<p><strong>ವಿಜಯಪುರ:</strong> ಕೋವಿಡ್ ಎರಡನೇ ಅಲೆ ನಿಯಂತ್ರಿಸುವಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರದ ವೈಫಲ್ಯ ಖಂಡಿಸಿ ಎಸ್.ಯು.ಸಿ.ಐ ಕಮ್ಯೂನಿಸ್ಟ್ ಪಕ್ಷದಿಂದ ಮಂಗಳವಾರ ಆನ್ಲೈನ್ ಪ್ರತಿಭಟನೆ ನಡೆಸಲಾಯಿತು.<br /><br />ಕಳೆದ ವರ್ಷವೇ ಕೋವಿಡ್ ಎರಡನೆ ಅಲೆಯ ತೀವ್ರತೆ ಬಗ್ಗೆ ತಜ್ಞರು ಸರ್ಕಾರವನ್ನು ಎಚ್ಚರಿಸಿದ್ದರು. ಆದರೆ, ಸರ್ಕಾರ ತನ್ನ ಜವಾಬ್ದಾರಿ ಮತ್ತು ಕರ್ತವ್ಯ ನಿರ್ಲಕ್ಷಿಸಿ ಜನರ ಮಾರಣ ಹೋಮ ನಡೆಸುತ್ತಿದೆ ಎಂದು ಆರೋಪಿಸಿದರು.</p>.<p>ದೇಶದಲ್ಲಿಂದು ಸಂಭವಿಸುತ್ತಿರುವ ಸಾವುಗಳು ಕೇವಲ ಕೋವಿಡ್ ಸಾವುಗಳಲ್ಲ, ಅವು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಿರ್ಲಕ್ಷ್ಯದಿಂದುಂಟಾದ ಪ್ರಾಯೋಜಿತ ಕೊಲೆಗಳಾಗಿವೆ ಎಂದು ದೂರಿದರು.</p>.<p>ತಜ್ಞರ ಮುನ್ನೆಚ್ಚರಿಕೆಯಿಂದ ಸರ್ಕಾರಗಳು ಎಚ್ಚೆತ್ತು ವೆಂಟಿಲೇಟರ್, ಆಕ್ಸಿಜನ್, ವ್ಯಾಕ್ಸಿನ್ ತಯಾರಿಯಲ್ಲಿಟ್ಟುಕೊಂಡಿದ್ದರೆ ಜನ ಈ ರೀತಿ ಸಾಯುವ ಪರಿಸ್ಥಿತಿಯುಂಟಾಗುತ್ತಿರಲಿಲ್ಲ ಎಂದರು.</p>.<p>ಕೋವಿಡ್ ಎದುರಿಸಲು ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳುವ ಬದಲು ಈ ದೇಶದ ಪ್ರಧಾನಿ ಐದು ರಾಜ್ಯಗಳ ಚುನಾವಣೆಯಲ್ಲಿ ತೊಡಗಿದ್ದರು. ಇತ್ತ ರಾಜ್ಯ ಸರ್ಕಾರವೂ ಉಪಚುನಾವಣೆಗಳಲ್ಲಿ ಮುಳುಗಿರುವುದರಿಂದಾಗಿ ಈ ಪರಿಸ್ಥಿತಿ ಇನ್ನಷ್ಟು ಉಲ್ಬಣಗೊಂಡಿತು. ಪ್ರಧಾನಿ ಮತ್ತು ಮುಖ್ಯಮಂತ್ರಿಗಳಿಗೆ ಜನತೆ ವೋಟಿನ ರೂಪದಲ್ಲಿ ಕಂಡರೆ ಹೊರತು ಮನುಷ್ಯರ ರೂಪದಲ್ಲಿ ಕಾಣಲೇ ಇಲ್ಲ ಎಂದು ಆರೋಪಿಸಿದರು.