<p><strong>ವಿಜಯಪುರ:</strong> ‘ನಾನು ನಿಷ್ಠಾವಂತ ಕಾಂಗ್ರೆಸ್ಸಿಗ, 1981ರಿಂದ ಕಾಂಗ್ರೆಸ್ ಪಕ್ಷದಲ್ಲಿಯೇ ಇರುವೆ. ಯಾವ ಕಪ್ಪು ಚುಕ್ಕೆ ಇಲ್ಲದೇ ರಾಜಕೀಯ ಜೀವನದಲ್ಲಿರುವ ವ್ಯಕ್ತಿ. ಹೀಗಾಗಿ ನಾನು ಸಚಿವ ಸ್ಥಾನದ ಆಕಾಂಕ್ಷಿ’ ಎಂದು ಕರ್ನಾಟಕ ಸಾಬೂನು– ಮಾರ್ಜಕ ನಿಗಮದ ಅಧ್ಯಕ್ಷ ಸಿ.ಎಸ್. ನಾಡಗೌಡ ಹೇಳಿದರು.</p><p>ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸಚಿವ ಸ್ಥಾನ ಅಪೇಕ್ಷೆ ಪಡುವುದರಲ್ಲಿ ತಪ್ಪಿಲ್ಲ. ಇದರಲ್ಲಿ ನೈತಿಕ ಹಕ್ಕಿನ ಪ್ರಶ್ನೆಯೇ ಉದ್ಭವಿಸುವುದಿಲ್ಲ, ಯಶವಂತರಾಯಗೌಡ ನನ್ನ ತಮ್ಮ, ಅವರಿಗೆ ಸಚಿವ ಸ್ಥಾನ ಸಿಕ್ಕರೂ ಸಂತೋಷಪಡುವೆ’ ಎಂದರು.</p><p>‘ಜಿಲ್ಲೆಗೆ ಇನ್ನೊಂದು ಸಚಿವ ಸ್ಥಾನ ಬಂದರೆ ಬೇಡವೆನ್ನುವುದೇಕೆ? ನಾವೆಲ್ಲ ಒಟ್ಟಾಗಿ ಕಾಂಗ್ರೆಸ್ ಹೈಕಮಾಂಡ್ ಬಳಿ ಹೋಗೋಣ, ನಮ್ಮಲ್ಲಿ ಯಾರಿಗೆ ಸಚಿವ ಸ್ಥಾನ ಕೊಟ್ಟರೂ ಸಂತೋಷ ಎಂದು ಹೇಳಿ ಬರೋಣ’ ಎಂದು ಹೇಳಿದರು.</p><p>‘ಈ ಹಿಂದೆ ಅನೇಕ ಬಾರಿ ನನ್ನ ಹೆಸರು ಸಚಿವರ ಪಟ್ಟಿಯಲ್ಲಿತ್ತು, ನವದೆಹಲಿ ಮಟ್ಟದಲ್ಲೂ ಕ್ಲಿಯರ್ ಆಗಿತ್ತು. ಆದರೆ, ಆ ನಂತರ ಕೈ ತಪ್ಪಿತು. ಅದಕ್ಕೆ ಅಸಮಾಧಾನ ಹೊರಹಾಕಲು ಆಗುತ್ತದೆಯೇ’ ಎಂದು ಪ್ರಶ್ನಿಸಿದರು.</p><p>‘ಲಿಂಗಾಯತ ಕೋಟಾ ಆಧರಿಸಿಯೇ ಅನೇಕರು ಮಂತ್ರಿಯಾಗಿದ್ದಾರೆ, ನಾನು ಮಂತ್ರಿಯಾಗಬೇಕು ಎಂಬುದು ಅಪೇಕ್ಷೆ. ಆದರೆ ಬೇರೆಯವರಿಗೆ ಸಚಿವ ಸ್ಥಾನ ಕೊಡಬೇಡಿ ಎಂದು ಹೇಳುವ ಜಾಯಮಾನ ನನ್ನದಲ್ಲ’ ಎಂದರು.