‘ಕೃಷಿ ಕ್ಷೇತ್ರದಲ್ಲಿ ಒಳ್ಳೆಯ ಹೆಸರು ಮಾಡಿರುವ ಸಿದ್ದಪ್ಪ ಅವರು ಮಗಳ ಮದುವೆ ಆಮಂತ್ರಣದೊಂದಿಗೆ ಹಣ್ಣಿನ ಸಸಿಗಳನ್ನು ನೀಡುತ್ತಿರುವುದು ಮಾದರಿ ಕಾರ್ಯ. ಈ ಹಿಂದೆ ಅವರ ತೋಟಕ್ಕೆ ಭೇಟಿ ನೀಡಿದ್ದೆ. ಬಾಲಗೊಂಡ ಅವರಂತೆ ಎಲ್ಲರೂ ತಮ್ಮ ಪ್ರತಿಯೊಂದು ಸಭೆ, ಸಮಾರಂಭಗಳಲ್ಲಿ ಸಸಿಗಳನ್ನು ವಿತರಿಸುವ ಕೆಲಸ ಮಾಡಿದರೆ ಪ್ರತಿಯೊಬ್ಬರಲ್ಲಿ ಪರಿಸರ ಜಾಗೃತಿ ಮೂಡುತ್ತದೆ’ ಎನ್ನುತ್ತಾರೆ ಮಾಜಿ ಜಲಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್.