<p><strong>ವಿಜಯಪುರ</strong>: ಕಡಿಮೆ ಬೆಲೆಗೆ ಫಿನಾಯಿಲ್ ಮಾರಾಟ ಮಾಡುವ ನೆಪದಲ್ಲಿ ಮನೆಗೆ ಬಂದ ಮಹಿಳೆಯೊಬ್ಬಳು ಮನೆಯವರಿಗೆ ಪ್ರಜ್ಞೆ ತಪ್ಪಿಸಿ, ಚಿನ್ನಾಭರಣವನ್ನು ದೋಚಿಕೊಂಡು ಪರಾರಿಯಾಗಿರುವ ಘಟನೆ ಶಾಂತಿನಗರದಲ್ಲಿ ನಡೆದಿದೆ.</p>.<p>ಮಕ್ಕಳ ಸಹಾಯವಾಣಿ ಕೇಂದ್ರದ ಮುಖ್ಯಸ್ಥೆ ಸುನಂದಾ ತೋಳಬಂದಿ ಅವರ ಮನೆಗೆ ಆಗಸ್ಟ್ 2ರಂದು ಮಧ್ಯಾಹ್ನ ಬಂದಿದ್ದಮಹಿಳೆ ₹100 ರೂಪಾಯಿಗೆ 3 ಫಿನಾಯಿಲ್ ಬಾಟಲಿ ನೀಡುತ್ತೇನೆ ತೆಗೆದುಕೊಳ್ಳಿ ಎಂದು ಹೇಳಿದ್ದಾಳೆ.</p>.<p>ತೋಳಬಂದಿ ಅವರ ಪುತ್ರ ಕೇಶವ ತೋಳಬಂದಿ ಅವರಿಗೆ ಫಿನಾಯಿಲ್ ಪರಿಮಳ ಚನ್ನಾಗಿದೆಯಾ ನೋಡಿ ಎಂದು ಮೂಗಿಗೆ ಹಿಡಿದಿದ್ದಾಳೆ. ಆ ಕ್ಷಣವೇ ಅವರು ಪ್ರಜ್ಞೆ ತಪ್ಪಿ ಸ್ಥಳದಲ್ಲೇ ಬಿದ್ದಿದ್ದಾರೆ. ಬಳಿಕ ಮಹಿಳೆಯು ಮನೆಯೊಳಗೆ ಮಲಗಿದ್ದ ದಂಪತಿಗೂ ಮೂರ್ಛೆ ಬರಿಸುವರಾಸಾಯನಿಕವನ್ನು ಮೂಗಿಗೆ ಹಿಡಿದು ಅವರ ಪ್ರಜ್ಞೆಯನ್ನು ತಪ್ಪಿಸಿದ್ದಾಳೆ.</p>.<p>ಮನೆ ಬೆಡ್ರೂಂನಲ್ಲಿದ್ದ 40 ಗ್ರಾಂ ಚಿನ್ನ, 220 ಗ್ರಾಂ ಬೆಳ್ಳಿ ಆಭರಣ, ಎರಡು ಮೊಬೈಲ್ ಫೋನ್ ಸೇರಿದಂತೆ ಒಟ್ಟು ₹2.49.800 ಮೌಲ್ಯದ ವಸ್ತುಗಳನ್ನು ದೋಚಿಕೊಂಡು ಪರಾರಿಯಾಗಿದ್ದಾಳೆ.</p>.<p>ಸ್ವಲ್ಪ ಸಮಯದ ಬಳಿಕ ಪ್ರಜ್ಞೆ ಬಂದಾಗ ಮನೆ ಕಳ್ಳತನವಾಗಿರುವುದು ಬೆಳಕಿಗೆ ಬಂದಿದೆ. ಇಷ್ಟೇ ಅಲ್ಲದೆ, ಮನೆಯಲ್ಲಿ ಸಾಕಿದ್ದ ನಾಯಿಗೂ ವಿಷ ಉಣಿಸಿದ್ದು, ಸಂಜೆ ವೇಳೆಗೆ ನಾಯಿ ಮೃತಪಟ್ಟಿದೆ. ಈ ಸಂಬಂಧ ಗೋಳ ಗುಮ್ಮಟ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>ಮಹಿಳೆಯೊಂದಿಗೆ ದೊಡ್ಡ ಗ್ಯಾಂಗ್ ಈ ಕೃತ್ಯ ಮಾಡಿರುವ ಶಂಕೆ ಪೊಲೀಸರು ವ್ಯಕ್ತಪಡಿಸಿದ್ದಾರೆ. ಈ ರೀತಿ ಯಾರಾದರು ಮನೆಗೆ ಬಂದರೆ ಎಚ್ಚರ ವಹಿಸಿ, ತಕ್ಷಣ ಪೊಲೀಸರಿಗೆ ಮಾಹಿತಿ ನೀಡಬೇಕೆಂದು ಪೊಲೀಸರು ಸಾರ್ವಜನಿಕರಿಗೆ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ</strong>: ಕಡಿಮೆ ಬೆಲೆಗೆ ಫಿನಾಯಿಲ್ ಮಾರಾಟ ಮಾಡುವ ನೆಪದಲ್ಲಿ ಮನೆಗೆ ಬಂದ ಮಹಿಳೆಯೊಬ್ಬಳು ಮನೆಯವರಿಗೆ ಪ್ರಜ್ಞೆ ತಪ್ಪಿಸಿ, ಚಿನ್ನಾಭರಣವನ್ನು ದೋಚಿಕೊಂಡು ಪರಾರಿಯಾಗಿರುವ ಘಟನೆ ಶಾಂತಿನಗರದಲ್ಲಿ ನಡೆದಿದೆ.