ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಜಯಪುರ: ಕೃಷ್ಣಾ ನದಿ‌ ಸೇತುವೆ ಮೇಲೆ ಮೊಸಳೆ ಪ್ರತ್ಯಕ್ಷ

Last Updated 4 ಮಾರ್ಚ್ 2023, 9:06 IST
ಅಕ್ಷರ ಗಾತ್ರ

ವಿಜಯಪುರ: ಕೊಲ್ಹಾರ ಪಟ್ಟಣ ಹೊರವಲಯದ ರಾಷ್ಟ್ರೀಯ ಹೆದ್ದಾರಿ 218 ರ ಕೃಷ್ಣಾ ನದಿ ಸೇತುವೆ ಮೇಲೆ ಶನಿವಾರ ಬೆಳಿಗ್ಗೆ ಬಾಯಿಗೆ ಹಗ್ಗ ಕಟ್ಟಿದ್ದ ಸ್ಥಿತಿಯಲ್ಲಿ ದೊಡ್ಡ ಮೊಸಳೆಯೊಂದು ಪ್ರತ್ಯಕ್ಷವಾಗಿದೆ.

ಮೊಸಳೆ ಬಾಯಿಗೆ ಹಗ್ಗ ಕಟ್ಟಿರುವುದರಿಂದ ಆಹಾರ ಸೇವಿಸಲಾಗದೇ ನದಿಯಿಂದ ಆಚೆ ಬಂದಿರಬಹುದು ಅಥವಾ ಜನವಸತಿ‌ ಪ್ರದೇಶಕ್ಕೆ ನುಗ್ಗಿರುವಾಗ ಹಿಡಿದು ಹಗ್ಗ ಕಟ್ಟಿ ತಂದು ಇಲ್ಲಿ ಬಿಟ್ಟಿರಬಹುದು ಎಂದು ಶಂಕಿಸಲಾಗಿದೆ.

ಸ್ಥಳಕ್ಕೆ ಹೆದ್ದಾರಿ ಗಸ್ತು ಪೊಲೀಸರು ಆಗಮಿಸಿ ಅರಣ್ಯ ಇಲಾಖೆಯವರಿಗೆ ಮಾಹಿತಿ ನೀಡಿದ್ದಾರೆ. ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ಆಡಚಣೆಯಾಗದಂತೆ ಮುಂಜಾಗ್ರತಾ ಕ್ರಮವಾಗಿ ಪೊಲೀಸರು ಸ್ಥಳೀಯ ಯುವಕರ ಸಹಾಯದಿಂದ ಮೊಸಳೆಯನ್ನು ಹಗ್ಗದಿಂದ ರಸ್ತೆ ದಂಡೆಗೆ ಸರಿಸಿದ್ದಾರೆ.

ಅರಣ್ಯ ಇಲಾಖೆ ಸಿಬ್ಬಂದಿ ಆಗಮಿಸಿ ಮೊಸಳೆ ರಕ್ಷಿಸಿ ನದಿಗೆ ಬಿಡಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT