ವಿಜಯಪುರ: ‘ನನ್ನ ಪತಿಗೆ ಕೋವಿಡ್ ಪಾಸಿಟಿವ್ ಬಂದಿರುವುದರಿಂದ ನಮ್ಮ ಮನೆಗೆ ಹಾಲು ಹಾಕುವವರು, ಮನೆಗೆಲಸದವರು ಬರದಂತೆ ಸ್ಥಳೀಯರು ತಡೆಯೊಡ್ಡುವ ಮೂಲಕ ತಾರತಮ್ಯ ಮಾಡುತ್ತಿದ್ದಾರೆ’ ಎಂದು ಆರೋಪಿಸಿ ಇಲ್ಲಿನ ಚಾಲುಕ್ಯ ನಗರದ ಮಹಿಳೆಯೊಬ್ಬರು ಪ್ರಧಾನಿ ಕಾರ್ಯಾಲಯ, ಮುಖ್ಯಮಂತ್ರಿ, ಆರೋಗ್ಯ ಸಚಿವರು ಹಾಗೂ ಜಿಲ್ಲಾಧಿಕಾರಿ ಅವರಿಗೆ ಟ್ವೀಟ್ ಮಾಡಿದ್ದಾರೆ.