<p><strong>ವಿಜಯಪುರ:</strong> ಕೂಡಗಿ ಎನ್.ಟಿ.ಪಿ.ಸಿ. ಬೃಹತ್ ಕೆರೆಗಳಲ್ಲಿ ಸಂಗ್ರಹವಾಗುವ ಹಾರುಬೂದಿ ಇಂಗುವಿಕೆಯಿಂದ ಅಕ್ಕ-ಪಕ್ಕದ ಜಮೀನುಗಳಲ್ಲಿ ಬೆಳೆಗಳು ಹಾಳಾಗುತ್ತಿರುವ ಬಗ್ಗೆ ತಜ್ಞರ ಸಮಿತಿ ನೇಮಿಸಿ ಅಧ್ಯಯನ ವರದಿ ಪಡೆದು, ಅಗತ್ಯ ಕ್ರಮ ಕೈಗೊಳ್ಳಲು ಮಂಗಳವಾರ ನಡೆದ ಒಂಬತ್ತನೇ ಗ್ರಾಮಾಭಿವೃದ್ಧಿ ಸಲಹಾ ಸಮಿತಿ ಸಭೆಯಲ್ಲಿ ನಿರ್ಣಯಿಸಲಾಯಿತು.</p>.<p>ಸವಳು-ಜವಳು ಭೂಮಿ ಮಾರ್ಪಾಡಾಗುತ್ತಿರುವ ಬಗ್ಗೆ ತಜ್ಞರ ಸಮಿತಿಯಿಂದ ಪರಿಶೀಲಿಸಿ, ವರದಿಯನ್ನು ಸಲ್ಲಿಸಲು ಎನ್.ಟಿ.ಪಿ.ಸಿ ಅಧಿಕಾರಿಗಳಿಗೆಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್ಸೂಚಿಸಿದರು.</p>.<p>ಎನ್.ಟಿ.ಪಿ.ಸಿ.ಯಿಂದ ಬರುವ ಹಾರು ಬೂದಿ ಮತ್ತು ಸಾಗಾಣಿಕೆ ಮಾಡುವ ವಾಹನಗಳ ಸಂಚಾರದಿಂದ ಹಾಳಾಗುತ್ತಿರುವ ಅಕ್ಕ-ಪಕ್ಕದ ಜಮೀನುಗಳಲ್ಲಿನ ವೀಳ್ಯಾದ ಎಲೆ, ಉಳ್ಳಾಗಡ್ಡಿ ಮತ್ತು ಇತರ ಬೆಳೆಗಳ ಮೇಲೆ ಸಂಗ್ರಹವಾದ ಬೂದಿಯನ್ನು ಸ್ವಚ್ಛತೆಗೊಳಿಸಲು ಅಗತ್ಯ ಕ್ರಮವಹಿಸುವಂತೆ ತಿಳಿಸಿದರು.</p>.<p>ಹಾರು ಬೂದಿಯನ್ನು ಸಾಗಾಣಿಕೆ ಮಾಡುವ ವಾಹನಗಳ ಸಂಚಾರದಿಂದ ರಸ್ತೆಗಳು ಹಾಳಾಗುತ್ತಿದ್ದು, ಈ ಬಗ್ಗೆಯೂ ಗಮನಹರಿಸಿ ಸೂಕ್ತ ನಿರ್ವಹಣೆ ಮಾಡಿಕೊಳ್ಳಲು ಎನ್.ಟಿ.ಪಿ.ಸಿ. ಅಧಿಕಾರಿಗಳಿಗೆ ಸೂಚಿಸಿದರು.</p>.<p>2017-18 ನೇ ಸಾಲಿನಿಂದ ಇಲ್ಲಿಯವರೆಗೆ ಗ್ರಾಮ ಪಂಚಾಯ್ತಿಗಳಿಗೆ ತೆರಿಗೆ ನೀಡಿಲ್ಲ. ಬಾಕಿ ಇರುವ ₹ 18,17,19.824 ಅನ್ನು ಸೆಪ್ಟೆಂಬರ್ 30 ರೊಳಗಾಗಿ ಸಂದಾಯ ಮಾಡಲು ಜಿಲ್ಲಾಧಿಕಾರಿ ಸೂಚಿಸಿದರು.</p>.<p>ಎನ್.ಟಿ.ಪಿ.