<p><strong>ವಿಜಯಪುರ: </strong>ಮುದ್ದೇಬಿಹಾಳ ಮತ ಕ್ಷೇತ್ರದ 10 ಸಾವಿರ ಮಹಿಳೆಯರಿಗೆ ಹಸುಗಳನ್ನು ಕೊಡಿಸುವ ಮೂಲಕ ಕ್ಷೀರ ಕ್ರಾಂತಿ ಮಾಡಲು ಉದ್ದೇಶಿಸಲಾಗಿದೆ ಎಂದು ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಹೇಳಿದರು.</p>.<p>ನಾಲತವಾಡದ ಶ್ರೀ ಶರಣ ವೀರೇಶ್ವರ ಮಹಾವಿದ್ಯಾಲಯ ಆವರಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಮುದ್ದೇಬಿಹಾಳ ವಿಧಾನಸಭಾ ಕ್ಷೇತ್ರದ ವಿವಿಧ ಇಲಾಖೆಗಳ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.</p>.<p>ಆಲಮಟ್ಟಿ, ನಾರಾಯಣಪುರ ಜಲಾಶಯದ ವ್ಯಾಪ್ತಿಯಲ್ಲಿ ಮೀನುಗಾರಿಕೆಗೆ ಉತ್ತೇಜನ ನೀಡಲಾಗುವುದು ಎಂದರು.</p>.<p>2008ರಲ್ಲಿ ನಾನು ಪ್ರಥಮ ಶಾಸಕನಾಗಿದ್ದಾಗ ನೀರಾವರಿ ಯೋಜನೆಗಾಗಿ ದೇವರ ಹಿಪ್ಪರಗಿಯಿಂದ ಆಲಮಟ್ಟಿಗೆ ಪಾದಯಾತ್ರೆ ಮತ್ತು ಬಂಡಿಯಾತ್ರೆ ಮಾಡಿದಾಗ ನನಗೆ ಅಂದಿನ ನೀರಾವರಿ ಸಚಿವರಾಗಿದ್ದ ಬಸವರಾಜ ಬೊಮ್ಮಾಯಿ ಬೆಂಬಲ ನೀಡಿದ ಪರಿಣಾಮ ಈ ಭಾಗ ಇಂದು ನೀರಾವರಿಗೆ ಒಳಪಟ್ಟಿದೆ ಎಂದು ಹೇಳಿದರು.</p>.<p>ಕಾಂಗ್ರೆಸ್ ಅವಧಿಯಲ್ಲಿ ಒಂದೇ ಒಂದು ಎಕರೆ ನೀರಾವರಿ ಆಗಿಲ್ಲ. ಆದರೆ, ನಾನು ಮಾಡಿದ್ದು ಎಂದು ಸುಳ್ಳು ಹೇಳುತ್ತಾರೆ. ಮುದ್ದೇಬಿಹಾಳ ಕ್ಷೇತ್ರದ 21 ಕೆರೆಗಳಿಗೆ ನೀರು ತುಂಬುವ ಯೋಜನೆಗೆ ಆದ್ಯತೆ ನೀಡಿದ್ದು ನಾನು ಮತ್ತು ನಮ್ಮ ಸರ್ಕಾರ. ಈ ಬಗ್ಗೆ ದಾಖಲೆ ನೀಡುತ್ತೇನೆ ಎಂದು ಸಮರ್ಥಿಸಿಕೊಂಡರು.</p>.<p>ಕಳೆದ ಐದು ವರ್ಷಗಳ ಅವಧಿಯಲ್ಲಿ ಮುದ್ದೇಬಿಹಾಳ ಕ್ಷೇತ್ರಕ್ಕೆ ಕೇಳಿದಷ್ಟು ಅನುದಾನವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ನೀಡಿದ್ದಾರೆ. ಇದುವರೆಗೆ ಕ್ಷೇತ್ರಕ್ಕೆ ₹3600 ಕೋಟಿ ಅನುದಾನ ತಂದಿದ್ದೇನೆ ಎಂದರು.