</p>.<p>ಜಿಲ್ಲೆಯ ನಗರ ಮತ್ತು ಗ್ರಾಮೀಣ ಪ್ರದೇಶಗಳ ಆಸ್ಪತ್ರೆಗಳಲ್ಲೂ ಆಕ್ಸಿಜನ್, ವೆಂಟಿಲೇಟರ್, ಬೆಡ್, ವ್ಯಾಕ್ಸಿನ್ಗಳನ್ನು ಒದಗಿಸಬೇಕು. ಈ ರೋಗದಿಂದ ಗ್ರಾಮೀಣ ಪ್ರದೇಶದಲ್ಲಿ ಪ್ರತಿನಿತ್ಯ ಸಾವುಗಳು ಸಾಮಾನ್ಯವಾಗಿವೆ. ಹಾಗಾಗಿ ಈ ಗ್ರಾಮೀಣ ಜನರತ್ತಲೂ ಜಿಲ್ಲಾಡಳಿತ ಗಮನ ವಹಿಸಬೇಕು ಎಂದು ಆಗ್ರಹಿಸಿದರು.</p>.<p>ಲಾಕ್ಡೌನ್ನಿಂದಾಗಿ ಬೀದಿಗೆ ಬಿದ್ದ ಎಲ್ಲ ದುಡಿಯುವ ವರ್ಗದ ಜನತೆಗೆ ಆಂಧ್ರ ಮತ್ತು ಕೇರಳ ರಾಜ್ಯಗಳ ಮಾದರಿಯಂತೆ ಆರ್ಥಿಕ ಸಹಾಯ ಒದಗಿಸಬೇಕು ಹಾಗೂ ಕೋವಿಡ್ ಪೀಡಿತ ಎಲ್ಲ ಬಡ ಕುಟುಂಬಗಳಿಗೂ ಸೂಕ್ತ ಪರಿಹಾರವನ್ನು ಒದಗಿಸಿ ಅವರನ್ನು ಮೇಲೆತ್ತಲು ಪ್ರಯತ್ನಿಸಬೇಕು ಎಂದು ಆಗ್ರಹಿಸಿದರು.</p>.<p>ನರೇಗಾ ಯೋಜನೆಯಡಿ ಎಲ್ಲ ಗ್ರಾಮೀಣ ಜನರಿಗೂ ಉದ್ಯೋಗ ಕಲ್ಪಿಸಬೇಕು ಹಾಗು ಉದ್ಯೋಗದ ದಿನಗಳನ್ನು ಇನ್ನು ಮುಂದೆ 300 ದಿನಗಳಿಗೆ ವಿಸ್ತರಿಸಿ, ಕೂಲಿಯನ್ನೂ ಹೆಚ್ಚಿಸಬೇಕು ಎಂದು ಒತ್ತಾಯಿಸಿದರು.</p>.<p>ಲಾಕ್ ಡೌನ್ ನಿಂದಾಗಿ ತೋಟಗಾರಿಕಾ ಮತ್ತು ತರಕಾರಿ ಬೆಳೆದ ರೈತರುಗಳು ಅಪಾರ ಆರ್ಥಿಕನಷ್ಟಕ್ಕೆ ಸಿಲುಕಿದ್ದು, ಈ ರೈತರಿಗೂ ಪರಿಹಾರ ಕಲ್ಪಿಸಬೇಕು ಎಂದು ಒತ್ತಯಿಸಿದರು.</p>.<p>ಪ್ರತಿಭಟನೆಯಲ್ಲಿ ಜಿಲ್ಲಾ ಕಾರ್ಯದರ್ಶಿ ಬಿ.ಭಗವಾನರೆಡ್ಡಿ, ಜಿಲ್ಲಾ ಸಮಿತಿಯ ಸದಸ್ಯರಾದ ಮಲ್ಲಿಕಾರ್ಜುನ, ಬಾಳು ಜೇವೂರ, ಸಿದ್ಧಲಿಂಗ ಬಾಗೇವಾಡಿ, ಭರತಕುಮಾರ, ಶರತ್, ಶ್ರೀಕಾಂತ, ಶಿವಬಾಳಮ್ಮ, ಸುನೀಲ, ಗೀತಾ, ಕಮಲಾ ತೇಲಿ ಕಾಶಿಬಾಯಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ:</strong> ಕೋವಿಡ್ ಎರಡನೇ ಅಲೆ ನಿಯಂತ್ರಿಸುವಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರದ ವೈಫಲ್ಯ ಖಂಡಿಸಿ ಎಸ್.