</p><p>ಸ್ಥಳ ಪರಿಶೀಲನೆ: ‘ಮೈಸೂರು ಸ್ಯಾಂಡಲ್ ಸೋಪ್’ ಉತ್ಪಾದನಾ ಘಟಕ ಸ್ಥಾಪನೆಗೆ ಇಟ್ಟಂಗಿಹಾಳದಲ್ಲಿ ಉದ್ದೇಶಿತ 30 ಎಕರೆ ಜಮೀನಿನಲ್ಲಿ ಬಗರ್ ಹುಕುಂ ಸಾಗುವಳಿದಾರರು ಅರ್ಜಿ ಹಾಕಿದ್ದರು. ಈ ಹಿನ್ನೆಲೆಯಲ್ಲಿ ಪರ್ಯಾಯವಾಗಿ ಬೇರೆ ಜಮೀನನ್ನು ಪರಿಶೀಲನೆ ಮಾಡಲಾಗಿದೆ. ಆದರೆ, ಅಲ್ಲಿ ನೆಡುತೋಪು ನಿರ್ಮಾಣ ಕಷ್ಟ ಸಾಧ್ಯ, ಉತ್ಪಾದನಾ ಘಟಕ ಮಾತ್ರ ನಿರ್ಮಾಣ ಸಾಧ್ಯ, ಈ ಎರಡು ವಿಷಯಗಳನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವರ ಗಮನಕ್ಕೆ ತರಲಾಗುವುದು’ ಎಂದು ತಿಳಿಸಿದರು.</p><p>‘ವಿಜಯಪುರದಲ್ಲಿ ರೋಸ್, ಜಾಸ್ಮೀನ್ ಮೊದಲಾದ ಸೋಪು, ಡಿಟರ್ಜೆಂಟ್ ಪೌಡರ್ ಹಾಗೂ ಡಿಟೆರ್ಜೆಂಟ್ಗಳನ್ನು ಇಲ್ಲಿ ಉತ್ಪಾದಿಸುವ ಕಾರ್ಯಯೋಜನೆ ಇದೆ, ಪ್ರತಿ ಗಂಟೆಗೆ 2 ಟನ್ ಸಾಬೂನು ಉತ್ಪಾದಿಸುವ ಸಾಮರ್ಥ್ಯವುಳ್ಳ ಯಂತ್ರವನ್ನು ಇಲ್ಲಿ ಅಳವಡಿಸುವ ಕಾರ್ಯ ಯೋಜನೆ ರೂಪಿಸಲಾಗಿದೆ’ ಎಂದರು.</p><p>‘ಉತ್ಪಾದನಾ ಘಟಕವನ್ನು ಪ್ರಥಮ ಬಾರಿಗೆ ವಿಜಯಪುರಕ್ಕೆ ತರುವ ಪ್ರಯತ್ನ ನಡೆದಿದೆ, 200 ಜನಕ್ಕೆ ನೇರ ಉದ್ಯೋಗ ಒದಗಿಸಲು ಸಾಧ್ಯವಾಗಲಿದ್ದು, ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉದ್ಯೋಗ ಸೃಜನೆಯಾಗಲಿದೆ’ ಎಂದು ಭರವಸೆ ನೀಡಿದರು.</p><h2>‘ಸಿ.ಎಂ ಬದಲು ಹೈಕಮಾಂಡ್ ನಿರ್ಧಾರ’</h2><p>ಮುದ್ದೇಬಿಹಾಳ: ‘ಮುಖ್ಯಮಂತ್ರಿ ಸಿದ್ದರಾಮಯ್ಯ ಬದಲಾವಣೆಯು ಹೈಕಮಾಂಡ್ ನಿರ್ಧಾರ. ಈ ವಿಷಯ ಮಾತನಾಡಲು ನಾವೆಲ್ಲ ಬಹಳ ಸಣ್ಣವರು’ ಎಂದು ಶಾಸಕ ಸಿ.ಎಸ್. ನಾಡಗೌಡ ಹೇಳಿದರು.</p><p>ಪಟ್ಟಣದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸುಗಮವಾಗಿ, ಸರಳವಾಗಿ ಸರ್ಕಾರ ನಡೆದಿದೆ. ಮಂತ್ರಿ ಮಂಡಲದ ಬದಲಾವಣೆ ಆಗುವುದು ಸಹಜ. ಕೆಲವರು ಬದಲಾಗುವ ಸಾಧ್ಯತೆ ಇದೆ’ ಎಂದರು.</p><p>‘ಜಿಲ್ಲೆಯಲ್ಲಿ ಇಬ್ಬರು ಸಚಿವರಿದ್ದು, ಅವರಲ್ಲಿ ಯಾರಾದರೂ ಸಚಿವ ಸ್ಥಾನ ತ್ಯಾಗ ಮಾಡಿದರೆ ಆ ಸ್ಥಾನಕ್ಕೆ ಹಿರಿಯನಾದ ನನ್ನನ್ನು ಪರಿಗಣಿಸಬೇಕು ಎಂದು ಹೈಕಮಾಂಡ್ಗೆ ವಿನಂತಿಸಿದ್ದೇನೆ’ ಎಂದು ತಿಳಿಸಿದರು.</p><p>‘ಈ ಬಾರಿ ನನ್ನನ್ನು ಮಂತ್ರಿ ಮಾಡುವ ಆಶ್ವಾಸನೆ ಹೈಕಮಾಂಡ್ನಿಂದ ಸಿಕ್ಕಿದೆ. ಸಂಪುಟದಲ್ಲಿ ಇರುವ ವಿಶ್ವಾಸ ಇದೆ’ ಎಂದು ತಿಳಿಸಿದರು.</p><p>ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ, ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲ್ಬುರ್ಗಿ, ಉದ್ಯಮಿ ಶರಣು ಸಜ್ಜನ, ರಾಜು ಗೌಡರ, ರಾಯನಗೌಡ ತಾತರೆಡ್ಡಿ ಇದ್ದರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ:</strong> ‘ನಾನು ನಿಷ್ಠಾವಂತ ಕಾಂಗ್ರೆಸ್ಸಿಗ, 1981ರಿಂದ ಕಾಂಗ್ರೆಸ್ ಪಕ್ಷದಲ್ಲಿಯೇ ಇರುವೆ. ಯಾವ ಕಪ್ಪು ಚುಕ್ಕೆ ಇಲ್ಲದೇ ರಾಜಕೀಯ ಜೀವನದಲ್ಲಿರುವ ವ್ಯಕ್ತಿ. ಹೀಗಾಗಿ ನಾನು ಸಚಿವ ಸ್ಥಾನದ ಆಕಾಂಕ್ಷಿ’ ಎಂದು ಕರ್ನಾಟಕ ಸಾಬೂನು– ಮಾರ್ಜಕ ನಿಗಮದ ಅಧ್ಯಕ್ಷ ಸಿ.ಎಸ್. ನಾಡಗೌಡ ಹೇಳಿದರು.</p><p>ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸಚಿವ ಸ್ಥಾನ ಅಪೇಕ್ಷೆ ಪಡುವುದರಲ್ಲಿ ತಪ್ಪಿಲ್ಲ. ಇದರಲ್ಲಿ ನೈತಿಕ ಹಕ್ಕಿನ ಪ್ರಶ್ನೆಯೇ ಉದ್ಭವಿಸುವುದಿಲ್ಲ, ಯಶವಂತರಾಯಗೌಡ ನನ್ನ ತಮ್ಮ, ಅವರಿಗೆ ಸಚಿವ ಸ್ಥಾನ ಸಿಕ್ಕರೂ ಸಂತೋಷಪಡುವೆ’ ಎಂದರು.</p><p>‘ಜಿಲ್ಲೆಗೆ ಇನ್ನೊಂದು ಸಚಿವ ಸ್ಥಾನ ಬಂದರೆ ಬೇಡವೆನ್ನುವುದೇಕೆ? ನಾವೆಲ್ಲ ಒಟ್ಟಾಗಿ ಕಾಂಗ್ರೆಸ್ ಹೈಕಮಾಂಡ್ ಬಳಿ ಹೋಗೋಣ, ನಮ್ಮಲ್ಲಿ ಯಾರಿಗೆ ಸಚಿವ ಸ್ಥಾನ ಕೊಟ್ಟರೂ ಸಂತೋಷ ಎಂದು ಹೇಳಿ ಬರೋಣ’ ಎಂದು ಹೇಳಿದರು.</p><p>‘ಈ ಹಿಂದೆ ಅನೇಕ ಬಾರಿ ನನ್ನ ಹೆಸರು ಸಚಿವರ ಪಟ್ಟಿಯಲ್ಲಿತ್ತು, ನವದೆಹಲಿ ಮಟ್ಟದಲ್ಲೂ ಕ್ಲಿಯರ್ ಆಗಿತ್ತು. ಆದರೆ, ಆ ನಂತರ ಕೈ ತಪ್ಪಿತು. ಅದಕ್ಕೆ ಅಸಮಾಧಾನ ಹೊರಹಾಕಲು ಆಗುತ್ತದೆಯೇ’ ಎಂದು ಪ್ರಶ್ನಿಸಿದರು.</p><p>‘ಲಿಂಗಾಯತ ಕೋಟಾ ಆಧರಿಸಿಯೇ ಅನೇಕರು ಮಂತ್ರಿಯಾಗಿದ್ದಾರೆ, ನಾನು ಮಂತ್ರಿಯಾಗಬೇಕು ಎಂಬುದು ಅಪೇಕ್ಷೆ. ಆದರೆ ಬೇರೆಯವರಿಗೆ ಸಚಿವ ಸ್ಥಾನ ಕೊಡಬೇಡಿ ಎಂದು ಹೇಳುವ ಜಾಯಮಾನ ನನ್ನದಲ್ಲ’ ಎಂದರು.</p><p>ಸ್ಥಳ ಪರಿಶೀಲನೆ: ‘ಮೈಸೂರು ಸ್ಯಾಂಡಲ್ ಸೋಪ್’ ಉತ್ಪಾದನಾ ಘಟಕ ಸ್ಥಾಪನೆಗೆ ಇಟ್ಟಂಗಿಹಾಳದಲ್ಲಿ ಉದ್ದೇಶಿತ 30 ಎಕರೆ ಜಮೀನಿನಲ್ಲಿ ಬಗರ್ ಹುಕುಂ ಸಾಗುವಳಿದಾರರು ಅರ್ಜಿ ಹಾಕಿದ್ದರು. ಈ ಹಿನ್ನೆಲೆಯಲ್ಲಿ ಪರ್ಯಾಯವಾಗಿ ಬೇರೆ ಜಮೀನನ್ನು ಪರಿಶೀಲನೆ ಮಾಡಲಾಗಿದೆ. ಆದರೆ, ಅಲ್ಲಿ ನೆಡುತೋಪು ನಿರ್ಮಾಣ ಕಷ್ಟ ಸಾಧ್ಯ, ಉತ್ಪಾದನಾ ಘಟಕ ಮಾತ್ರ ನಿರ್ಮಾಣ ಸಾಧ್ಯ, ಈ ಎರಡು ವಿಷಯಗಳನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವರ ಗಮನಕ್ಕೆ ತರಲಾಗುವುದು’ ಎಂದು ತಿಳಿಸಿದರು.</p><p>‘ವಿಜಯಪುರದಲ್ಲಿ ರೋಸ್, ಜಾಸ್ಮೀನ್ ಮೊದಲಾದ ಸೋಪು, ಡಿಟರ್ಜೆಂಟ್ ಪೌಡರ್ ಹಾಗೂ ಡಿಟೆರ್ಜೆಂಟ್ಗಳನ್ನು ಇಲ್ಲಿ ಉತ್ಪಾದಿಸುವ ಕಾರ್ಯಯೋಜನೆ ಇದೆ, ಪ್ರತಿ ಗಂಟೆಗೆ 2 ಟನ್ ಸಾಬೂನು ಉತ್ಪಾದಿಸುವ ಸಾಮರ್ಥ್ಯವುಳ್ಳ ಯಂತ್ರವನ್ನು ಇಲ್ಲಿ ಅಳವಡಿಸುವ ಕಾರ್ಯ ಯೋಜನೆ ರೂಪಿಸಲಾಗಿದೆ’ ಎಂದರು.