</p>.<p>ಕ್ಷೇತ್ರದ 126 ಹಳ್ಳಿಯಲ್ಲಿ 118 ಹಳ್ಳಿಗಳಿಗೆ ಸಿಸಿ ರಸ್ತೆ, ಚರಂಡಿಯನ್ನು ₹ 380 ಕೋಟಿ ಅನುದಾನದಲ್ಲಿ ಮಾಡಿದ್ದೇನೆ. ಕ್ಷೇತ್ರದ ಗ್ರಾಮೀಣ ಪ್ರದೇಶಕ್ಕೆ 6 ಸಾವಿರ ಮನೆ ಮಂಜೂರಾಗಿದೆ. ಇದೀಗ 28 ಗ್ರಾಮ ಪಂಚಾಯ್ತಿಗಳ ವ್ಯಾಪ್ತಿಯಲ್ಲಿ 4 ಸಾವಿರ ಫಲಾನುಭವಿಗಳಿಗೆ ಮನೆಗಳ ನಿರ್ಮಾಣಕ್ಕೆ ಆದೇಶ ಪತ್ರವನ್ನು ಮುಖ್ಯಮಂತ್ರಿ ಬೊಮ್ಮಾಯಿ ಅವರ ಮೂಲಕ ನೀಡಲಾಗುತ್ತಿದೆ ಎಂದು ಹೇಳಿದರು.</p>.<p>ಮುದ್ದೇಬಿಹಾಳ ಭೂಮಿಯ ಕಣಕಣದಲ್ಲಿ ವಿಜಯನಗರದ ವೀರ ಸೈನಿಕರ ರಕ್ತ ಬೆರೆತಿದೆ. ಇದು ವೀರರ, ಶೂರರ ಭೂಮಿಯಾಗಿದೆ. ಇಲ್ಲಿಯ ಐತಿಹಾಸಿಕ ಕುರುಹುಗಳನ್ನು ಸಂರಕ್ಷಿಸಲು ಸರ್ಕಾರ ಆದ್ಯತೆ ನೀಡಿದೆ ಎಂದರು.</p>.<p>***</p>.<p class="Briefhead">ಉತ್ತರ ಕರ್ನಾಟಕದ ನಾಯಕ ನಡಹಳ್ಳಿ</p>.<p>ವಿಜಯಪುರ: ಶಾಸಕ ನಡಹಳ್ಳಿ ನನ್ನ ಕಿರಿಯ ಸಹೋದರನಿದ್ದಂತೆ, ಅವರು ಹಂತಹಂತವಾಗಿ ಬೆಳೆದು ಬಂದ ಹಾದಿ ನೋಡಿದ್ದೇನೆ, ಎಲ್ಲರ ಹೃದಯ ಗೆದ್ದು ಉತ್ತರ ಕರ್ನಾಟಕದ ನಾಯಕನಾಗಿ ಹೊರಹೊಮ್ಮಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.</p>.<p>ನಾಲತವಾಡದಲ್ಲಿ ಮಂಗಳವಾರ ನಡೆದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>ಒಂದು ಕ್ಷೇತ್ರದ ಸಮಗ್ರ ಅಭಿವೃದ್ಧಿ ಹೇಗೆ ಮಾಡಬಹುದು ಎಂಬುದಕ್ಕೆ ನಡಹಳ್ಳಿ ಮತ್ತು ಮುದ್ದೇಬಿಹಾಳ ಸೂಕ್ತ ಉದಾಹರಣೆಯಾಗಿದೆ. ಮುದ್ದೇಬಿಹಾಳದ ರೀತಿ ರಾಜ್ಯದ ಎಲ್ಲ ಕ್ಷೇತ್ರದ ಅಭಿವೃದ್ಧಿಗೆ ಆದ್ಯತೆ ನೀಡುತ್ತೇವೆ ಎಂದರು.</p>.<p>ಮುದ್ದೇಬಿಹಾಳ ಕ್ಷೇತ್ರದ ಭವ್ಯ ಭವಿಷ್ಯ ಬರೆಯಲು ನಡಹಳ್ಳಿ ದಕ್ಷತೆ, ಪ್ರಾಮಾಣಿಕತೆಯಿಂದ ಶ್ರಮಿಸುತ್ತಿದ್ದಾರೆ. ಐದು ವರ್ಷದ ಅವಧಿಯಲ್ಲಿ ₹4500 ಕೋಟಿ ಅನುದಾನ ತಂದು ದಾಖಲೆ ಬರೆದಿದ್ದಾರೆ ಎಂದು ಹೇಳಿದರು.