<p><strong>ವಿಜಯಪುರ</strong>: ‘ಮಳೆಯಿಂದ ಹಾನಿಗೊಳಗಾದ ಬೆಳೆ ಹಾನಿಯ ಜಂಟಿ ಸಮೀಕ್ಷೆಯ ಸಮಗ್ರ ವರದಿಯನ್ನು ಎರಡು ದಿನಗಳಲ್ಲಿ ಸಲ್ಲಿಸಬೇಕು. ಯಾವೊಬ್ಬ ಅರ್ಹ ರೈತರೂ ಸಮೀಕ್ಷೆಯಿಂದ ಹೊರ ಉಳಿಯದಂತೆ ಕಾಳಜಿ ವಹಿಸಬೇಕು’ ಎಂದು ಜಿಲ್ಲಾಧಿಕಾರಿ ಡಾ. ಆನಂದ್ ಕೆ. ಸೂಚನೆ ನೀಡಿದರು. </p>.<p>ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಸಭೆಯಲ್ಲಿ ಅವರು ಮಾತನಾಡಿದರು.</p>.<p>‘ಬೆಳೆ ಹಾನಿ ರೈತರ ಪಟ್ಟಿ ಸಿದ್ದಪಡಿಸಿ, ಪಟ್ಟಿಯನ್ನು ರೈತರ ಅವಗಾಹನೆಗಾಗಿ ಆಯಾ ಗ್ರಾಮ ಪಂಚಾಯಿತಿಯ ಸೂಚನಾ ಫಲಕದಲ್ಲಿ ಪ್ರಚುರ ಪಡೆಸಬೇಕು. 7 ದಿನದೊಳಗೆ ಆಕ್ಷೇಪಣೆ ಸಲ್ಲಿಸಲು ರೈತರಿಗೆ ಕಾಲಾವಕಾಶ ಕಲ್ಪಿಸಬೇಕು, ರೈತರು ಸಲ್ಲಿಸುವ ಆಕ್ಷೇಪಣೆಗಳನ್ನು ಪರಿಶೀಲಿಸಿದ ನಂತರ ಅಂತಿಮವಾಗಿ ಸಮಗ್ರ ವರದಿಯನ್ನು ಜಿಲ್ಲಾಡಳಿತಕ್ಕೆ ಸಲ್ಲಿಸಬೇಕು’ ಎಂದು ಹೇಳಿದರು.</p>.<p>‘ಮನೆಹಾನಿ ಪ್ರಕರಣಗಳಲ್ಲಿ ಯಾವುದೇ ಬಾಕಿ ಉಳಿಸಿಕೊಳ್ಳದೇ 72 ಗಂಟೆಗಳಲ್ಲಿ ಪರಿಹಾರ ವಿತರಿಸಲು ಕ್ರಮ ಕೈಗೊಳ್ಳಬೇಕು’ ಎಂದರು.</p>.<p>‘ಎದುರಾಗಬಹುದಾದ ಪ್ರವಾಹ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸುವ ದೃಷ್ಟಿಯಿಂದ ಮುನ್ನೆಚ್ಚರಿಕೆಯಾಗಿ ಅಗತ್ಯ ಕ್ರಮ ಕೈಗೊಳ್ಳಬೇಕು. ಮಳೆ ಬರುವ ಸೂಚನೆಯಿದ್ದಾಗ ಅಪಾಯದ ಮುನ್ಸೂಚನೆಯ ಬಗ್ಗೆ ನದಿ, ಹಳ್ಳ-ಕೊಳ್ಳಗಳಿರುವ ಸ್ಥಳಗಳಲ್ಲಿ ನಿಗಾ ವಹಿಸಲು ಕ್ರಮಕೈಗೊಳ್ಳಬೇಕು, ಅಪಾಯ ಮುನ್ಸೂಚನೆಯ ಸೂಚನಾ ಫಲಕಗಳನ್ನು ಸಾರ್ವಜನಿಕರ ತಿಳಿವಳಿಕೆಗಾಗಿ ಅಳವಡಿಸಬೇಕು’ ಎಂದು ಹೇಳಿದರು. </p>.<p>‘ತಾಲ್ಲೂಕು ಮಟ್ಟದಲ್ಲಿ ನೇಮಿಸಲಾಗಿರುವ ನೋಡಲ್ ಅಧಿಕಾರಿಗಳು ನಿಯೋಜಿಸಿದ ತಾಲ್ಲೂಕಿಗೆ ಆಗಾಗ ಭೇಟಿ ನೀಡಿ, ಅತಿವೃಷ್ಟಿಯಿಂದ ಉಂಟಾಗಬಹುದಾದ ಸ್ಥಳಗಳ ಮಾಹಿತಿಯನ್ನು ಪಡೆದು ಪ್ರತಿ 15 ದಿನಗಳಿಗೊಮ್ಮೆ ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ಪ್ರವಾಹ ಪರಿಸ್ಥಿತಿ ನಿಯಂತ್ರಣ ಕುರಿತು ಸಭೆ ನಡೆಸಬೇಕು’ ಎಂದು ಸೂಚಿಸಿದರು.