ನಗರದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಬಿಜೆಪಿ ಅವ್ಯವಹಾರ ನಡೆಸಿದ ಸಮಯದಲ್ಲಿ ಯತ್ನಾಳ ಕೂಡ ಬಿಜೆಪಿ ಸರ್ಕಾರದ ಭಾಗವಾಗಿದ್ದರು, ಆಗ ಈ ಅವ್ಯವಹಾರದ ಬಗ್ಗೆ ಧ್ವನಿ ಏಕೆ ಎತ್ತಲಿಲ್ಲ? ಆಗ ನಿಮ್ಮ ಪಾಲು ಅದರಲ್ಲಿತ್ತೋ? ಅಥವಾ ಪಾಲು ಹಣ ಹಂಚಿಕೆಯಲ್ಲಿ ಧಕ್ಕೆಯಾಗಿದ್ದಕ್ಕೆ ಈ ರೀತಿ ಆರೋಪಿಸುತ್ತಿದ್ದೀರೋ’ ಎಂದು ಪ್ರಶ್ನಿಸಿದರು.