<p><strong>ವಿಜಯಪುರ</strong>:ಕೋವಿಡ್-19 ಎರಡನೇ ಅಲೆಯನ್ನು ತಡೆಗಟ್ಟುವಲ್ಲಿ ಸರ್ಕಾರದನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆಜಿಲ್ಲಾ ಸಮಿತಿಯಿಂದ ಶನಿವಾರ ಆನ್ಲೈನ್ ಮೂಲಕ ಪ್ರತಿಭಟನೆ ನಡೆಸಲಾಯಿತು.</p>.<p>ಕೋವಿಡ್ನಿಂದಹಳ್ಳಿ, ನಗರಗಳಲ್ಲಿ ಸಾಕಷ್ಟು ಜನರ ಸಾವು ನೋವುಗಳನ್ನು ಸಂಭವಿಸುತ್ತಿದ್ದರೂ ಜನರಿಗೆ ಸೂಕ್ತ ವೈದ್ಯಕೀಯ ಸೌಲಭ್ಯ ಒದಗಿಸಲುವಲ್ಲಿ ಕೇಂದ್ರ, ರಾಜ್ಯ ಸರ್ಕಾರಗಳುಸಂಪೂರ್ಣ ವಿಫಲವಾಗಿವೆ ಎಂದು ಆರೋಪಿಸಿದರು.</p>.<p>ರಾಜಧಾನಿ ಬೆಂಗಳೂರಿನಿಂದ ಹಿಡಿದು ತಾಲ್ಲೂಕು ಮಟ್ಟದವರೆಗೆ ಆಮ್ಲಜನಕ, ಹಾಸಿಗೆ, ಔಷಧ, ಅಂಬುಲೆನ್ಸ್, ಐಸಿಯು ಹಾಗೂ ಆರೋಗ್ಯ ಸಿಬ್ಬಂದಿಗಳ ತೀವ್ರ ಕೊರತೆ ಕಂಡುಬರುತ್ತಿದೆ. ಅಲ್ಲದೆ, ಕೋವಿಡ್ ಲಸಿಕೆಗಳ ತೀವ್ರ ಕೊರತೆಯೂ ಇದೆ ಎಂದು ದೂರಿದರು.</p>.<p>ಸರ್ಕಾರಿ ಆಸ್ಪತ್ರೆಗಳಲ್ಲಿ ಲಭ್ಯವಿರುವ ಸೌಲಭ್ಯಗಳು ಸಾಲದೇಇರುವುದರಿಂದ ಜನಸಾಮಾನ್ಯರು ಖಾಸಗಿ ಆಸ್ಪತ್ರೆಗಳತ್ತ ಧಾವಿಸುತ್ತಿದ್ದಾರೆ. ಆದರೆ, ಅಲ್ಲಿನ ದುಬಾರಿ ವೆಚ್ಚವನ್ನು ಭರಿಸಲಾಗದೇ ಅಸಹಾಯಕತೆಯಿಂದ ಒದ್ದಾಡುತ್ತಿದ್ದಾರೆ ಎಂದು ಹೇಳಿದರು.</p>.<p>ರಾಜ್ಯ ಸರ್ಕಾರವು ಇಂದಿನ ಆರೋಗ್ಯ ವ್ಯವಸ್ಥೆಯಲ್ಲಿನ ಬಿಕ್ಕಟ್ಟನ್ನು ಅತೀ ತುರ್ತು ಎಂದು ಪರಿಗಣಿಸಿ ಎಲ್ಲ ಅಮೂಲ್ಯ ಜೀವಗಳ ರಕ್ಷಣೆಗಾಗಿ ಸಂಪನ್ಮೂಲಗಳನ್ನು ಕ್ರೋಢೀಕರಿಸಿ ಈ ಕೂಡಲೇ ಸಾಕಷ್ಟು ಆಮ್ಲಜನಕವನ್ನು ವಿತರಿಸಬೇಕು ಎಂದು ಆಗ್ರಹಿಸಿದರು.</p>.<p>ಈ ಕೂಡಲೇ ಬೇಡಿಕೆಗನುಗುಣವಾಗಿ ಎಲ್ಲ ಆಸ್ಪತ್ರೆಗಳಿಗೂ ಉಚಿತ ಆಮ್ಲಜನಕ ವಿತರಣೆ ಮಾಡಬೇಕು, ಎಲ್ಲ ನಾಗರಿಕರಿಗೂ ಉಚಿತ ಕೋವಿಡ್ ಲಸಿಕೆ ಹಾಗೂ ಉಚಿತ ಚಿಕಿತ್ಸೆ ಒದಗಿಸಬೇಕು ಎಂದು ಆಗ್ರಹಿಸಿದರು.