<p><strong>ವಿಜಯಪುರ:</strong> ನೆರೆಯ ಮಹಾರಾಷ್ಟ್ರದಲ್ಲಿ ಕೋವಿಡ್–19 ಎರಡನೇ ಅಲೆ ಕಾಣಿಸಿಕೊಂಡಿರುವುದರಿಂದ ರಾಜ್ಯದ ಗಡಿ ಭಾಗದಲ್ಲಿ ಜಿಲ್ಲಾಡಳಿತ ಕಟ್ಟುನಿಟ್ಟಿನ ಕ್ರಮಕೈಗೊಂಡಿದೆ. ಜೊತೆಗೆ ಕೋವಿಡ್ ನಿಯಂತ್ರಣ ಕ್ರಮಗಳನ್ನು ಜಿಲ್ಲೆಯಲ್ಲಿ ಕಡ್ಡಾಯವಾಗಿ ಪಾಲಿಸಬೇಕೆಂದು ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್ ಸೂಚಿಸಿದ್ದಾರೆ.</p>.<p>ಯಾವುದೇ ಒಂದು ಸಂಸ್ಥೆಯಲ್ಲಿ ಐದಕ್ಕಿಂತ ಹೆಚ್ಚು ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾದಲ್ಲಿ, ಅಂತಹ ಸಂಸ್ಥೆಯನ್ನು ಕಂಟೇನ್ಮೆಂಟ್ ಝೋನ್ ಎಂದು ಆದೇಶಿಸಲಾಗುವುದು. ತದ ನಂತರ 7 ದಿನಗಳ ನಂತರ ಎಲ್ಲ ವಿದ್ಯಾರ್ಥಿ, ಇತರೆ ಸಿಬ್ಬಂದಿಗಳ ಆರ್.ಟಿ.ಪಿ.ಸಿ.ಆರ್. ಟೆಸ್ಟ್ ಕಡ್ಡಾಯವಾಗಿ ಮಾಡಿಸಲಾಗುವುದು ಎಂದು ತಿಳಿಸಿದ್ದಾರೆ.</p>.<p>ವಿದೇಶದಿಂದ ಆಗಮಿಸುವವರು ಕಡ್ಡಾಯವಾಗಿ ಆರ್.ಟಿ.ಪಿ.ಸಿ.ಆರ್. ನೆಗೆಟಿವ್ ವರದಿಯನ್ನು ತರಬೇಕು. ಒಂದು ವೇಳೆ ನೆಗೆಟಿವ್ ವರದಿಯು ಇರದ ಪಕ್ಷದಲ್ಲಿ ವಿಮಾನನಿಲ್ದಾಣದಲ್ಲಿ ಆರ್.ಟಿ.ಪಿ.ಸಿ.ಆರ್. ಟೆಸ್ಟ್ ಮಾಡಿಸಿಕೊಂಡು ಬರಬೇಕು ಎಂದು ಅವರು ಹೇಳಿದ್ದಾರೆ.</p>.<p>ವಿದೇಶದಿಂದ ಅಥವಾ ಕೇರಳ ಹಾಗೂ ಮಹಾರಾಷ್ಟ್ರ ರಾಜ್ಯದಿಂದ ಬಸ್, ರೈಲು, ಖಾಸಗಿ ವಾಹನಗಳ ಮೂಲಕ ಆಗಮಿಸುವವರು ಕಡ್ಡಾಯವಾಗಿ 72 ಗಂಟೆಗಳ ಮೊದಲು ಮಾಡಿದ ಆರ್.ಟಿ.ಪಿ.ಸಿ.ಆರ್ ಪರೀಕ್ಷೆ ನೆಗೆಟಿವ್ ವರದಿಯೊಂದಿಗೆ ಆಗಮಿಸಬೇಕು ಎಂದು ಸೂಚಿಸಿದ್ದಾರೆ.</p>.<p>ಆರ್.ಟಿ.ಪಿ.ಸಿ.ಆರ್. ಪರೀಕ್ಷೆ ನೆಗೆಟಿವ್ ವರದಿ ಇಲ್ಲದೇ ಜಿಲ್ಲೆಗೆ ಆಗಮಿಸಿದ ವ್ಯಕ್ತಿಗಳ ಆರ್.ಟಿ.ಪಿ.ಸಿ.ಆರ್ ನೆಗೆಟಿವ್ ಫಲಿತಾಂಶ ಬರುವರೆಗೂ ಅಂಥವರನ್ನು ಕಡ್ಡಾಯವಾಗಿ ಕ್ವಾರಂಟೈನ್ ಕೊಠಡಿಯಲ್ಲಿ ಇರಬೇಕು ಎಂದು ತಿಳಿಸಿದ್ದಾರೆ.</p>.<p>ಮಹಾರಾಷ್ಟ್ರದಿಂದ ರಸ್ತೆ ಸಾರಿಗೆ ಸಂಸ್ಥೆ ಬಸ್ ಹಾಗೂಖಾಸಗಿ ಟ್ರಾವೆಲ್ಸ್ಗಳ ಮೂಲಕ ಆಗಮಿಸುವ ಪ್ರಯಾಣಿಕರು ಕಡ್ಡಾಯವಾಗಿ 72 ಗಂಟೆಗಳ ಮುಂಚೆ ಪಡೆಯಲಾದ ಆರ್.ಟಿ.ಪಿ.ಸಿ.ಆರ್. ನೆಗೆಟಿವ್ ವರದಿಯೊಂದಿಗೆ ಪ್ರಯಾಣಿಸುವ ಬಗ್ಗೆ ಬಸ್ ನಿರ್ವಾಹಕರು ಖಚಿತಪಡಿಸಿಕೊಂಡು ಪ್ರಯಾಣಿಸಲು ಅನುಮತಿ ನೀಡಬೇಕು ಎಂದರು.</p>.<p>ಆರ್.ಟಿ.ಪಿ.ಸಿ.ಆರ್. ನೆಗೆಟಿವ್ ವರದಿಯೊಂದಿಗೆ ಬಾರದ ಪ್ರಯಾಣಿಕರನ್ನು ಮರಳಿ ಅವರು ಬಂದ ಸ್ಥಳಕ್ಕೆ ಹಿಂದಿರುಗಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.</p>.<p>ಕೋವಿಡ್ ಮುನ್ನೆಚ್ಚರಿಕೆ ಕ್ರಮಗಳಾದ ಮಾಸ್ಕ ಧರಿಸುವುದು, ದೈಹಿಕ ಅಂತರ ಪಾಲನೆ ಮತ್ತು ಹ್ಯಾಂಡ್ ಸ್ಯಾನಿಟೈಜರ್ ಕಡ್ಡಾಯವಾಗಿ ಬಳಕೆ ಮಾಡಬೇಕು ಎಂದರು.</p>.<p>ಹಾಸ್ಟೆಲ್, ವಸತಿ ಶಾಲೆಗಳು ಹಾಗೂ ಶೈಕ್ಷಣಿಕ ಸಂಸ್ಥೆಗಳಲ್ಲಿ ಕೋವಿಡ್ ಮುನ್ನೆಚ್ಚರಿಕೆ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಹೇಳಿದರು.</p>.<p>ಜಿಲ್ಲೆಯ ಎಲ್ಲ ಕಾಲೇಜು, ಶಿಕ್ಷಣ ಸಂಸ್ಥೆಗಳು ಕಡ್ಡಾಯವಾಗಿ ಒಬ್ಬ ಅಧಿಕಾರಿಯನ್ನು ಕೋವಿಡ್ ನೋಡಲ್ ಅಧಿಕಾರಿ ಎಂದು ನೇಮಿಸಬೇಕು ಎಂದರು.</p>.<p>ಹಾಸ್ಟೆಲ್, ವಸತಿ ಶಾಲೆಗಳಲ್ಲಿನ ವಿದ್ಯಾರ್ಥಿಗಳು, ಕೋವಿಡ್ ನೋಡಲ್ ಅಧಿಕಾರಿಯ ಅನುಮತಿ ಇಲ್ಲದೇ, ಅತಿಥಿ, ಸಂಬಂಧಿಕರನ್ನು ಭೇಟಿ ಮಾಡುವಂತಿಲ್ಲ. ಕಾಲೇಜು, ಹಾಸ್ಟೆಲ್ಗಳಿಗೆ ಕೇರಳ ಹಾಗೂ ಮಹಾರಾಷ್ಟ್ರದಿಂದ ಭೇಟಿ ನೀಡುವ ವಿದ್ಯಾರ್ಥಿಗಳ ಪಟ್ಟಿಯನ್ನು ಸಂಬಂಧಪಟ್ಟ ಪ್ರಾಧಿಕಾರವು ನಿರ್ವಹಿಸಬೇಕು ಎಂದರು.