ಸಿ. ವ್ಯಾಪ್ತಿಯಲ್ಲಿ ಬರುವ ಐದು ಗ್ರಾಮಗಳ ನಿರುದ್ಯೋಗಿ ಯುವಕರಿಗೆ ಉದ್ಯೋಗ ನೀಡಬೇಕು. ನಿರುದ್ಯೋಗಿ ಯುವಕರಿಗೆ ಸಿ.ಎಸ್.ಆರ್. ನಿಧಿಯಲ್ಲಿ ಕೌಶಲ ಅಭಿವೃದ್ಧಿ ತರಬೇತಿ ನೀಡಬೇಕು. ಗ್ರೂಫ್ ಸಿ ಮತ್ತು ‘ಡಿ’ ದರ್ಜೆಯ ಹುದ್ದೆಗಳ ವಿವರಗಳನ್ನು ಪಟ್ಟಿ ಮಾಡಿ ತಮ್ಮ ಕಚೇರಿಗೆ ಮಾಹಿತಿ ನೀಡಬೇಕು ಎಂದರು.</p>.<p>ಶಾಸಕ ಶಿವಾನಂದ ಪಾಟೀಲ ಮಾತನಾಡಿ, ಪುನರ್ ವಸತಿ ಮತ್ತು ಪುನರ್ ನಿರ್ಮಾಣ ಕಾರ್ಯವನ್ನು ಕೇವಲ ಐದು ವರ್ಷಕ್ಕೆ ಸೀಮಿತಗೊಳಿಸದೇ ಮುಂದುವರಿಸಬೇಕು ಎಂದು ಆಗ್ರಹಿಸಿದರು.</p>.<p>ಎನ್.ಟಿ.ಪಿ.ಸಿ. ಘಟಕದ ಲಾಭ ಮತ್ತು ನಷ್ಟದ ಲೆಕ್ಕಾಚಾರವನ್ನು ಪರಿಶೀಲನೆಗೆ ಒಳಪಡಿಸಬೇಕು ಎಂದು ಒತ್ತಾಯಿಸಿದರು.</p>.<p>ಕೂಡಗಿ ಗ್ರಾಮದಲ್ಲಿ ನಿರ್ಮಾಣಗೊಳ್ಳುತ್ತಿರುವ ಸೇತುವೆ ಕಾರ್ಯವು ಅರ್ಧಕ್ಕೆ ನಿಂತಿರುವುದಲ್ಲದೆ, ಇದಕ್ಕೆ ಹೊಂದಿಕೊಂಡು ಸಂಪರ್ಕ ರಸ್ತೆಯು ದೊರಕದೆ, ಮಳೆ ನೀರು ನಿಂತು ಸಂಚಾರಕ್ಕೆ ಮತ್ತು ಜನರ ಬಳಕೆ ತೀವ್ರ ಅನಾನೂಕೂಲತೆ ಉಂಟಾಗಿರುತ್ತದೆ ಎಂದು ಶಾಸಕರು ದೂರಿದರು.</p>.<p>ಈ ಕಾಮಗಾರಿ ನ್ಯೂನ್ಯತೆ ಸರಿಪಡಿಸಿ ಆದ್ಯತೆ ಮೇರೆಗೆ ಮುಕ್ತಾಯಗೊಳಿಸಿ, ಸಾರ್ವಜನಿಕ ಅನುಕೂಲವಾಗುವಂತೆ ಅಗತ್ಯ ಕ್ರಮ ಕೈಗೊಳ್ಳಲು ಎನ್.ಟಿ.ಪಿ.ಸಿ. ಅಧಿಕಾರಿಗಳಿಗೆ ಸೂಚಿಸಿದರು.</p>.<p>ಎನ್.ಟಿ.ಪಿ.ಸಿಯಿಂದ ಐದು ಗ್ರಾಮಗಳಲ್ಲಿ ನಿರುದ್ಯೋಗಿಗಳಿಗೆ ಉದ್ಯೋಗ ಕಲ್ಪಿಸಲಾಗಿದ್ದು, ಒಂದು ಗ್ರಾಮಕ್ಕೆ ಹೆಚ್ಚಿಗೆ ಮತ್ತು ಒಂದು ಗ್ರಾಮಕ್ಕೆ ಕಡಿಮೆ ಜನರಿಗೆ ಉದ್ಯೋಗ ಕಲ್ಪಿಸಿರುವ ಬಗ್ಗೆ ಕೂಡಲೇ ಪರಿಶೀಲಿಸಿ ಅಗತ್ಯ ಕ್ರಮವಹಿಸಲು ತಿಳಿಸಿದರು.</p>.<p>ಹೆಚ್ಚುವರಿ ಜಿಲ್ಲಾಧಿಕಾರಿ ರಮೇಶ ಕಳಸದ, ಉಪವಿಭಾಗಾಧಿಕಾರಿ ಬಲರಾಮ ಚವ್ಹಾಣ, ಕೋಲ್ದಾರ ತಹಶೀಲ್ದಾರ್ ಎಸ್.ಡಿ.ಮುರಾಳ, ಬಸವನ ಬಾಗೇವಾಡಿ ತಹಶೀಲ್ದಾರ್ ಎಂ.ಎನ್.ಬಳಿಗಾರ, ನಿಡಗುಂದಿ ತಹಶೀಲ್ದಾರ್ ಎಸ್.ಬಿ. ಕೂಡಲಗಿ, ಕೆ.ಜೆ.ರೆಡ್ಡಿ, ವಿ.ಜಯನಾರಾಯಣ, ಬಿ.ಆರ್.ರಾವ್, ಎಂ.ಎಚ್.ಮಂಜುನಾಥ ಸಭೆಯಲ್ಲಿ ಉಪಸ್ಥಿತರಿರು.</p>.<p class="Briefhead"><strong>ರೈತರ ಹೊರಗಿಟ್ಟು ಸಭೆ; ಆಕ್ರೋಶ</strong></p>.<p>ಕೊಲ್ಹಾರ: ತಾಲ್ಲೂಕಿನ ಕೂಡಗಿ ಎನ್ಟಿಪಿಸಿಯಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಗ್ರಾಮಾಭಿವೃದ್ಧಿ ಸಲಹಾ ಸಮಿತಿ (ವಿ.ಡಿ.ಎ.ಸಿ) ಸಭೆಯಲ್ಲಿ ತಮ್ಮ ನೋವು, ಸಂಕಷ್ಟಗಳನ್ನು ತೋಡಿಕೊಳ್ಳಲು ಬಂದಿದ್ದ ಬಾಧಿತ ಗ್ರಾಮದ ಸಂತ್ರಸ್ತರು ಹಾಗೂ ರೈತರಿಗೆ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಳ್ಳಲು ಅವಕಾಶ ನೀಡದೇಇರುವುದು ಆಕ್ರೋಶಕ್ಕೆ ಕಾರಣವಾಯಿತು.</p>.<p>ಸಂತ್ರಸ್ತರ ಧ್ವನಿ ಹತ್ತಿಕ್ಕುವ ಕುತಂತ್ರವನ್ನು ಅಧಿಕಾರಿಗಳು ನಡೆಸಿದ್ದಾರೆ ಎಂದು ರೈತರು ಆರೋಪಿಸಿದರು.</p>.<p>‘ಬಾಧಿತ ಗ್ರಾಮಗಳಿಗೆ ಉಚಿತ ವಿದ್ಯುತ್, ಸಂತ್ರಸ್ತರ ಮಕ್ಕಳಿಗೆ ಉದ್ಯೋಗಾವಕಾಶ ಸೇರಿದಂತೆ ಹಲವು ಭರವಸೆಗಳು ಇನ್ನೂ ಸಾಕಾರಗೊಂಡಿಲ್ಲ. ಮಸೂತಿ ಭಾಗದಲ್ಲಿ ಸ್ಥಾಪಿಸಿರುವ ಬೂದಿ ಸಂಗ್ರಹಿಸುವ ಕೆರೆಗಳಿಂದ ಈ ಭಾಗದ 200-300 ಎಕರೆ ಫಲವತ್ತಾದ ಕೃಷಿ ಭೂಮಿ ಸವುಳ, ಜವುಳ ಸಮಸ್ಯೆಯಿಂದ ಹಾಳಾಗಿವೆ. ಈ ಜಮೀನುಗಳ ರೈತರಿಗೆ ಶಾಶ್ವತ ಪರಿಹಾರ ಕಲ್ಪಿಸಬೇಕು’ ಎಂದು ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ:</strong> ಕೂಡಗಿ ಎನ್.ಟಿ.ಪಿ.ಸಿ. ಬೃಹತ್ ಕೆರೆಗಳಲ್ಲಿ ಸಂಗ್ರಹವಾಗುವ ಹಾರುಬೂದಿ ಇಂಗುವಿಕೆಯಿಂದ ಅಕ್ಕ-ಪಕ್ಕದ ಜಮೀನುಗಳಲ್ಲಿ ಬೆಳೆಗಳು ಹಾಳಾಗುತ್ತಿರುವ ಬಗ್ಗೆ ತಜ್ಞರ ಸಮಿತಿ ನೇಮಿಸಿ ಅಧ್ಯಯನ ವರದಿ ಪಡೆದು, ಅಗತ್ಯ ಕ್ರಮ ಕೈಗೊಳ್ಳಲು ಮಂಗಳವಾರ ನಡೆದ ಒಂಬತ್ತನೇ ಗ್ರಾಮಾಭಿವೃದ್ಧಿ ಸಲಹಾ ಸಮಿತಿ ಸಭೆಯಲ್ಲಿ ನಿರ್ಣಯಿಸಲಾಯಿತು.</p>.<p>ಸವಳು-ಜವಳು ಭೂಮಿ ಮಾರ್ಪಾಡಾಗುತ್ತಿರುವ ಬಗ್ಗೆ ತಜ್ಞರ ಸಮಿತಿಯಿಂದ ಪರಿಶೀಲಿಸಿ, ವರದಿಯನ್ನು ಸಲ್ಲಿಸಲು ಎನ್.ಟಿ.ಪಿ.ಸಿ ಅಧಿಕಾರಿಗಳಿಗೆಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್ಸೂಚಿಸಿದರು.</p>.<p>ಎನ್.ಟಿ.ಪಿ.ಸಿ.ಯಿಂದ ಬರುವ ಹಾರು ಬೂದಿ ಮತ್ತು ಸಾಗಾಣಿಕೆ ಮಾಡುವ ವಾಹನಗಳ ಸಂಚಾರದಿಂದ ಹಾಳಾಗುತ್ತಿರುವ ಅಕ್ಕ-ಪಕ್ಕದ ಜಮೀನುಗಳಲ್ಲಿನ ವೀಳ್ಯಾದ ಎಲೆ, ಉಳ್ಳಾಗಡ್ಡಿ ಮತ್ತು ಇತರ ಬೆಳೆಗಳ ಮೇಲೆ ಸಂಗ್ರಹವಾದ ಬೂದಿಯನ್ನು ಸ್ವಚ್ಛತೆಗೊಳಿಸಲು ಅಗತ್ಯ ಕ್ರಮವಹಿಸುವಂತೆ ತಿಳಿಸಿದರು.</p>.<p>ಹಾರು ಬೂದಿಯನ್ನು ಸಾಗಾಣಿಕೆ ಮಾಡುವ ವಾಹನಗಳ ಸಂಚಾರದಿಂದ ರಸ್ತೆಗಳು ಹಾಳಾಗುತ್ತಿದ್ದು, ಈ ಬಗ್ಗೆಯೂ ಗಮನಹರಿಸಿ ಸೂಕ್ತ ನಿರ್ವಹಣೆ ಮಾಡಿಕೊಳ್ಳಲು ಎನ್.ಟಿ.ಪಿ.ಸಿ. ಅಧಿಕಾರಿಗಳಿಗೆ ಸೂಚಿಸಿದರು.</p>.<p>2017-18 ನೇ ಸಾಲಿನಿಂದ ಇಲ್ಲಿಯವರೆಗೆ ಗ್ರಾಮ ಪಂಚಾಯ್ತಿಗಳಿಗೆ ತೆರಿಗೆ ನೀಡಿಲ್ಲ. ಬಾಕಿ ಇರುವ ₹ 18,17,19.824 ಅನ್ನು ಸೆಪ್ಟೆಂಬರ್ 30 ರೊಳಗಾಗಿ ಸಂದಾಯ ಮಾಡಲು ಜಿಲ್ಲಾಧಿಕಾರಿ ಸೂಚಿಸಿದರು.</p>.<p>ಎನ್.ಟಿ.ಪಿ.ಸಿ. ವ್ಯಾಪ್ತಿಯಲ್ಲಿ ಬರುವ ಐದು ಗ್ರಾಮಗಳ ನಿರುದ್ಯೋಗಿ ಯುವಕರಿಗೆ ಉದ್ಯೋಗ ನೀಡಬೇಕು. ನಿರುದ್ಯೋಗಿ ಯುವಕರಿಗೆ ಸಿ.ಎಸ್.ಆರ್. ನಿಧಿಯಲ್ಲಿ ಕೌಶಲ ಅಭಿವೃದ್ಧಿ ತರಬೇತಿ ನೀಡಬೇಕು. ಗ್ರೂಫ್ ಸಿ ಮತ್ತು ‘ಡಿ’ ದರ್ಜೆಯ ಹುದ್ದೆಗಳ ವಿವರಗಳನ್ನು ಪಟ್ಟಿ ಮಾಡಿ ತಮ್ಮ ಕಚೇರಿಗೆ ಮಾಹಿತಿ ನೀಡಬೇಕು ಎಂದರು.</p>.<p>ಶಾಸಕ ಶಿವಾನಂದ ಪಾಟೀಲ ಮಾತನಾಡಿ, ಪುನರ್ ವಸತಿ ಮತ್ತು ಪುನರ್ ನಿರ್ಮಾಣ ಕಾರ್ಯವನ್ನು ಕೇವಲ ಐದು ವರ್ಷಕ್ಕೆ ಸೀಮಿತಗೊಳಿಸದೇ ಮುಂದುವರಿಸಬೇಕು ಎಂದು ಆಗ್ರಹಿಸಿದರು.</p>.<p>ಎನ್.ಟಿ.ಪಿ.ಸಿ. ಘಟಕದ ಲಾಭ ಮತ್ತು ನಷ್ಟದ ಲೆಕ್ಕಾಚಾರವನ್ನು ಪರಿಶೀಲನೆಗೆ ಒಳಪಡಿಸಬೇಕು ಎಂದು ಒತ್ತಾಯಿಸಿದರು.</p>.<p>ಕೂಡಗಿ ಗ್ರಾಮದಲ್ಲಿ ನಿರ್ಮಾಣಗೊಳ್ಳುತ್ತಿರುವ ಸೇತುವೆ ಕಾರ್ಯವು ಅರ್ಧಕ್ಕೆ ನಿಂತಿರುವುದಲ್ಲದೆ, ಇದಕ್ಕೆ ಹೊಂದಿಕೊಂಡು ಸಂಪರ್ಕ ರಸ್ತೆಯು ದೊರಕದೆ, ಮಳೆ ನೀರು ನಿಂತು ಸಂಚಾರಕ್ಕೆ ಮತ್ತು ಜನರ ಬಳಕೆ ತೀವ್ರ ಅನಾನೂಕೂಲತೆ ಉಂಟಾಗಿರುತ್ತದೆ ಎಂದು ಶಾಸಕರು ದೂರಿದರು.</p>.<p>ಈ ಕಾಮಗಾರಿ ನ್ಯೂನ್ಯತೆ ಸರಿಪಡಿಸಿ ಆದ್ಯತೆ ಮೇರೆಗೆ ಮುಕ್ತಾಯಗೊಳಿಸಿ, ಸಾರ್ವಜನಿಕ ಅನುಕೂಲವಾಗುವಂತೆ ಅಗತ್ಯ ಕ್ರಮ ಕೈಗೊಳ್ಳಲು ಎನ್.ಟಿ.ಪಿ.ಸಿ. ಅಧಿಕಾರಿಗಳಿಗೆ ಸೂಚಿಸಿದರು.</p>.<p>ಎನ್.ಟಿ.ಪಿ.ಸಿಯಿಂದ ಐದು ಗ್ರಾಮಗಳಲ್ಲಿ ನಿರುದ್ಯೋಗಿಗಳಿಗೆ ಉದ್ಯೋಗ ಕಲ್ಪಿಸಲಾಗಿದ್ದು, ಒಂದು ಗ್ರಾಮಕ್ಕೆ ಹೆಚ್ಚಿಗೆ ಮತ್ತು ಒಂದು ಗ್ರಾಮಕ್ಕೆ ಕಡಿಮೆ ಜನರಿಗೆ ಉದ್ಯೋಗ ಕಲ್ಪಿಸಿರುವ ಬಗ್ಗೆ ಕೂಡಲೇ ಪರಿಶೀಲಿಸಿ ಅಗತ್ಯ ಕ್ರಮವಹಿಸಲು ತಿಳಿಸಿದರು.</p>.<p>ಹೆಚ್ಚುವರಿ ಜಿಲ್ಲಾಧಿಕಾರಿ ರಮೇಶ ಕಳಸದ, ಉಪವಿಭಾಗಾಧಿಕಾರಿ ಬಲರಾಮ ಚವ್ಹಾಣ, ಕೋಲ್ದಾರ ತಹಶೀಲ್ದಾರ್ ಎಸ್.ಡಿ.ಮುರಾಳ, ಬಸವನ ಬಾಗೇವಾಡಿ ತಹಶೀಲ್ದಾರ್ ಎಂ.ಎನ್.ಬಳಿಗಾರ, ನಿಡಗುಂದಿ ತಹಶೀಲ್ದಾರ್ ಎಸ್.ಬಿ. ಕೂಡಲಗಿ, ಕೆ.ಜೆ.ರೆಡ್ಡಿ, ವಿ.ಜಯನಾರಾಯಣ, ಬಿ.ಆರ್.ರಾವ್, ಎಂ.ಎಚ್.ಮಂಜುನಾಥ ಸಭೆಯಲ್ಲಿ ಉಪಸ್ಥಿತರಿರು.</p>.<p class="Briefhead"><strong>ರೈತರ ಹೊರಗಿಟ್ಟು ಸಭೆ; ಆಕ್ರೋಶ</strong></p>.<p>ಕೊಲ್ಹಾರ: ತಾಲ್ಲೂಕಿನ ಕೂಡಗಿ ಎನ್ಟಿಪಿಸಿಯಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಗ್ರಾಮಾಭಿವೃದ್ಧಿ ಸಲಹಾ ಸಮಿತಿ (ವಿ.ಡಿ.ಎ.ಸಿ) ಸಭೆಯಲ್ಲಿ ತಮ್ಮ ನೋವು, ಸಂಕಷ್ಟಗಳನ್ನು ತೋಡಿಕೊಳ್ಳಲು ಬಂದಿದ್ದ ಬಾಧಿತ ಗ್ರಾಮದ ಸಂತ್ರಸ್ತರು ಹಾಗೂ ರೈತರಿಗೆ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಳ್ಳಲು ಅವಕಾಶ ನೀಡದೇಇರುವುದು ಆಕ್ರೋಶಕ್ಕೆ ಕಾರಣವಾಯಿತು.</p>.<p>ಸಂತ್ರಸ್ತರ ಧ್ವನಿ ಹತ್ತಿಕ್ಕುವ ಕುತಂತ್ರವನ್ನು ಅಧಿಕಾರಿಗಳು ನಡೆಸಿದ್ದಾರೆ ಎಂದು ರೈತರು ಆರೋಪಿಸಿದರು.</p>.<p>‘ಬಾಧಿತ ಗ್ರಾಮಗಳಿಗೆ ಉಚಿತ ವಿದ್ಯುತ್, ಸಂತ್ರಸ್ತರ ಮಕ್ಕಳಿಗೆ ಉದ್ಯೋಗಾವಕಾಶ ಸೇರಿದಂತೆ ಹಲವು ಭರವಸೆಗಳು ಇನ್ನೂ ಸಾಕಾರಗೊಂಡಿಲ್ಲ. ಮಸೂತಿ ಭಾಗದಲ್ಲಿ ಸ್ಥಾಪಿಸಿರುವ ಬೂದಿ ಸಂಗ್ರಹಿಸುವ ಕೆರೆಗಳಿಂದ ಈ ಭಾಗದ 200-300 ಎಕರೆ ಫಲವತ್ತಾದ ಕೃಷಿ ಭೂಮಿ ಸವುಳ, ಜವುಳ ಸಮಸ್ಯೆಯಿಂದ ಹಾಳಾಗಿವೆ. ಈ ಜಮೀನುಗಳ ರೈತರಿಗೆ ಶಾಶ್ವತ ಪರಿಹಾರ ಕಲ್ಪಿಸಬೇಕು’ ಎಂದು ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>