</p>.<p>‘ಸಾರ್ವಜನಿಕರು ತುರ್ತಾಗಿ ಸಂಪರ್ಕಿಸಲು ಈಗಾಗಲೇ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸ್ಥಾಪಿಸಿರುವ ಸಹಾಯವಾಣಿ ಸಂಖ್ಯೆ 1077 ಅಥವಾ ವಿಪತ್ತು ನಿರ್ವಹಣಾ ಪರಿಣಿತರ ಸಂಖ್ಯೆ 7019682740ಗೆ ಸಂಪರ್ಕಿಸಬಹುದು. ರಕ್ಷಣಾ ಸಾಮಗ್ರಿಗಳನ್ನು ಸುಸ್ಥಿತಿಯಲ್ಲಿಟ್ಟುಕೊಳ್ಳುವುದರೊಂದಿಗೆ ಈಜುಗಾರರು, ಹಾವಾಡಿಗರು, ಸ್ವಯಂ ಸೇವಕ ಸಂಘಗಳ ಮಾಹಿತಿಯನ್ನು ಸನ್ನದ್ಧವಾಗಿಟ್ಟುಕೊಳ್ಳಬೇಕು’ ಎಂದು ಸೂಚನೆ ನೀಡಿದರು. </p>.<p>ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ರಿಷಿ ಆನಂದ್, ವಿಜಯಪುರ ಉಪ ವಿಭಾಗಾಧಿಕಾರಿ ಗುರುನಾಥ ದಡ್ಡೆ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬದ್ರುದ್ದಿನ್ ಸೌದಾಗರ, ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕ ರಾಹುಲ್ ಬಾವಿದೊಡ್ಡಿ, ತಾಲ್ಲೂಕು ನೋಡಲ್ ಅಧಿಕಾರಿಗಳು ಹಾಗೂ ತಾಲ್ಲೂಕಿನ ತಹಶೀಲ್ದಾರರು ಇದ್ದರು.</p>.<p>ತುರ್ತು ಸಂದರ್ಭಕ್ಕೆ ಸಹಾಯವಾಣಿ ಸಂಖ್ಯೆ 1077ಕ್ಕೆ ಸಂಪರ್ಕಿಸಿ ಈಜುಗಾರರು, ಹಾವಾಡಿಗರು, ಸ್ವಯಂ ಸೇವಕರ ಮಾಹಿತಿ ಇರಲಿ ಮನೆಹಾನಿಗೆ 72 ಗಂಟೆಗಳಲ್ಲಿ ಪರಿಹಾರ ಒದಗಿಸಿ</p>.<div><blockquote>ಜಿಲ್ಲೆಯಲ್ಲಿ ಎದುರಾಗಬಹುದಾದ ಪ್ರಕೃತಿ ವಿಕೋಪ ನಿಯಂತ್ರಣ ಕ್ರಮ ಕೈಕೊಳ್ಳುವುದಕ್ಕಾಗಿ ಸಾರ್ವಜನಿಕರಲ್ಲಿ ತಿಳಿವಳಿಕೆ ಮೂಡಿಸಬೇಕು</blockquote><span class="attribution">ಡಾ. ಆನಂದ್ ಕೆ.