</p>.<p>ನಡಹಳ್ಳಿ ಕ್ಷೇತ್ರದ ಅಭಿವೃದ್ಧಿಗೆ ಚನ್ನಾಗಿ ರಾಜಕೀಯ ಮಾಡುತ್ತಾರೆ, ಇಲ್ಲ ಎನ್ನಲು ಆಗದಂತೆ ನಮ್ಮನ್ನು ಕಟ್ಟಿಹಾಕುತ್ತಾರೆ ಎಂದರು.</p>.<p>ಈ ಬಾರಿಯ ಚುನಾವಣೆಯಲ್ಲಿ ನಡಹಳ್ಳಿ ಅವರನ್ನು 50 ಸಾವಿರ ಮತಗಳ ಅಂತರದಿಂದ ಆರಿಸಿ ತಂದರೆ ಅಭಿವೃದ್ಧಿ ಪರ್ವ ಮುಂದುವರಿಯಲಿದೆ. ಅದಕ್ಕೆ ನಿಮ್ಮ ಸಮ್ಮತಿಯ ಮುದ್ರೆ ಇದೆ ಎಂದು ತಿಳಿದುಕೊಳ್ಳುತ್ತೇನೆ ಎಂದರು.</p>.<p>ಮುದ್ದೇಬಿಹಾಳ ಮಾದರಿಯಾಗಿ ಅಭಿವೃದ್ಧಿ ಪಡಿಸಲು ನಡಹಳ್ಳಿ ಆದ್ಯತೆ ನೀಡಿದ್ದಾರೆ. ನಿಮ್ಮ ಮತಕ್ಕೆ 100ಕ್ಕೆ 100ರಷ್ಟು ಕೆಲಸ ಮಾಡಿದ್ದಾರೆ. ಅವರನ್ನು ಈ ಬಾರಿಯೂ ಬೆಂಬಲಿಸಬೇಕು ಎಂದು ಮನವಿ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ: </strong>ಮುದ್ದೇಬಿಹಾಳ ಮತ ಕ್ಷೇತ್ರದ 10 ಸಾವಿರ ಮಹಿಳೆಯರಿಗೆ ಹಸುಗಳನ್ನು ಕೊಡಿಸುವ ಮೂಲಕ ಕ್ಷೀರ ಕ್ರಾಂತಿ ಮಾಡಲು ಉದ್ದೇಶಿಸಲಾಗಿದೆ ಎಂದು ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಹೇಳಿದರು.</p>.<p>ನಾಲತವಾಡದ ಶ್ರೀ ಶರಣ ವೀರೇಶ್ವರ ಮಹಾವಿದ್ಯಾಲಯ ಆವರಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಮುದ್ದೇಬಿಹಾಳ ವಿಧಾನಸಭಾ ಕ್ಷೇತ್ರದ ವಿವಿಧ ಇಲಾಖೆಗಳ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.</p>.<p>ಆಲಮಟ್ಟಿ, ನಾರಾಯಣಪುರ ಜಲಾಶಯದ ವ್ಯಾಪ್ತಿಯಲ್ಲಿ ಮೀನುಗಾರಿಕೆಗೆ ಉತ್ತೇಜನ ನೀಡಲಾಗುವುದು ಎಂದರು.</p>.