<p><strong>ವಿಜಯಪುರ: </strong>ಜಿಲ್ಲೆಯಲ್ಲಿ ಸೋಮವಾರ ಕೋವಿಡ್ ಸೋಂಕು 308 ಜನರಲ್ಲಿ ಕಾಣಿಸಿಕೊಂಡಿದೆ. ಒಬ್ಬರು ಕೋವಿಡ್ನಿಂದ ಸಾವಿಗೀಡಾಗಿದ್ದಾರೆ.</p>.<p>ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ 17 ಸಾವಿರದ ಗಡಿ ದಾಟಿದೆ. ಅಲ್ಲದೇ, ಇದುವರೆಗೆ ಕೋವಿಡ್ನಿಂದ 216 ಜನ ಸಾವಿಗೀಡಾಗಿದ್ದಾರೆ.</p>.<p>ಸೋಮವಾರ ವಿಜಯಪುರ ನಗರವೊಂದರಲ್ಲೇ 153 ಜನರಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ವಿಜಯಪುರ ಗ್ರಾಮೀಣ 21, ಮುದ್ದೇಬಿಹಾಳ 56, ಸಿಂದಗಿಯಲ್ಲಿ 31 ಹಾಗೂ ಬಬಲೇಶ್ವರದಲ್ಲಿ ಒಂಬತ್ತು ಸೇರಿದಂತೆ ಜಿಲ್ಲೆಯಲ್ಲಿ 308 ಜನರಿಗೆ ಕೋವಿಡ್ ದೃಢವಾಗಿದೆ.</p>.<p>ತೀವ್ರ ಉಸಿರಾಟದ ತೊಂದರೆ, ಐಎಲ್ಐ ಸಂಬಂಧಿ ಕಾಯಿಲೆಗಳಿಂದ ಬಳಲಿ, ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಕೋವಿಡ್ ಸೋಂಕಿತ 68 ವರ್ಷ ವಯೋಮಾನದ ವ್ಯಕ್ತಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್ ತಿಳಿಸಿದ್ದಾರೆ.</p>.<p class="Subhead"><strong>ಪ್ರಕರಣ ದಾಖಲು:</strong></p>.<p>ಕೋವಿಡ್ ಹಿನ್ನೆಲೆಯಲ್ಲಿ ವಿಧಿಸಲಾಗಿದ್ದ ನಿಷೇಧಾಜ್ಞೆ ನಡುವೆಯೂ ಭಾನುವಾರ ಸಿಂದಗಿ ತಾಲ್ಲೂಕಿನ ಮಲಘಾಣದಲ್ಲಿ ಜಡೆ ಶಾಂತಲಿಂಗೇಶ್ವರ ಜಾತ್ರೆ ಆಯೋಜಿಸಿದ್ದ ಹಿನ್ನೆಲೆಯಲ್ಲಿ ಜಾತ್ರಾ ಕಮಿಟಿ ಹಾಗೂ ಗ್ರಾಮದ ಮುಖಂಡರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ: </strong>ಜಿಲ್ಲೆಯಲ್ಲಿ ಸೋಮವಾರ ಕೋವಿಡ್ ಸೋಂಕು 308 ಜನರಲ್ಲಿ ಕಾಣಿಸಿಕೊಂಡಿದೆ. ಒಬ್ಬರು ಕೋವಿಡ್ನಿಂದ ಸಾವಿಗೀಡಾಗಿದ್ದಾರೆ.</p>.<p>ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ 17 ಸಾವಿರದ ಗಡಿ ದಾಟಿದೆ. ಅಲ್ಲದೇ, ಇದುವರೆಗೆ ಕೋವಿಡ್ನಿಂದ 216 ಜನ ಸಾವಿಗೀಡಾಗಿದ್ದಾರೆ.</p>.<p>ಸೋಮವಾರ ವಿಜಯಪುರ ನಗರವೊಂದರಲ್ಲೇ 153 ಜನರಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ವಿಜಯಪುರ ಗ್ರಾಮೀಣ 21, ಮುದ್ದೇಬಿಹಾಳ 56, ಸಿಂದಗಿಯಲ್ಲಿ 31 ಹಾಗೂ ಬಬಲೇಶ್ವರದಲ್ಲಿ ಒಂಬತ್ತು ಸೇರಿದಂತೆ ಜಿಲ್ಲೆಯಲ್ಲಿ 308 ಜನರಿಗೆ ಕೋವಿಡ್ ದೃಢವಾಗಿದೆ.</p>.<p>ತೀವ್ರ ಉಸಿರಾಟದ ತೊಂದರೆ, ಐಎಲ್ಐ ಸಂಬಂಧಿ ಕಾಯಿಲೆಗಳಿಂದ ಬಳಲಿ, ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಕೋವಿಡ್ ಸೋಂಕಿತ 68 ವರ್ಷ ವಯೋಮಾನದ ವ್ಯಕ್ತಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್ ತಿಳಿಸಿದ್ದಾರೆ.</p>.<p class="Subhead"><strong>ಪ್ರಕರಣ ದಾಖಲು:</strong></p>.<p>ಕೋವಿಡ್ ಹಿನ್ನೆಲೆಯಲ್ಲಿ ವಿಧಿಸಲಾಗಿದ್ದ ನಿಷೇಧಾಜ್ಞೆ ನಡುವೆಯೂ ಭಾನುವಾರ ಸಿಂದಗಿ ತಾಲ್ಲೂಕಿನ ಮಲಘಾಣದಲ್ಲಿ ಜಡೆ ಶಾಂತಲಿಂಗೇಶ್ವರ ಜಾತ್ರೆ ಆಯೋಜಿಸಿದ್ದ ಹಿನ್ನೆಲೆಯಲ್ಲಿ ಜಾತ್ರಾ ಕಮಿಟಿ ಹಾಗೂ ಗ್ರಾಮದ ಮುಖಂಡರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>