</p>.<p>ಮಕ್ಕಳ ಸಹಾಯವಾಣಿ ಕೇಂದ್ರದ ಮುಖ್ಯಸ್ಥೆ ಸುನಂದಾ ತೋಳಬಂದಿ ಅವರ ಮನೆಗೆ ಆಗಸ್ಟ್ 2ರಂದು ಮಧ್ಯಾಹ್ನ ಬಂದಿದ್ದಮಹಿಳೆ ₹100 ರೂಪಾಯಿಗೆ 3 ಫಿನಾಯಿಲ್ ಬಾಟಲಿ ನೀಡುತ್ತೇನೆ ತೆಗೆದುಕೊಳ್ಳಿ ಎಂದು ಹೇಳಿದ್ದಾಳೆ.</p>.<p>ತೋಳಬಂದಿ ಅವರ ಪುತ್ರ ಕೇಶವ ತೋಳಬಂದಿ ಅವರಿಗೆ ಫಿನಾಯಿಲ್ ಪರಿಮಳ ಚನ್ನಾಗಿದೆಯಾ ನೋಡಿ ಎಂದು ಮೂಗಿಗೆ ಹಿಡಿದಿದ್ದಾಳೆ. ಆ ಕ್ಷಣವೇ ಅವರು ಪ್ರಜ್ಞೆ ತಪ್ಪಿ ಸ್ಥಳದಲ್ಲೇ ಬಿದ್ದಿದ್ದಾರೆ. ಬಳಿಕ ಮಹಿಳೆಯು ಮನೆಯೊಳಗೆ ಮಲಗಿದ್ದ ದಂಪತಿಗೂ ಮೂರ್ಛೆ ಬರಿಸುವರಾಸಾಯನಿಕವನ್ನು ಮೂಗಿಗೆ ಹಿಡಿದು ಅವರ ಪ್ರಜ್ಞೆಯನ್ನು ತಪ್ಪಿಸಿದ್ದಾಳೆ.</p>.<p>ಮನೆ ಬೆಡ್ರೂಂನಲ್ಲಿದ್ದ 40 ಗ್ರಾಂ ಚಿನ್ನ, 220 ಗ್ರಾಂ ಬೆಳ್ಳಿ ಆಭರಣ, ಎರಡು ಮೊಬೈಲ್ ಫೋನ್ ಸೇರಿದಂತೆ ಒಟ್ಟು ₹2.49.800 ಮೌಲ್ಯದ ವಸ್ತುಗಳನ್ನು ದೋಚಿಕೊಂಡು ಪರಾರಿಯಾಗಿದ್ದಾಳೆ.</p>.<p>ಸ್ವಲ್ಪ ಸಮಯದ ಬಳಿಕ ಪ್ರಜ್ಞೆ ಬಂದಾಗ ಮನೆ ಕಳ್ಳತನವಾಗಿರುವುದು ಬೆಳಕಿಗೆ ಬಂದಿದೆ. ಇಷ್ಟೇ ಅಲ್ಲದೆ, ಮನೆಯಲ್ಲಿ ಸಾಕಿದ್ದ ನಾಯಿಗೂ ವಿಷ ಉಣಿಸಿದ್ದು, ಸಂಜೆ ವೇಳೆಗೆ ನಾಯಿ ಮೃತಪಟ್ಟಿದೆ. ಈ ಸಂಬಂಧ ಗೋಳ ಗುಮ್ಮಟ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>ಮಹಿಳೆಯೊಂದಿಗೆ ದೊಡ್ಡ ಗ್ಯಾಂಗ್ ಈ ಕೃತ್ಯ ಮಾಡಿರುವ ಶಂಕೆ ಪೊಲೀಸರು ವ್ಯಕ್ತಪಡಿಸಿದ್ದಾರೆ. ಈ ರೀತಿ ಯಾರಾದರು ಮನೆಗೆ ಬಂದರೆ ಎಚ್ಚರ ವಹಿಸಿ, ತಕ್ಷಣ ಪೊಲೀಸರಿಗೆ ಮಾಹಿತಿ ನೀಡಬೇಕೆಂದು ಪೊಲೀಸರು ಸಾರ್ವಜನಿಕರಿಗೆ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>