<p>2008ರಲ್ಲಿ ನಾನು ಪ್ರಥಮ ಶಾಸಕನಾಗಿದ್ದಾಗ ನೀರಾವರಿ ಯೋಜನೆಗಾಗಿ ದೇವರ ಹಿಪ್ಪರಗಿಯಿಂದ ಆಲಮಟ್ಟಿಗೆ ಪಾದಯಾತ್ರೆ ಮತ್ತು ಬಂಡಿಯಾತ್ರೆ ಮಾಡಿದಾಗ ನನಗೆ ಅಂದಿನ ನೀರಾವರಿ ಸಚಿವರಾಗಿದ್ದ ಬಸವರಾಜ ಬೊಮ್ಮಾಯಿ ಬೆಂಬಲ ನೀಡಿದ ಪರಿಣಾಮ ಈ ಭಾಗ ಇಂದು ನೀರಾವರಿಗೆ ಒಳಪಟ್ಟಿದೆ ಎಂದು ಹೇಳಿದರು.</p>.<p>ಕಾಂಗ್ರೆಸ್ ಅವಧಿಯಲ್ಲಿ ಒಂದೇ ಒಂದು ಎಕರೆ ನೀರಾವರಿ ಆಗಿಲ್ಲ. ಆದರೆ, ನಾನು ಮಾಡಿದ್ದು ಎಂದು ಸುಳ್ಳು ಹೇಳುತ್ತಾರೆ. ಮುದ್ದೇಬಿಹಾಳ ಕ್ಷೇತ್ರದ 21 ಕೆರೆಗಳಿಗೆ ನೀರು ತುಂಬುವ ಯೋಜನೆಗೆ ಆದ್ಯತೆ ನೀಡಿದ್ದು ನಾನು ಮತ್ತು ನಮ್ಮ ಸರ್ಕಾರ. ಈ ಬಗ್ಗೆ ದಾಖಲೆ ನೀಡುತ್ತೇನೆ ಎಂದು ಸಮರ್ಥಿಸಿಕೊಂಡರು.</p>.<p>ಕಳೆದ ಐದು ವರ್ಷಗಳ ಅವಧಿಯಲ್ಲಿ ಮುದ್ದೇಬಿಹಾಳ ಕ್ಷೇತ್ರಕ್ಕೆ ಕೇಳಿದಷ್ಟು ಅನುದಾನವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ನೀಡಿದ್ದಾರೆ. ಇದುವರೆಗೆ ಕ್ಷೇತ್ರಕ್ಕೆ ₹3600 ಕೋಟಿ ಅನುದಾನ ತಂದಿದ್ದೇನೆ ಎಂದರು.</p>.<p>ಕ್ಷೇತ್ರದ 126 ಹಳ್ಳಿಯಲ್ಲಿ 118 ಹಳ್ಳಿಗಳಿಗೆ ಸಿಸಿ ರಸ್ತೆ, ಚರಂಡಿಯನ್ನು ₹ 380 ಕೋಟಿ ಅನುದಾನದಲ್ಲಿ ಮಾಡಿದ್ದೇನೆ. ಕ್ಷೇತ್ರದ ಗ್ರಾಮೀಣ ಪ್ರದೇಶಕ್ಕೆ 6 ಸಾವಿರ ಮನೆ ಮಂಜೂರಾಗಿದೆ. ಇದೀಗ 28 ಗ್ರಾಮ ಪಂಚಾಯ್ತಿಗಳ ವ್ಯಾಪ್ತಿಯಲ್ಲಿ 4 ಸಾವಿರ ಫಲಾನುಭವಿಗಳಿಗೆ ಮನೆಗಳ ನಿರ್ಮಾಣಕ್ಕೆ ಆದೇಶ ಪತ್ರವನ್ನು ಮುಖ್ಯಮಂತ್ರಿ ಬೊಮ್ಮಾಯಿ ಅವರ ಮೂಲಕ ನೀಡಲಾಗುತ್ತಿದೆ ಎಂದು ಹೇಳಿದರು.</p>.<p>ಮುದ್ದೇಬಿಹಾಳ ಭೂಮಿಯ ಕಣಕಣದಲ್ಲಿ ವಿಜಯನಗರದ ವೀರ ಸೈನಿಕರ ರಕ್ತ ಬೆರೆತಿದೆ. ಇದು ವೀರರ, ಶೂರರ ಭೂಮಿಯಾಗಿದೆ. ಇಲ್ಲಿಯ ಐತಿಹಾಸಿಕ ಕುರುಹುಗಳನ್ನು ಸಂರಕ್ಷಿಸಲು ಸರ್ಕಾರ ಆದ್ಯತೆ ನೀಡಿದೆ ಎಂದರು.</p>.<p>***</p>.<p class="Briefhead">ಉತ್ತರ ಕರ್ನಾಟಕದ ನಾಯಕ ನಡಹಳ್ಳಿ</p>.