</p>.<p>ಕಳೆದ ಎರಡು ವಾರಗಳ ಅವಧಿಯಲ್ಲಿ ಮಹಾರಾಷ್ಟ್ರ ಮತ್ತು ಕೇರಳ ರಾಜ್ಯದಿಂದ ಜಿಲ್ಲೆಗೆ ಆಗಮಿಸಿರುವವರು ಕಡ್ಡಾಯವಾಗಿ ಆರ್.ಟಿ.ಪಿ.ಸಿ.ಆರ್. ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದು ಸೂಚಿಸಿದರು.</p>.<p>ಜಿಲ್ಲೆಯ ವಿವಿಧ ಕಂಪನಿಗಳಲ್ಲಿ, ಹೋಟೆಲ್, ರೆಸಾರ್ಟ್, ಲಾಡ್ಜ್ಗಳು, ಹೋಂ ಸ್ಟೇಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಕೇರಳ, ಮಹಾರಾಷ್ಟ್ರ ಮೂಲದ ಸಿಬ್ಬಂದಿ ತಮ್ಮ ಸ್ವಂತ ಖರ್ಚಿನಲ್ಲಿ ಆರ್.ಟಿ.ಪಿ.ಸಿ.ಆರ್. ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದು ತಿಳಿಸಿದ್ದಾರೆ.</p>.<p>ಕೋವಿಡ್ ಸೂಚನೆಯನ್ನು ಪಾಲಿಸದಿದ್ದಲ್ಲಿ ಅಂತವರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ:</strong> ನೆರೆಯ ಮಹಾರಾಷ್ಟ್ರದಲ್ಲಿ ಕೋವಿಡ್–19 ಎರಡನೇ ಅಲೆ ಕಾಣಿಸಿಕೊಂಡಿರುವುದರಿಂದ ರಾಜ್ಯದ ಗಡಿ ಭಾಗದಲ್ಲಿ ಜಿಲ್ಲಾಡಳಿತ ಕಟ್ಟುನಿಟ್ಟಿನ ಕ್ರಮಕೈಗೊಂಡಿದೆ. ಜೊತೆಗೆ ಕೋವಿಡ್ ನಿಯಂತ್ರಣ ಕ್ರಮಗಳನ್ನು ಜಿಲ್ಲೆಯಲ್ಲಿ ಕಡ್ಡಾಯವಾಗಿ ಪಾಲಿಸಬೇಕೆಂದು ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್ ಸೂಚಿಸಿದ್ದಾರೆ.</p>.<p>ಯಾವುದೇ ಒಂದು ಸಂಸ್ಥೆಯಲ್ಲಿ ಐದಕ್ಕಿಂತ ಹೆಚ್ಚು ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾದಲ್ಲಿ, ಅಂತಹ ಸಂಸ್ಥೆಯನ್ನು ಕಂಟೇನ್ಮೆಂಟ್ ಝೋನ್ ಎಂದು ಆದೇಶಿಸಲಾಗುವುದು. ತದ ನಂತರ 7 ದಿನಗಳ ನಂತರ ಎಲ್ಲ ವಿದ್ಯಾರ್ಥಿ, ಇತರೆ ಸಿಬ್ಬಂದಿಗಳ ಆರ್.ಟಿ.ಪಿ.ಸಿ.ಆರ್. ಟೆಸ್ಟ್ ಕಡ್ಡಾಯವಾಗಿ ಮಾಡಿಸಲಾಗುವುದು ಎಂದು ತಿಳಿಸಿದ್ದಾರೆ.