<p><strong>ವಿಜಯಪುರ:</strong> ಅಪರಾಧಗಳನ್ನು ತಡೆಗಟ್ಟುವಲ್ಲಿ ಪ್ರತಿಯೊಬ್ಬರ ಪಾತ್ರ ಪ್ರಮುಖವಾಗಿದೆ. ಅಪರಾಧಗಳನ್ನು ತಡೆಗಟ್ಟುವುದು ಸಹ ಒಂದು ಬಹುಮುಖ್ಯ ಸೇವೆ ಎಂದು ಪೊಲೀಸ್ ಅಧಿಕಾರಿ ಎಂ.ಎಚ್. ಜಹಾಗೀರದಾರ ಹೇಳಿದರು.</p>.<p>ನಗರದ ಆದರ್ಶ ನಗರದಲ್ಲಿರುವ ಎಕ್ಸಲೆಂಟ್ ಕನ್ನಡ-ಇಂಗ್ಲಿಷ್ ಮಾಧ್ಯಮ ಶಾಲೆಯಲ್ಲಿ ಗುರುವಾರ ಆಯೋಜಿಸಿದ್ದ ಕಾನೂನು ಅರಿವು ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪ್ರತಿಯೊಬ್ಬರಿಗೂ ದೇಶದ ಕಾನೂನುಗಳ ಬಗ್ಗೆ ಅರಿವು ಇರಬೇಕಾದುದು ಅಗತ್ಯ ಎಂದರು.</p>.<p>ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ನಿಷೇಧ ಕಾಯ್ದೆ (ಪೋಕ್ಸೊ) ಮತ್ತು ಬಾಲ್ಯವಿವಾಹ ನಿಷೇಧ ಕಾಯ್ದೆ ಹೀಗೆ ಮಕ್ಕಳ ರಕ್ಷಣೆಗೆ ಹಾಗೂ ಸುರಕ್ಷತೆಗೆ ಅನೇಕ ಕಾನೂನುಗಳಿದ್ದು, ಈ ಕಾನೂನಿನ ಅಂಶಗಳ ಬಗ್ಗೆ ವಿದ್ಯಾರ್ಥಿಗಳು ಮಾಹಿತಿ ಹೊಂದಬೇಕು ಎಂದರು.</p>.<p>18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳ ಮೇಲೆ ಆಗುವ ದೌರ್ಜನ್ಯಗಳನ್ನು ಮಕ್ಕಳ ಸಹಾಯವಾಣಿ 1098ಕ್ಕೆ ಮಾಹಿತಿ ನೀಡುವ ಮೂಲಕ ಸಂಭವಿಸಲಿರುವ ಅಪಾಯವನ್ನು ತಡೆಗಟ್ಟಬಹುದಾಗಿದೆ ಎಂದು ವಿವರಿಸಿದರು.</p>.<p>ಮುಖ್ಯ ಶಿಕ್ಷಕ ಎಂ.ಐ. ಬಿರಾದಾರ ಮಾತನಾಡಿದರು. ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯ ರಾಜಶೇಖರ ಕೌಲಗಿ, ಸಾವಿತ್ರಿ, ಉಮಾ ಶಹಬಾದೆ, ಪಿ.ಬಿ. ಖೇಡಗಿ ಮೊದಲಾದವರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ:</strong> ಅಪರಾಧಗಳನ್ನು ತಡೆಗಟ್ಟುವಲ್ಲಿ ಪ್ರತಿಯೊಬ್ಬರ ಪಾತ್ರ ಪ್ರಮುಖವಾಗಿದೆ. ಅಪರಾಧಗಳನ್ನು ತಡೆಗಟ್ಟುವುದು ಸಹ ಒಂದು ಬಹುಮುಖ್ಯ ಸೇವೆ ಎಂದು ಪೊಲೀಸ್ ಅಧಿಕಾರಿ ಎಂ.ಎಚ್. ಜಹಾಗೀರದಾರ ಹೇಳಿದರು.</p>.<p>ನಗರದ ಆದರ್ಶ ನಗರದಲ್ಲಿರುವ ಎಕ್ಸಲೆಂಟ್ ಕನ್ನಡ-ಇಂಗ್ಲಿಷ್ ಮಾಧ್ಯಮ ಶಾಲೆಯಲ್ಲಿ ಗುರುವಾರ ಆಯೋಜಿಸಿದ್ದ ಕಾನೂನು ಅರಿವು ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪ್ರತಿಯೊಬ್ಬರಿಗೂ ದೇಶದ ಕಾನೂನುಗಳ ಬಗ್ಗೆ ಅರಿವು ಇರಬೇಕಾದುದು ಅಗತ್ಯ ಎಂದರು.</p>.<p>ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ನಿಷೇಧ ಕಾಯ್ದೆ (ಪೋಕ್ಸೊ) ಮತ್ತು ಬಾಲ್ಯವಿವಾಹ ನಿಷೇಧ ಕಾಯ್ದೆ ಹೀಗೆ ಮಕ್ಕಳ ರಕ್ಷಣೆಗೆ ಹಾಗೂ ಸುರಕ್ಷತೆಗೆ ಅನೇಕ ಕಾನೂನುಗಳಿದ್ದು, ಈ ಕಾನೂನಿನ ಅಂಶಗಳ ಬಗ್ಗೆ ವಿದ್ಯಾರ್ಥಿಗಳು ಮಾಹಿತಿ ಹೊಂದಬೇಕು ಎಂದರು.</p>.<p>18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳ ಮೇಲೆ ಆಗುವ ದೌರ್ಜನ್ಯಗಳನ್ನು ಮಕ್ಕಳ ಸಹಾಯವಾಣಿ 1098ಕ್ಕೆ ಮಾಹಿತಿ ನೀಡುವ ಮೂಲಕ ಸಂಭವಿಸಲಿರುವ ಅಪಾಯವನ್ನು ತಡೆಗಟ್ಟಬಹುದಾಗಿದೆ ಎಂದು ವಿವರಿಸಿದರು.</p>.<p>ಮುಖ್ಯ ಶಿಕ್ಷಕ ಎಂ.ಐ. ಬಿರಾದಾರ ಮಾತನಾಡಿದರು. ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯ ರಾಜಶೇಖರ ಕೌಲಗಿ, ಸಾವಿತ್ರಿ, ಉಮಾ ಶಹಬಾದೆ, ಪಿ.ಬಿ. ಖೇಡಗಿ ಮೊದಲಾದವರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>