ಜಿಲ್ಲಾಧಿಕಾರಿ </span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ</strong>: ‘ಮಳೆಯಿಂದ ಹಾನಿಗೊಳಗಾದ ಬೆಳೆ ಹಾನಿಯ ಜಂಟಿ ಸಮೀಕ್ಷೆಯ ಸಮಗ್ರ ವರದಿಯನ್ನು ಎರಡು ದಿನಗಳಲ್ಲಿ ಸಲ್ಲಿಸಬೇಕು. ಯಾವೊಬ್ಬ ಅರ್ಹ ರೈತರೂ ಸಮೀಕ್ಷೆಯಿಂದ ಹೊರ ಉಳಿಯದಂತೆ ಕಾಳಜಿ ವಹಿಸಬೇಕು’ ಎಂದು ಜಿಲ್ಲಾಧಿಕಾರಿ ಡಾ. ಆನಂದ್ ಕೆ. ಸೂಚನೆ ನೀಡಿದರು. </p>.<p>ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಸಭೆಯಲ್ಲಿ ಅವರು ಮಾತನಾಡಿದರು.</p>.<p>‘ಬೆಳೆ ಹಾನಿ ರೈತರ ಪಟ್ಟಿ ಸಿದ್ದಪಡಿಸಿ, ಪಟ್ಟಿಯನ್ನು ರೈತರ ಅವಗಾಹನೆಗಾಗಿ ಆಯಾ ಗ್ರಾಮ ಪಂಚಾಯಿತಿಯ ಸೂಚನಾ ಫಲಕದಲ್ಲಿ ಪ್ರಚುರ ಪಡೆಸಬೇಕು. 7 ದಿನದೊಳಗೆ ಆಕ್ಷೇಪಣೆ ಸಲ್ಲಿಸಲು ರೈತರಿಗೆ ಕಾಲಾವಕಾಶ ಕಲ್ಪಿಸಬೇಕು, ರೈತರು ಸಲ್ಲಿಸುವ ಆಕ್ಷೇಪಣೆಗಳನ್ನು ಪರಿಶೀಲಿಸಿದ ನಂತರ ಅಂತಿಮವಾಗಿ ಸಮಗ್ರ ವರದಿಯನ್ನು ಜಿಲ್ಲಾಡಳಿತಕ್ಕೆ ಸಲ್ಲಿಸಬೇಕು’ ಎಂದು ಹೇಳಿದರು.</p>.<p>‘ಮನೆಹಾನಿ ಪ್ರಕರಣಗಳಲ್ಲಿ ಯಾವುದೇ ಬಾಕಿ ಉಳಿಸಿಕೊಳ್ಳದೇ 72 ಗಂಟೆಗಳಲ್ಲಿ ಪರಿಹಾರ ವಿತರಿಸಲು ಕ್ರಮ ಕೈಗೊಳ್ಳಬೇಕು’ ಎಂದರು.</p>.<p>‘ಎದುರಾಗಬಹುದಾದ ಪ್ರವಾಹ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸುವ ದೃಷ್ಟಿಯಿಂದ ಮುನ್ನೆಚ್ಚರಿಕೆಯಾಗಿ ಅಗತ್ಯ ಕ್ರಮ ಕೈಗೊಳ್ಳಬೇಕು. ಮಳೆ ಬರುವ ಸೂಚನೆಯಿದ್ದಾಗ ಅಪಾಯದ ಮುನ್ಸೂಚನೆಯ ಬಗ್ಗೆ ನದಿ, ಹಳ್ಳ-ಕೊಳ್ಳಗಳಿರುವ ಸ್ಥಳಗಳಲ್ಲಿ ನಿಗಾ ವಹಿಸಲು ಕ್ರಮಕೈಗೊಳ್ಳಬೇಕು, ಅಪಾಯ ಮುನ್ಸೂಚನೆಯ ಸೂಚನಾ ಫಲಕಗಳನ್ನು ಸಾರ್ವಜನಿಕರ ತಿಳಿವಳಿಕೆಗಾಗಿ ಅಳವಡಿಸಬೇಕು’ ಎಂದು ಹೇಳಿದರು. </p>.<p>‘ತಾಲ್ಲೂಕು ಮಟ್ಟದಲ್ಲಿ ನೇಮಿಸಲಾಗಿರುವ ನೋಡಲ್ ಅಧಿಕಾರಿಗಳು ನಿಯೋಜಿಸಿದ ತಾಲ್ಲೂಕಿಗೆ ಆಗಾಗ ಭೇಟಿ ನೀಡಿ, ಅತಿವೃಷ್ಟಿಯಿಂದ ಉಂಟಾಗಬಹುದಾದ ಸ್ಥಳಗಳ ಮಾಹಿತಿಯನ್ನು ಪಡೆದು ಪ್ರತಿ 15 ದಿನಗಳಿಗೊಮ್ಮೆ ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ಪ್ರವಾಹ ಪರಿಸ್ಥಿತಿ ನಿಯಂತ್ರಣ ಕುರಿತು ಸಭೆ ನಡೆಸಬೇಕು’ ಎಂದು ಸೂಚಿಸಿದರು.