</p>.<p>ನಿರ್ಲಕ್ಷ್ಯಕ್ಕೊಳಗಾಗುತ್ತಿರುವ ಕೋವಿಡೇತರ ಕ್ಯಾನ್ಸರ್, ಟಿಬಿ, ದೀರ್ಘಕಾಲದ ಮೂತ್ರಪಿಂಡದ ವೈಫಲ್ಯ, ಹೃದ್ರೋಗ ಹಾಗೂ ನರರೋಗದ ಸಮಸ್ಯೆಗೊಳಗಾದ ರೋಗಿಗಳನ್ನು ನಿರ್ವಹಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಹಾಗೂ ಸ್ಥಗಿತಗೊಂಡಿರುವ ಇತರೆ ಲಸಿಕಾ ಕಾರ್ಯಕ್ರಮಗಳನ್ನು ಪುನರಾರಂಭಿಸಿ, ಸಾಂಕ್ರಾಮಿಕ ರೋಗಗಳ ಹರಡುವಿಕೆಯನ್ನು ತಡೆಗಟ್ಟಬೇಕು ಎಂದು ಒತ್ತಾಯಿಸಿದರು.</p>.<p>ಆನ್ಲೈನ್ ಚಳವಳಿಯಲ್ಲಿ ಎಐಎಎಂಎಸ್ಎಸ್ನ ಜಿಲ್ಲಾ ಸಂಚಾಲಕಿ ಶಿವಬಾಳಮ್ಮ ಕೊಂಡುಗುಳಿ, ಸಹ ಸಂಚಾಲಕಿ ಗೀತಾ ಹೊಸದುರ್ಗ, ಸದಸ್ಯರಾದ ಶಿವರಂಜನಿ ಎಸ್. ಬಿ., ಸೌಮ್ಯ, ಸುಷ್ಮಾ, ಕಮಲ ತೇಲಿ, ಸೊನಾಲಿ, ಸುಮಯ, ಶಿವರಂಜನಿ ಎಸ್.ಬಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ</strong>:ಕೋವಿಡ್-19 ಎರಡನೇ ಅಲೆಯನ್ನು ತಡೆಗಟ್ಟುವಲ್ಲಿ ಸರ್ಕಾರದನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆಜಿಲ್ಲಾ ಸಮಿತಿಯಿಂದ ಶನಿವಾರ ಆನ್ಲೈನ್ ಮೂಲಕ ಪ್ರತಿಭಟನೆ ನಡೆಸಲಾಯಿತು.</p>.<p>ಕೋವಿಡ್ನಿಂದಹಳ್ಳಿ, ನಗರಗಳಲ್ಲಿ ಸಾಕಷ್ಟು ಜನರ ಸಾವು ನೋವುಗಳನ್ನು ಸಂಭವಿಸುತ್ತಿದ್ದರೂ ಜನರಿಗೆ ಸೂಕ್ತ ವೈದ್ಯಕೀಯ ಸೌಲಭ್ಯ ಒದಗಿಸಲುವಲ್ಲಿ ಕೇಂದ್ರ, ರಾಜ್ಯ ಸರ್ಕಾರಗಳುಸಂಪೂರ್ಣ ವಿಫಲವಾಗಿವೆ ಎಂದು ಆರೋಪಿಸಿದರು.</p>.<p>ರಾಜಧಾನಿ ಬೆಂಗಳೂರಿನಿಂದ ಹಿಡಿದು ತಾಲ್ಲೂಕು ಮಟ್ಟದವರೆಗೆ ಆಮ್ಲಜನಕ, ಹಾಸಿಗೆ, ಔಷಧ, ಅಂಬುಲೆನ್ಸ್, ಐಸಿಯು ಹಾಗೂ ಆರೋಗ್ಯ ಸಿಬ್ಬಂದಿಗಳ ತೀವ್ರ ಕೊರತೆ ಕಂಡುಬರುತ್ತಿದೆ. ಅಲ್ಲದೆ, ಕೋವಿಡ್ ಲಸಿಕೆಗಳ ತೀವ್ರ ಕೊರತೆಯೂ ಇದೆ ಎಂದು ದೂರಿದರು.</p>.<p>ಸರ್ಕಾರಿ ಆಸ್ಪತ್ರೆಗಳಲ್ಲಿ ಲಭ್ಯವಿರುವ ಸೌಲಭ್ಯಗಳು ಸಾಲದೇಇರುವುದರಿಂದ ಜನಸಾಮಾನ್ಯರು ಖಾಸಗಿ ಆಸ್ಪತ್ರೆಗಳತ್ತ ಧಾವಿಸುತ್ತಿದ್ದಾರೆ. ಆದರೆ, ಅಲ್ಲಿನ ದುಬಾರಿ ವೆಚ್ಚವನ್ನು ಭರಿಸಲಾಗದೇ ಅಸಹಾಯಕತೆಯಿಂದ ಒದ್ದಾಡುತ್ತಿದ್ದಾರೆ ಎಂದು ಹೇಳಿದರು.</p>.<p>ರಾಜ್ಯ ಸರ್ಕಾರವು ಇಂದಿನ ಆರೋಗ್ಯ ವ್ಯವಸ್ಥೆಯಲ್ಲಿನ ಬಿಕ್ಕಟ್ಟನ್ನು ಅತೀ ತುರ್ತು ಎಂದು ಪರಿಗಣಿಸಿ ಎಲ್ಲ ಅಮೂಲ್ಯ ಜೀವಗಳ ರಕ್ಷಣೆಗಾಗಿ ಸಂಪನ್ಮೂಲಗಳನ್ನು ಕ್ರೋಢೀಕರಿಸಿ ಈ ಕೂಡಲೇ ಸಾಕಷ್ಟು ಆಮ್ಲಜನಕವನ್ನು ವಿತರಿಸಬೇಕು ಎಂದು ಆಗ್ರಹಿಸಿದರು.</p>.<p>ಈ ಕೂಡಲೇ ಬೇಡಿಕೆಗನುಗುಣವಾಗಿ ಎಲ್ಲ ಆಸ್ಪತ್ರೆಗಳಿಗೂ ಉಚಿತ ಆಮ್ಲಜನಕ ವಿತರಣೆ ಮಾಡಬೇಕು, ಎಲ್ಲ ನಾಗರಿಕರಿಗೂ ಉಚಿತ ಕೋವಿಡ್ ಲಸಿಕೆ ಹಾಗೂ ಉಚಿತ ಚಿಕಿತ್ಸೆ ಒದಗಿಸಬೇಕು ಎಂದು ಆಗ್ರಹಿಸಿದರು.</p>.<p>ನಿರ್ಲಕ್ಷ್ಯಕ್ಕೊಳಗಾಗುತ್ತಿರುವ ಕೋವಿಡೇತರ ಕ್ಯಾನ್ಸರ್, ಟಿಬಿ, ದೀರ್ಘಕಾಲದ ಮೂತ್ರಪಿಂಡದ ವೈಫಲ್ಯ, ಹೃದ್ರೋಗ ಹಾಗೂ ನರರೋಗದ ಸಮಸ್ಯೆಗೊಳಗಾದ ರೋಗಿಗಳನ್ನು ನಿರ್ವಹಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಹಾಗೂ ಸ್ಥಗಿತಗೊಂಡಿರುವ ಇತರೆ ಲಸಿಕಾ ಕಾರ್ಯಕ್ರಮಗಳನ್ನು ಪುನರಾರಂಭಿಸಿ, ಸಾಂಕ್ರಾಮಿಕ ರೋಗಗಳ ಹರಡುವಿಕೆಯನ್ನು ತಡೆಗಟ್ಟಬೇಕು ಎಂದು ಒತ್ತಾಯಿಸಿದರು.</p>.<p>ಆನ್ಲೈನ್ ಚಳವಳಿಯಲ್ಲಿ ಎಐಎಎಂಎಸ್ಎಸ್ನ ಜಿಲ್ಲಾ ಸಂಚಾಲಕಿ ಶಿವಬಾಳಮ್ಮ ಕೊಂಡುಗುಳಿ, ಸಹ ಸಂಚಾಲಕಿ ಗೀತಾ ಹೊಸದುರ್ಗ, ಸದಸ್ಯರಾದ ಶಿವರಂಜನಿ ಎಸ್. ಬಿ., ಸೌಮ್ಯ, ಸುಷ್ಮಾ, ಕಮಲ ತೇಲಿ, ಸೊನಾಲಿ, ಸುಮಯ, ಶಿವರಂಜನಿ ಎಸ್.ಬಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>