕೊರೊನಾ ಸಂಕಷ್ಟ ಸಮಯದಲ್ಲಿ ಯಾರೊಬ್ಬರು ಹಸಿವಿನಿಂದ ಬಳಲಬಾರದು ಎಂಬ ಸದುದ್ದೇಶದಿಂದ ಕ್ಷೇತ್ರದಾದ್ಯಂತ ಸಂಚರಿಸಿ ಆಹಾರ ಹಾಗೂ ಮೆಡಿಕಲ್ ಕಿಟ್ ವಿತರಿಸಲಾಗುತ್ತಿದೆ ಎಂದು ನಾಗಠಾಣ ಶಾಸಕ ಡಾ.ದೇವಾನಂದ ಚವ್ಹಾಣ ಹೇಳಿದರು.</p>.<p>ನಾಗಠಣ ಮತಕ್ಷೇತ್ರದ ನಗರ ವಲಯದ ಯೋಗಾಪೂರ ಕಾಲೊನಿಯಲ್ಲಿ ಕಲಾವಿದರು ಹಾಗೂ ಕೊರೊನಾ ವಾರಿಯರ್ಸ್ಗಳಿಗೆ ಆಹಾರಧಾನ್ಯದ ಕಿಟ್ ಮಾಸ್ಕ್, ಸ್ಯಾನಿಟೈಸರ್ ವಿತರಿಸಿ ಮಾತನಾಡಿದರು.</p>.<p>ಕೊರೊನಾ ಎರಡನೇ ಅಲೆ ಎಲ್ಲರನ್ನು ಬಹಳಷ್ಟು ತೊಂದರೆಗೊಳಪಡಿಸಿದೆ. ಆದರೂ ಯಾರು ಆತ್ಮಸ್ಥೈರ್ಯ ಕಳೆದುಕೊಳ್ಳಬಾರದು ನಾನು ಸದಾ ನಿಮ್ಮೊಂದಿಗಿದ್ದೇನೆ ಎಂದರು.</p>.<p>ಕಲಾವಿದರು ಇಡೀ ಜೀವಮಾನದಲ್ಲಿ ಮತ್ತೊಬ್ಬರನ್ನು ನಗಿಸುತ್ತ ಪರರ ಸುಖದಲ್ಲಿ ತಮ್ಮ ನಗು ಕಂಡುಕೊಂಡವರು. ಇಂತಹ ಸಂದರ್ಭದಲ್ಲಿ ತೊಂದರೆಯಾಗಿರುವುದನ್ನು ಮನಗಂಡು ಪ್ರತಿಯೊಬ್ಬರಿಗೂ ಆಹಾರ ಧಾನ್ಯ ಹಾಗೂ ಮೆಡಿಕಲ್ ಕಿಟ್ ನೀಡಲಾಗುತ್ತಿದೆ. ಪ್ರತಿಯೊಬ್ಬರು ಕೊರೊನಾ ಮುಕ್ತ ಸಮಾಜ ನಿರ್ಮಾಣಕ್ಕೆ ಸಹಕಾರ ನೀಡಬೇಕು ಎಂದು ಹೇಳಿದರು.</p>.<p>ಸಾರ್ವಜನಿಕರು ಯಾವುದೇ ಕಾರಣಕ್ಕೂ ಅನಗತ್ಯವಾಗಿ ಹೊರಗಡೆ ಬರಬಾರದು. ಮಾಸ್ಕ್, ಸ್ಯಾನಿಟೈಸರ್ ಕಡ್ಡಾಯವಾಗಿ ಬಳಸಬೇಕು. ಪರಸ್ಪರ ಅಂತರ ಕಾಯ್ದುಕೊಂಡು ಇರಬೇಕು. ಆಗ ಮಾತ್ರ ಕೊರೊನಾ ಕಡಿಮೆ ಮಾಡಲು ಸಾಧ್ಯವಾಗುತ್ತದೆ ಎಂದರು.</p>.<p>ನಗರದ ವಿವಿಧ ವಾರ್ಡ್ಗಳ ವ್ಯಾಪ್ತಿಯಲ್ಲಿ ಆಹಾರ ಧಾನ್ಯದ ಕಿಟ್, ಸ್ಯಾನಿಟೈಸರ್, ಮಾಸ್ಕ್ ವಿತರಿಸಲಾಯಿತು.</p>.<p>ಕಲಾವಿದರ ಸಂಘದ ಅಧ್ಯಕ್ಷ ಎಲ್.ಬಿ.ಶೇಖ್, ಕಲಾವಿದರಾದ ಸಿದ್ದು ನಾಲತವಾಡ, ಗುಲಾಬ್ ಚವ್ಹಾಣ, ಶಿವು, ಪ್ರಭು, ಮನೋಜ ಜಿಗಜಿಣಗಿ ಸೇರಿದಂತೆ ಯೋಗಾಪೂರ ಕಾಲೊನಿಯ ಹಿರಿಯರು, ಅಂಗನವಾಡಿ, ಆಶಾ, ಆರೋಗ್ಯ ಕಾರ್ಯಕರ್ತೆಯರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ: </strong>ಕೊರೊನಾ ಸಂಕಷ್ಟ ಸಮಯದಲ್ಲಿ ಯಾರೊಬ್ಬರು ಹಸಿವಿನಿಂದ ಬಳಲಬಾರದು ಎಂಬ ಸದುದ್ದೇಶದಿಂದ ಕ್ಷೇತ್ರದಾದ್ಯಂತ ಸಂಚರಿಸಿ ಆಹಾರ ಹಾಗೂ ಮೆಡಿಕಲ್ ಕಿಟ್ ವಿತರಿಸಲಾಗುತ್ತಿದೆ ಎಂದು ನಾಗಠಾಣ ಶಾಸಕ ಡಾ.