ವಿಜಯಪುರ: ಇಲ್ಲಿನ ಆದರ್ಶ ನಗರ ಪೊಲೀಸ್ ಠಾಣೆಯ ಮಹಿಳಾ ಪಿಎಸ್ಐ ಸುಲೋಚನಾ ಭಜಂತ್ರಿ(45) ಕೋವಿಡ್ನಿಂದ ಸೋಮವಾರ ನಿಧನರಾಗಿದ್ದಾರೆ.
ಬೆಳಗಾವಿ ಉಪ ಚುನಾವಣೆ ಕರ್ತವ್ಯ ಮುಗಿಸಿಕೊಂಡು, ಈಚೆಗೆ ವಾಪಸ್ಸಾಗಿದ್ದರು. ಭಾನುವಾರ ಏಕಾಏಕಿ ಉಸಿರಾಟ ತೊಂದರೆಯಾಗಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು.
ಅವರಿಗೆ ಪತಿ, ಒಬ್ಬ ಪುತ್ರ, ಒಬ್ಬ ಪುತ್ರಿ ಇದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನುಮಪ್ ಅಗರವಾಲ್ ಅವರು ಭಜಂತ್ರಿ ಅವರ ಸಾವಿಗೆ ಸಂತಾಪ ವ್ಯಕ್ತಪಡಿಸಿದ್ದು, ಸರ್ಕಾರದಿಂದ ಸೂಕ್ತ ಪರಿಹಾರವನ್ನು ಅವರ ಕುಟುಂಬಕ್ಕೆ ಒದಗಿಸಲು ಕ್ರಮಕೈಗೊಳ್ಳುವುದಾಗಿ ತಿಳಿಸಿದ್ದಾರೆ.