</p><p>‘ಉತ್ಪಾದನಾ ಘಟಕವನ್ನು ಪ್ರಥಮ ಬಾರಿಗೆ ವಿಜಯಪುರಕ್ಕೆ ತರುವ ಪ್ರಯತ್ನ ನಡೆದಿದೆ, 200 ಜನಕ್ಕೆ ನೇರ ಉದ್ಯೋಗ ಒದಗಿಸಲು ಸಾಧ್ಯವಾಗಲಿದ್ದು, ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉದ್ಯೋಗ ಸೃಜನೆಯಾಗಲಿದೆ’ ಎಂದು ಭರವಸೆ ನೀಡಿದರು.</p><h2>‘ಸಿ.ಎಂ ಬದಲು ಹೈಕಮಾಂಡ್ ನಿರ್ಧಾರ’</h2><p>ಮುದ್ದೇಬಿಹಾಳ: ‘ಮುಖ್ಯಮಂತ್ರಿ ಸಿದ್ದರಾಮಯ್ಯ ಬದಲಾವಣೆಯು ಹೈಕಮಾಂಡ್ ನಿರ್ಧಾರ. ಈ ವಿಷಯ ಮಾತನಾಡಲು ನಾವೆಲ್ಲ ಬಹಳ ಸಣ್ಣವರು’ ಎಂದು ಶಾಸಕ ಸಿ.ಎಸ್. ನಾಡಗೌಡ ಹೇಳಿದರು.</p><p>ಪಟ್ಟಣದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸುಗಮವಾಗಿ, ಸರಳವಾಗಿ ಸರ್ಕಾರ ನಡೆದಿದೆ. ಮಂತ್ರಿ ಮಂಡಲದ ಬದಲಾವಣೆ ಆಗುವುದು ಸಹಜ. ಕೆಲವರು ಬದಲಾಗುವ ಸಾಧ್ಯತೆ ಇದೆ’ ಎಂದರು.</p><p>‘ಜಿಲ್ಲೆಯಲ್ಲಿ ಇಬ್ಬರು ಸಚಿವರಿದ್ದು, ಅವರಲ್ಲಿ ಯಾರಾದರೂ ಸಚಿವ ಸ್ಥಾನ ತ್ಯಾಗ ಮಾಡಿದರೆ ಆ ಸ್ಥಾನಕ್ಕೆ ಹಿರಿಯನಾದ ನನ್ನನ್ನು ಪರಿಗಣಿಸಬೇಕು ಎಂದು ಹೈಕಮಾಂಡ್ಗೆ ವಿನಂತಿಸಿದ್ದೇನೆ’ ಎಂದು ತಿಳಿಸಿದರು.</p><p>‘ಈ ಬಾರಿ ನನ್ನನ್ನು ಮಂತ್ರಿ ಮಾಡುವ ಆಶ್ವಾಸನೆ ಹೈಕಮಾಂಡ್ನಿಂದ ಸಿಕ್ಕಿದೆ. ಸಂಪುಟದಲ್ಲಿ ಇರುವ ವಿಶ್ವಾಸ ಇದೆ’ ಎಂದು ತಿಳಿಸಿದರು.</p><p>ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ, ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲ್ಬುರ್ಗಿ, ಉದ್ಯಮಿ ಶರಣು ಸಜ್ಜನ, ರಾಜು ಗೌಡರ, ರಾಯನಗೌಡ ತಾತರೆಡ್ಡಿ ಇದ್ದರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>