<p><strong>ವಿಜಯಪುರ:</strong> ಖಾಸಗಿ ಆಸ್ಪತ್ರೆಯವರು ತಮ್ಮ ಆಸ್ಪತ್ರೆ ಆವರಣದಲ್ಲಿ ಆಮ್ಲಜನಕ ಉತ್ಪಾದನಾ ಘಟಕವನ್ನು ನಿರ್ಮಾಣ ಮಾಡಲು ಮುಂದೆ ಬಂದಲ್ಲಿ ಅವರಿಗೆ ಸಿದ್ಧಸಿರಿ ಸೌಹಾರ್ದ ಸಹಕಾರಿ ಸಂಘದಿಂದ ₹50 ಲಕ್ಷ ವರೆಗೆ ಸಾಲ ನೀಡಲಾಗುವುದು ಎಂದು ಸಂಘದ ಅಧ್ಯಕ್ಷರೂ ಆಗಿರುವ ಶಾಸಕ ಬಸನಗೌಡ ಪಾಟೀಲ ಯತ್ನಾಳ ತಿಳಿಸಿದ್ದಾರೆ.</p>.<p>ಶೇ 12 ರಷ್ಟು ಬಡ್ಡಿ ದರದೊಂದಿಗೆ ಈ ಸಾಲವನ್ನು ನೀಡಲಾಗುವುದು ಎಂದು ಅವರು ತಿಳಿಸಿದ್ದಾರೆ.</p>.<p>ಆಕ್ಸಿಜನ್ ಬಳಕೆಯಾದಂತೆ ಬಳಕೆ ಪ್ರಮಾಣದ ಮೇಲೆ ಬರುವ ಆದಾಯವನ್ನು ಆಯಾ ಆಸ್ಪತ್ರೆಯವರು ಸಿದ್ಧಸಿರಿ ಸೌಹಾರ್ದ ಸಹಕಾರಿಗೆ ತುಂಬಬಹುದಾಗಿದ್ದು, ಇದರಿಂದ ಹೆಚ್ಚಿನ ಆಮ್ಲಜನಕದ ಉತ್ಪಾದಿಸುವ ಸಾಮರ್ಥ್ಯವೂ ಹೆಚ್ಚುತ್ತದೆ ಇದರಿಂದ ರೋಗಿಗಳಿಗೂ ಅನಕೂಲವಾಗುತ್ತದೆ ಎಂದು ಅವರು ಹೇಳಿದ್ದಾರೆ.</p>.<p>ಖಾಸಗಿ ಆಸ್ಪತ್ರೆ ಅಥವಾ ಇನ್ನೀತರರು ಹೊಸ ಆಕ್ಸಿಜನ್ ಉತ್ಪಾದನಾ ಘಟಕ ಸ್ಥಾಪಿಸಲು ಮುಂದೆ ಬಂದಲ್ಲಿ ಸಿದ್ಧಸಿರಿ ಸೌಹಾರ್ದ ಸಹಕಾರಿಯಿಂದ ಸಾಲ ಸೌಲಭ್ಯ ಕಲ್ಪಿಸಲಾಗುವುದು, ಸಾಲಕ್ಕಾಗಿ ಅರ್ಜಿ ಕೊಟ್ಟ ಕೆಲವೇ ಗಂಟೆಗಳಲ್ಲಿ ಸಾಲವನ್ನು ಮಂಜೂರಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ:</strong> ಖಾಸಗಿ ಆಸ್ಪತ್ರೆಯವರು ತಮ್ಮ ಆಸ್ಪತ್ರೆ ಆವರಣದಲ್ಲಿ ಆಮ್ಲಜನಕ ಉತ್ಪಾದನಾ ಘಟಕವನ್ನು ನಿರ್ಮಾಣ ಮಾಡಲು ಮುಂದೆ ಬಂದಲ್ಲಿ ಅವರಿಗೆ ಸಿದ್ಧಸಿರಿ ಸೌಹಾರ್ದ ಸಹಕಾರಿ ಸಂಘದಿಂದ ₹50 ಲಕ್ಷ ವರೆಗೆ ಸಾಲ ನೀಡಲಾಗುವುದು ಎಂದು ಸಂಘದ ಅಧ್ಯಕ್ಷರೂ ಆಗಿರುವ ಶಾಸಕ ಬಸನಗೌಡ ಪಾಟೀಲ ಯತ್ನಾಳ ತಿಳಿಸಿದ್ದಾರೆ.</p>.<p>ಶೇ 12 ರಷ್ಟು ಬಡ್ಡಿ ದರದೊಂದಿಗೆ ಈ ಸಾಲವನ್ನು ನೀಡಲಾಗುವುದು ಎಂದು ಅವರು ತಿಳಿಸಿದ್ದಾರೆ.</p>.<p>ಆಕ್ಸಿಜನ್ ಬಳಕೆಯಾದಂತೆ ಬಳಕೆ ಪ್ರಮಾಣದ ಮೇಲೆ ಬರುವ ಆದಾಯವನ್ನು ಆಯಾ ಆಸ್ಪತ್ರೆಯವರು ಸಿದ್ಧಸಿರಿ ಸೌಹಾರ್ದ ಸಹಕಾರಿಗೆ ತುಂಬಬಹುದಾಗಿದ್ದು, ಇದರಿಂದ ಹೆಚ್ಚಿನ ಆಮ್ಲಜನಕದ ಉತ್ಪಾದಿಸುವ ಸಾಮರ್ಥ್ಯವೂ ಹೆಚ್ಚುತ್ತದೆ ಇದರಿಂದ ರೋಗಿಗಳಿಗೂ ಅನಕೂಲವಾಗುತ್ತದೆ ಎಂದು ಅವರು ಹೇಳಿದ್ದಾರೆ.</p>.<p>ಖಾಸಗಿ ಆಸ್ಪತ್ರೆ ಅಥವಾ ಇನ್ನೀತರರು ಹೊಸ ಆಕ್ಸಿಜನ್ ಉತ್ಪಾದನಾ ಘಟಕ ಸ್ಥಾಪಿಸಲು ಮುಂದೆ ಬಂದಲ್ಲಿ ಸಿದ್ಧಸಿರಿ ಸೌಹಾರ್ದ ಸಹಕಾರಿಯಿಂದ ಸಾಲ ಸೌಲಭ್ಯ ಕಲ್ಪಿಸಲಾಗುವುದು, ಸಾಲಕ್ಕಾಗಿ ಅರ್ಜಿ ಕೊಟ್ಟ ಕೆಲವೇ ಗಂಟೆಗಳಲ್ಲಿ ಸಾಲವನ್ನು ಮಂಜೂರಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>