ದೇವಾನಂದ ಚವ್ಹಾಣ ಹೇಳಿದರು.</p>.<p>ನಾಗಠಣ ಮತಕ್ಷೇತ್ರದ ನಗರ ವಲಯದ ಯೋಗಾಪೂರ ಕಾಲೊನಿಯಲ್ಲಿ ಕಲಾವಿದರು ಹಾಗೂ ಕೊರೊನಾ ವಾರಿಯರ್ಸ್ಗಳಿಗೆ ಆಹಾರಧಾನ್ಯದ ಕಿಟ್ ಮಾಸ್ಕ್, ಸ್ಯಾನಿಟೈಸರ್ ವಿತರಿಸಿ ಮಾತನಾಡಿದರು.</p>.<p>ಕೊರೊನಾ ಎರಡನೇ ಅಲೆ ಎಲ್ಲರನ್ನು ಬಹಳಷ್ಟು ತೊಂದರೆಗೊಳಪಡಿಸಿದೆ. ಆದರೂ ಯಾರು ಆತ್ಮಸ್ಥೈರ್ಯ ಕಳೆದುಕೊಳ್ಳಬಾರದು ನಾನು ಸದಾ ನಿಮ್ಮೊಂದಿಗಿದ್ದೇನೆ ಎಂದರು.</p>.<p>ಕಲಾವಿದರು ಇಡೀ ಜೀವಮಾನದಲ್ಲಿ ಮತ್ತೊಬ್ಬರನ್ನು ನಗಿಸುತ್ತ ಪರರ ಸುಖದಲ್ಲಿ ತಮ್ಮ ನಗು ಕಂಡುಕೊಂಡವರು. ಇಂತಹ ಸಂದರ್ಭದಲ್ಲಿ ತೊಂದರೆಯಾಗಿರುವುದನ್ನು ಮನಗಂಡು ಪ್ರತಿಯೊಬ್ಬರಿಗೂ ಆಹಾರ ಧಾನ್ಯ ಹಾಗೂ ಮೆಡಿಕಲ್ ಕಿಟ್ ನೀಡಲಾಗುತ್ತಿದೆ. ಪ್ರತಿಯೊಬ್ಬರು ಕೊರೊನಾ ಮುಕ್ತ ಸಮಾಜ ನಿರ್ಮಾಣಕ್ಕೆ ಸಹಕಾರ ನೀಡಬೇಕು ಎಂದು ಹೇಳಿದರು.</p>.<p>ಸಾರ್ವಜನಿಕರು ಯಾವುದೇ ಕಾರಣಕ್ಕೂ ಅನಗತ್ಯವಾಗಿ ಹೊರಗಡೆ ಬರಬಾರದು. ಮಾಸ್ಕ್, ಸ್ಯಾನಿಟೈಸರ್ ಕಡ್ಡಾಯವಾಗಿ ಬಳಸಬೇಕು. ಪರಸ್ಪರ ಅಂತರ ಕಾಯ್ದುಕೊಂಡು ಇರಬೇಕು. ಆಗ ಮಾತ್ರ ಕೊರೊನಾ ಕಡಿಮೆ ಮಾಡಲು ಸಾಧ್ಯವಾಗುತ್ತದೆ ಎಂದರು.</p>.<p>ನಗರದ ವಿವಿಧ ವಾರ್ಡ್ಗಳ ವ್ಯಾಪ್ತಿಯಲ್ಲಿ ಆಹಾರ ಧಾನ್ಯದ ಕಿಟ್, ಸ್ಯಾನಿಟೈಸರ್, ಮಾಸ್ಕ್ ವಿತರಿಸಲಾಯಿತು.</p>.<p>ಕಲಾವಿದರ ಸಂಘದ ಅಧ್ಯಕ್ಷ ಎಲ್.ಬಿ.ಶೇಖ್, ಕಲಾವಿದರಾದ ಸಿದ್ದು ನಾಲತವಾಡ, ಗುಲಾಬ್ ಚವ್ಹಾಣ, ಶಿವು, ಪ್ರಭು, ಮನೋಜ ಜಿಗಜಿಣಗಿ ಸೇರಿದಂತೆ ಯೋಗಾಪೂರ ಕಾಲೊನಿಯ ಹಿರಿಯರು, ಅಂಗನವಾಡಿ, ಆಶಾ, ಆರೋಗ್ಯ ಕಾರ್ಯಕರ್ತೆಯರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>