</p>.<p>‘ಸಾರ್ವಜನಿಕರು ತುರ್ತಾಗಿ ಸಂಪರ್ಕಿಸಲು ಈಗಾಗಲೇ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸ್ಥಾಪಿಸಿರುವ ಸಹಾಯವಾಣಿ ಸಂಖ್ಯೆ 1077 ಅಥವಾ ವಿಪತ್ತು ನಿರ್ವಹಣಾ ಪರಿಣಿತರ ಸಂಖ್ಯೆ 7019682740ಗೆ ಸಂಪರ್ಕಿಸಬಹುದು. ರಕ್ಷಣಾ ಸಾಮಗ್ರಿಗಳನ್ನು ಸುಸ್ಥಿತಿಯಲ್ಲಿಟ್ಟುಕೊಳ್ಳುವುದರೊಂದಿಗೆ ಈಜುಗಾರರು, ಹಾವಾಡಿಗರು, ಸ್ವಯಂ ಸೇವಕ ಸಂಘಗಳ ಮಾಹಿತಿಯನ್ನು ಸನ್ನದ್ಧವಾಗಿಟ್ಟುಕೊಳ್ಳಬೇಕು’ ಎಂದು ಸೂಚನೆ ನೀಡಿದರು. </p>.<p>ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ರಿಷಿ ಆನಂದ್, ವಿಜಯಪುರ ಉಪ ವಿಭಾಗಾಧಿಕಾರಿ ಗುರುನಾಥ ದಡ್ಡೆ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬದ್ರುದ್ದಿನ್ ಸೌದಾಗರ, ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕ ರಾಹುಲ್ ಬಾವಿದೊಡ್ಡಿ, ತಾಲ್ಲೂಕು ನೋಡಲ್ ಅಧಿಕಾರಿಗಳು ಹಾಗೂ ತಾಲ್ಲೂಕಿನ ತಹಶೀಲ್ದಾರರು ಇದ್ದರು.</p>.<p>ತುರ್ತು ಸಂದರ್ಭಕ್ಕೆ ಸಹಾಯವಾಣಿ ಸಂಖ್ಯೆ 1077ಕ್ಕೆ ಸಂಪರ್ಕಿಸಿ ಈಜುಗಾರರು, ಹಾವಾಡಿಗರು, ಸ್ವಯಂ ಸೇವಕರ ಮಾಹಿತಿ ಇರಲಿ ಮನೆಹಾನಿಗೆ 72 ಗಂಟೆಗಳಲ್ಲಿ ಪರಿಹಾರ ಒದಗಿಸಿ</p>.<div><blockquote>ಜಿಲ್ಲೆಯಲ್ಲಿ ಎದುರಾಗಬಹುದಾದ ಪ್ರಕೃತಿ ವಿಕೋಪ ನಿಯಂತ್ರಣ ಕ್ರಮ ಕೈಕೊಳ್ಳುವುದಕ್ಕಾಗಿ ಸಾರ್ವಜನಿಕರಲ್ಲಿ ತಿಳಿವಳಿಕೆ ಮೂಡಿಸಬೇಕು</blockquote><span class="attribution">ಡಾ. ಆನಂದ್ ಕೆ.ಜಿಲ್ಲಾಧಿಕಾರಿ </span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>