</p>.<p>ವಿದೇಶದಿಂದ ಆಗಮಿಸುವವರು ಕಡ್ಡಾಯವಾಗಿ ಆರ್.ಟಿ.ಪಿ.ಸಿ.ಆರ್. ನೆಗೆಟಿವ್ ವರದಿಯನ್ನು ತರಬೇಕು. ಒಂದು ವೇಳೆ ನೆಗೆಟಿವ್ ವರದಿಯು ಇರದ ಪಕ್ಷದಲ್ಲಿ ವಿಮಾನನಿಲ್ದಾಣದಲ್ಲಿ ಆರ್.ಟಿ.ಪಿ.ಸಿ.ಆರ್. ಟೆಸ್ಟ್ ಮಾಡಿಸಿಕೊಂಡು ಬರಬೇಕು ಎಂದು ಅವರು ಹೇಳಿದ್ದಾರೆ.</p>.<p>ವಿದೇಶದಿಂದ ಅಥವಾ ಕೇರಳ ಹಾಗೂ ಮಹಾರಾಷ್ಟ್ರ ರಾಜ್ಯದಿಂದ ಬಸ್, ರೈಲು, ಖಾಸಗಿ ವಾಹನಗಳ ಮೂಲಕ ಆಗಮಿಸುವವರು ಕಡ್ಡಾಯವಾಗಿ 72 ಗಂಟೆಗಳ ಮೊದಲು ಮಾಡಿದ ಆರ್.ಟಿ.ಪಿ.ಸಿ.ಆರ್ ಪರೀಕ್ಷೆ ನೆಗೆಟಿವ್ ವರದಿಯೊಂದಿಗೆ ಆಗಮಿಸಬೇಕು ಎಂದು ಸೂಚಿಸಿದ್ದಾರೆ.</p>.<p>ಆರ್.ಟಿ.ಪಿ.ಸಿ.ಆರ್. ಪರೀಕ್ಷೆ ನೆಗೆಟಿವ್ ವರದಿ ಇಲ್ಲದೇ ಜಿಲ್ಲೆಗೆ ಆಗಮಿಸಿದ ವ್ಯಕ್ತಿಗಳ ಆರ್.ಟಿ.ಪಿ.ಸಿ.ಆರ್ ನೆಗೆಟಿವ್ ಫಲಿತಾಂಶ ಬರುವರೆಗೂ ಅಂಥವರನ್ನು ಕಡ್ಡಾಯವಾಗಿ ಕ್ವಾರಂಟೈನ್ ಕೊಠಡಿಯಲ್ಲಿ ಇರಬೇಕು ಎಂದು ತಿಳಿಸಿದ್ದಾರೆ.</p>.<p>ಮಹಾರಾಷ್ಟ್ರದಿಂದ ರಸ್ತೆ ಸಾರಿಗೆ ಸಂಸ್ಥೆ ಬಸ್ ಹಾಗೂಖಾಸಗಿ ಟ್ರಾವೆಲ್ಸ್ಗಳ ಮೂಲಕ ಆಗಮಿಸುವ ಪ್ರಯಾಣಿಕರು ಕಡ್ಡಾಯವಾಗಿ 72 ಗಂಟೆಗಳ ಮುಂಚೆ ಪಡೆಯಲಾದ ಆರ್.ಟಿ.ಪಿ.ಸಿ.ಆರ್. ನೆಗೆಟಿವ್ ವರದಿಯೊಂದಿಗೆ ಪ್ರಯಾಣಿಸುವ ಬಗ್ಗೆ ಬಸ್ ನಿರ್ವಾಹಕರು ಖಚಿತಪಡಿಸಿಕೊಂಡು ಪ್ರಯಾಣಿಸಲು ಅನುಮತಿ ನೀಡಬೇಕು ಎಂದರು.</p>.<p>ಆರ್.ಟಿ.ಪಿ.ಸಿ.ಆರ್. ನೆಗೆಟಿವ್ ವರದಿಯೊಂದಿಗೆ ಬಾರದ ಪ್ರಯಾಣಿಕರನ್ನು ಮರಳಿ ಅವರು ಬಂದ ಸ್ಥಳಕ್ಕೆ ಹಿಂದಿರುಗಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.</p>.<p>ಕೋವಿಡ್ ಮುನ್ನೆಚ್ಚರಿಕೆ ಕ್ರಮಗಳಾದ ಮಾಸ್ಕ ಧರಿಸುವುದು, ದೈಹಿಕ ಅಂತರ ಪಾಲನೆ ಮತ್ತು ಹ್ಯಾಂಡ್ ಸ್ಯಾನಿಟೈಜರ್ ಕಡ್ಡಾಯವಾಗಿ ಬಳಕೆ ಮಾಡಬೇಕು ಎಂದರು.</p>.<p>ಹಾಸ್ಟೆಲ್, ವಸತಿ ಶಾಲೆಗಳು ಹಾಗೂ ಶೈಕ್ಷಣಿಕ ಸಂಸ್ಥೆಗಳಲ್ಲಿ ಕೋವಿಡ್ ಮುನ್ನೆಚ್ಚರಿಕೆ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಹೇಳಿದರು.</p>.<p>ಜಿಲ್ಲೆಯ ಎಲ್ಲ ಕಾಲೇಜು, ಶಿಕ್ಷಣ ಸಂಸ್ಥೆಗಳು ಕಡ್ಡಾಯವಾಗಿ ಒಬ್ಬ ಅಧಿಕಾರಿಯನ್ನು ಕೋವಿಡ್ ನೋಡಲ್ ಅಧಿಕಾರಿ ಎಂದು ನೇಮಿಸಬೇಕು ಎಂದರು.</p>.<p>ಹಾಸ್ಟೆಲ್, ವಸತಿ ಶಾಲೆಗಳಲ್ಲಿನ ವಿದ್ಯಾರ್ಥಿಗಳು, ಕೋವಿಡ್ ನೋಡಲ್ ಅಧಿಕಾರಿಯ ಅನುಮತಿ ಇಲ್ಲದೇ, ಅತಿಥಿ, ಸಂಬಂಧಿಕರನ್ನು ಭೇಟಿ ಮಾಡುವಂತಿಲ್ಲ. ಕಾಲೇಜು, ಹಾಸ್ಟೆಲ್ಗಳಿಗೆ ಕೇರಳ ಹಾಗೂ ಮಹಾರಾಷ್ಟ್ರದಿಂದ ಭೇಟಿ ನೀಡುವ ವಿದ್ಯಾರ್ಥಿಗಳ ಪಟ್ಟಿಯನ್ನು ಸಂಬಂಧಪಟ್ಟ ಪ್ರಾಧಿಕಾರವು ನಿರ್ವಹಿಸಬೇಕು ಎಂದರು.</p>.<p>ಕಳೆದ ಎರಡು ವಾರಗಳ ಅವಧಿಯಲ್ಲಿ ಮಹಾರಾಷ್ಟ್ರ ಮತ್ತು ಕೇರಳ ರಾಜ್ಯದಿಂದ ಜಿಲ್ಲೆಗೆ ಆಗಮಿಸಿರುವವರು ಕಡ್ಡಾಯವಾಗಿ ಆರ್.ಟಿ.ಪಿ.ಸಿ.ಆರ್. ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದು ಸೂಚಿಸಿದರು.</p>.<p>ಜಿಲ್ಲೆಯ ವಿವಿಧ ಕಂಪನಿಗಳಲ್ಲಿ, ಹೋಟೆಲ್, ರೆಸಾರ್ಟ್, ಲಾಡ್ಜ್ಗಳು, ಹೋಂ ಸ್ಟೇಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಕೇರಳ, ಮಹಾರಾಷ್ಟ್ರ ಮೂಲದ ಸಿಬ್ಬಂದಿ ತಮ್ಮ ಸ್ವಂತ ಖರ್ಚಿನಲ್ಲಿ ಆರ್.ಟಿ.ಪಿ.ಸಿ.ಆರ್. ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದು ತಿಳಿಸಿದ್ದಾರೆ.</p>.<p>ಕೋವಿಡ್ ಸೂಚನೆಯನ್ನು ಪಾಲಿಸದಿದ್ದಲ್ಲಿ ಅಂತವರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>