<p>ವಿಜಯಪುರ: ಶಾಸಕ ನಡಹಳ್ಳಿ ನನ್ನ ಕಿರಿಯ ಸಹೋದರನಿದ್ದಂತೆ, ಅವರು ಹಂತಹಂತವಾಗಿ ಬೆಳೆದು ಬಂದ ಹಾದಿ ನೋಡಿದ್ದೇನೆ, ಎಲ್ಲರ ಹೃದಯ ಗೆದ್ದು ಉತ್ತರ ಕರ್ನಾಟಕದ ನಾಯಕನಾಗಿ ಹೊರಹೊಮ್ಮಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.</p>.<p>ನಾಲತವಾಡದಲ್ಲಿ ಮಂಗಳವಾರ ನಡೆದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>ಒಂದು ಕ್ಷೇತ್ರದ ಸಮಗ್ರ ಅಭಿವೃದ್ಧಿ ಹೇಗೆ ಮಾಡಬಹುದು ಎಂಬುದಕ್ಕೆ ನಡಹಳ್ಳಿ ಮತ್ತು ಮುದ್ದೇಬಿಹಾಳ ಸೂಕ್ತ ಉದಾಹರಣೆಯಾಗಿದೆ. ಮುದ್ದೇಬಿಹಾಳದ ರೀತಿ ರಾಜ್ಯದ ಎಲ್ಲ ಕ್ಷೇತ್ರದ ಅಭಿವೃದ್ಧಿಗೆ ಆದ್ಯತೆ ನೀಡುತ್ತೇವೆ ಎಂದರು.</p>.<p>ಮುದ್ದೇಬಿಹಾಳ ಕ್ಷೇತ್ರದ ಭವ್ಯ ಭವಿಷ್ಯ ಬರೆಯಲು ನಡಹಳ್ಳಿ ದಕ್ಷತೆ, ಪ್ರಾಮಾಣಿಕತೆಯಿಂದ ಶ್ರಮಿಸುತ್ತಿದ್ದಾರೆ. ಐದು ವರ್ಷದ ಅವಧಿಯಲ್ಲಿ ₹4500 ಕೋಟಿ ಅನುದಾನ ತಂದು ದಾಖಲೆ ಬರೆದಿದ್ದಾರೆ ಎಂದು ಹೇಳಿದರು.</p>.<p>ನಡಹಳ್ಳಿ ಕ್ಷೇತ್ರದ ಅಭಿವೃದ್ಧಿಗೆ ಚನ್ನಾಗಿ ರಾಜಕೀಯ ಮಾಡುತ್ತಾರೆ, ಇಲ್ಲ ಎನ್ನಲು ಆಗದಂತೆ ನಮ್ಮನ್ನು ಕಟ್ಟಿಹಾಕುತ್ತಾರೆ ಎಂದರು.</p>.<p>ಈ ಬಾರಿಯ ಚುನಾವಣೆಯಲ್ಲಿ ನಡಹಳ್ಳಿ ಅವರನ್ನು 50 ಸಾವಿರ ಮತಗಳ ಅಂತರದಿಂದ ಆರಿಸಿ ತಂದರೆ ಅಭಿವೃದ್ಧಿ ಪರ್ವ ಮುಂದುವರಿಯಲಿದೆ. ಅದಕ್ಕೆ ನಿಮ್ಮ ಸಮ್ಮತಿಯ ಮುದ್ರೆ ಇದೆ ಎಂದು ತಿಳಿದುಕೊಳ್ಳುತ್ತೇನೆ ಎಂದರು.</p>.<p>ಮುದ್ದೇಬಿಹಾಳ ಮಾದರಿಯಾಗಿ ಅಭಿವೃದ್ಧಿ ಪಡಿಸಲು ನಡಹಳ್ಳಿ ಆದ್ಯತೆ ನೀಡಿದ್ದಾರೆ. ನಿಮ್ಮ ಮತಕ್ಕೆ 100ಕ್ಕೆ 100ರಷ್ಟು ಕೆಲಸ ಮಾಡಿದ್ದಾರೆ. ಅವರನ್ನು ಈ ಬಾರಿಯೂ ಬೆಂಬಲಿಸಬೇಕು ಎಂದು ಮನವಿ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>