ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ರೈತರೊಂದಿಗೆ ಜಮೀನುಗಳಿಗೆ ಭೇಟಿ ನೀಡಿ ಅಕಾಲಿಕ ಮಳೆಯಿಂದ ಹಾನಿಗೊಳಗಾದ ವಾಣಿಜ್ಯ ಬೆಳೆಗಳಾದ ತೊಗರಿ, ಗೋಧಿ, ಅಜವಾನ, ಹತ್ತಿ ಸೇರಿದಂತೆ ವಿವಿಧ ಬೆಳೆಗಳ ಹಾನಿಯ ವಾಸ್ತವ ಸ್ಥಿತಿಯನ್ನು ಪರಿಶೀಲಿಸಿದರು. ತೊಗರಿ, ಗೋವಿನಜೋಳ ಹಾಳಾಗಿದೆ. ಗೋಧಿ, ಕಡಲೆ, ಬಿಳಿಜೋಳದ ಬೆಳೆಗೆ ಈ ಅಕಾಲಿಕ ಮಳೆ ಅನುಕೂಲವಾಗಿದೆ ಎಂದು ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕ ಎಂ.ಎಚ್. ಯರಝರಿ ತಿಳಿಸಿದರು.