ಯು.ಸಿ.ಐ ಕಮ್ಯೂನಿಸ್ಟ್ ಪಕ್ಷದಿಂದ ಮಂಗಳವಾರ ಆನ್ಲೈನ್ ಪ್ರತಿಭಟನೆ ನಡೆಸಲಾಯಿತು.<br /><br />ಕಳೆದ ವರ್ಷವೇ ಕೋವಿಡ್ ಎರಡನೆ ಅಲೆಯ ತೀವ್ರತೆ ಬಗ್ಗೆ ತಜ್ಞರು ಸರ್ಕಾರವನ್ನು ಎಚ್ಚರಿಸಿದ್ದರು. ಆದರೆ, ಸರ್ಕಾರ ತನ್ನ ಜವಾಬ್ದಾರಿ ಮತ್ತು ಕರ್ತವ್ಯ ನಿರ್ಲಕ್ಷಿಸಿ ಜನರ ಮಾರಣ ಹೋಮ ನಡೆಸುತ್ತಿದೆ ಎಂದು ಆರೋಪಿಸಿದರು.</p>.<p>ದೇಶದಲ್ಲಿಂದು ಸಂಭವಿಸುತ್ತಿರುವ ಸಾವುಗಳು ಕೇವಲ ಕೋವಿಡ್ ಸಾವುಗಳಲ್ಲ, ಅವು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಿರ್ಲಕ್ಷ್ಯದಿಂದುಂಟಾದ ಪ್ರಾಯೋಜಿತ ಕೊಲೆಗಳಾಗಿವೆ ಎಂದು ದೂರಿದರು.</p>.<p>ತಜ್ಞರ ಮುನ್ನೆಚ್ಚರಿಕೆಯಿಂದ ಸರ್ಕಾರಗಳು ಎಚ್ಚೆತ್ತು ವೆಂಟಿಲೇಟರ್, ಆಕ್ಸಿಜನ್, ವ್ಯಾಕ್ಸಿನ್ ತಯಾರಿಯಲ್ಲಿಟ್ಟುಕೊಂಡಿದ್ದರೆ ಜನ ಈ ರೀತಿ ಸಾಯುವ ಪರಿಸ್ಥಿತಿಯುಂಟಾಗುತ್ತಿರಲಿಲ್ಲ ಎಂದರು.</p>.<p>ಕೋವಿಡ್ ಎದುರಿಸಲು ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳುವ ಬದಲು ಈ ದೇಶದ ಪ್ರಧಾನಿ ಐದು ರಾಜ್ಯಗಳ ಚುನಾವಣೆಯಲ್ಲಿ ತೊಡಗಿದ್ದರು. ಇತ್ತ ರಾಜ್ಯ ಸರ್ಕಾರವೂ ಉಪಚುನಾವಣೆಗಳಲ್ಲಿ ಮುಳುಗಿರುವುದರಿಂದಾಗಿ ಈ ಪರಿಸ್ಥಿತಿ ಇನ್ನಷ್ಟು ಉಲ್ಬಣಗೊಂಡಿತು. ಪ್ರಧಾನಿ ಮತ್ತು ಮುಖ್ಯಮಂತ್ರಿಗಳಿಗೆ ಜನತೆ ವೋಟಿನ ರೂಪದಲ್ಲಿ ಕಂಡರೆ ಹೊರತು ಮನುಷ್ಯರ ರೂಪದಲ್ಲಿ ಕಾಣಲೇ ಇಲ್ಲ ಎಂದು ಆರೋಪಿಸಿದರು.</p>.<p>ಜಿಲ್ಲೆಯ ನಗರ ಮತ್ತು ಗ್ರಾಮೀಣ ಪ್ರದೇಶಗಳ ಆಸ್ಪತ್ರೆಗಳಲ್ಲೂ ಆಕ್ಸಿಜನ್, ವೆಂಟಿಲೇಟರ್, ಬೆಡ್, ವ್ಯಾಕ್ಸಿನ್ಗಳನ್ನು ಒದಗಿಸಬೇಕು. ಈ ರೋಗದಿಂದ ಗ್ರಾಮೀಣ ಪ್ರದೇಶದಲ್ಲಿ ಪ್ರತಿನಿತ್ಯ ಸಾವುಗಳು ಸಾಮಾನ್ಯವಾಗಿವೆ. ಹಾಗಾಗಿ ಈ ಗ್ರಾಮೀಣ ಜನರತ್ತಲೂ ಜಿಲ್ಲಾಡಳಿತ ಗಮನ ವಹಿಸಬೇಕು ಎಂದು ಆಗ್ರಹಿಸಿದರು.</p>.<p>ಲಾಕ್ಡೌನ್ನಿಂದಾಗಿ ಬೀದಿಗೆ ಬಿದ್ದ ಎಲ್ಲ ದುಡಿಯುವ ವರ್ಗದ ಜನತೆಗೆ ಆಂಧ್ರ ಮತ್ತು ಕೇರಳ ರಾಜ್ಯಗಳ ಮಾದರಿಯಂತೆ ಆರ್ಥಿಕ ಸಹಾಯ ಒದಗಿಸಬೇಕು ಹಾಗೂ ಕೋವಿಡ್ ಪೀಡಿತ ಎಲ್ಲ ಬಡ ಕುಟುಂಬಗಳಿಗೂ ಸೂಕ್ತ ಪರಿಹಾರವನ್ನು ಒದಗಿಸಿ ಅವರನ್ನು ಮೇಲೆತ್ತಲು ಪ್ರಯತ್ನಿಸಬೇಕು ಎಂದು ಆಗ್ರಹಿಸಿದರು.</p>.<p>ನರೇಗಾ ಯೋಜನೆಯಡಿ ಎಲ್ಲ ಗ್ರಾಮೀಣ ಜನರಿಗೂ ಉದ್ಯೋಗ ಕಲ್ಪಿಸಬೇಕು ಹಾಗು ಉದ್ಯೋಗದ ದಿನಗಳನ್ನು ಇನ್ನು ಮುಂದೆ 300 ದಿನಗಳಿಗೆ ವಿಸ್ತರಿಸಿ, ಕೂಲಿಯನ್ನೂ ಹೆಚ್ಚಿಸಬೇಕು ಎಂದು ಒತ್ತಾಯಿಸಿದರು.</p>.<p>ಲಾಕ್ ಡೌನ್ ನಿಂದಾಗಿ ತೋಟಗಾರಿಕಾ ಮತ್ತು ತರಕಾರಿ ಬೆಳೆದ ರೈತರುಗಳು ಅಪಾರ ಆರ್ಥಿಕನಷ್ಟಕ್ಕೆ ಸಿಲುಕಿದ್ದು, ಈ ರೈತರಿಗೂ ಪರಿಹಾರ ಕಲ್ಪಿಸಬೇಕು ಎಂದು ಒತ್ತಯಿಸಿದರು.</p>.<p>ಪ್ರತಿಭಟನೆಯಲ್ಲಿ ಜಿಲ್ಲಾ ಕಾರ್ಯದರ್ಶಿ ಬಿ.ಭಗವಾನರೆಡ್ಡಿ, ಜಿಲ್ಲಾ ಸಮಿತಿಯ ಸದಸ್ಯರಾದ ಮಲ್ಲಿಕಾರ್ಜುನ, ಬಾಳು ಜೇವೂರ, ಸಿದ್ಧಲಿಂಗ ಬಾಗೇವಾಡಿ, ಭರತಕುಮಾರ, ಶರತ್, ಶ್ರೀಕಾಂತ, ಶಿವಬಾಳಮ್ಮ, ಸುನೀಲ, ಗೀತಾ, ಕಮಲಾ ತೇಲಿ ಕಾಶಿಬಾಯಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>