<p>ವಿಜಯಪುರ: ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪ ಯೋಜನೆಯ ಅನುದಾನವನ್ನು ಲ್ಯಾಪ್ಸ್ ಆಗದಂತೆ ಸಮರ್ಪಕ ಬಳಕೆಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚನೆ ನೀಡಿದರು.</p>.<p>ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ 2024-25ನೇ ಸಾಲಿನ ವಿಶೇಷ ಘಟಕ ಯೋಜನೆಯ ಹಾಗೂ ಗಿರಿಜನ ಉಪ ಯೋಜನೆಯ ಕೇಂದ್ರ, ರಾಜ್ಯ ಹಾಗೂ ಜಿಲ್ಲಾ ವಲಯ ಯೋಜನೆ ಕಾರ್ಯಕ್ರಮಗಳ ಇಲಾಖಾವಾರು ಆಗಸ್ಟ್-2024 ರ ಅಂತ್ಯದವರೆಗೆ ಸಾಧಿಸಿದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.</p>.<p>ಸದ್ಯ ವಿವಿಧ ಇಲಾಖೆಗಳಿಗೆ ಬಿಡುಗಡೆಯಾದ ಅನುದಾನ ಸಮರ್ಪಕವಾಗಿ ಬಳಸಿಕೊಂಡು ಕಾಮಗಾರಿಗಳನ್ನು ತ್ವರಿತವಾಗಿ ಮುಗಿಸುವಂತೆ ಸೂಚಿಸಿ, ಇನ್ನುಳಿದ ಬಾಕಿ ಕಾಮಗಾರಿಗಳನ್ನು ತ್ವರಿತ ಗತಿಯಲ್ಲಿ ಪೂರ್ಣಗೊಳಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದರು.</p>.<p>ನಂತರ ನಡೆದ ಮ್ಯಾನುವಲ್ ಸ್ಕಾೃವೆಂಜರ್ ನಿಯೋಜನೆ ನಿಷೇಧ ಮತ್ತು ಪುನರ್ವಸತಿ ಅಧಿನಿಯಮ-2013 ಸಭೆಯಲ್ಲಿ ಜಿಲ್ಲಾಧಿಕಾರಿ ಮಾತನಾಡಿ, ಜಿಲ್ಲೆಯ ಎಲ್ಲ ಪೌರ ಕಾರ್ಮಿಕರಿಗೆ ವಸತಿ, ಆರೋಗ್ಯ ಹಾಗೂ ಸುರಕ್ಷಾ ಕವಚಗಳನ್ನು ಒದಗಿಸಲು ಸೂಕ್ತ ಕ್ರಮ ವಹಿಸಬೇಕು ಎಂದು ಹೇಳಿದರು.</p>.<p>ಹೊರಗುತ್ತಿಗೆ ಆಧಾರದಲ್ಲಿರುವ ಪೌರ ಕಾರ್ಮಿಕರಿಗೆ ಸಮರ್ಪಕವಾಗಿ ಇಪಿಎಫ್, ಇಎಸ್ಐ ಕಟಾವು ಕುರಿತು ನಿಯತಮಿತವಾಗಿ ಪರಿಶೀಲಿಸಿ ಪ್ರತಿ ಮೂರು ತಿಂಗಳಿಗೊಮ್ಮೆ ಪೌರ ಕಾರ್ಮಿಕರ ಆರೋಗ್ಯ ತಪಾಸಣೆಯನ್ನು ತಜ್ಞ ವೈದ್ಯರಿಂದ ನಡೆಸಬೇಕು ಎಂದು ಸೂಚಿಸಿದರು.</p>.<p>ಜಿಲ್ಲೆಯ ಪೌರ ಕಾರ್ಮಿಕರು, ಅಂಗನವಾಡಿ ಕಾರ್ಯಕರ್ತೆಯರು, ಸ್ವಸಹಾಯ ಸಂಘದ ಸದಸ್ಯರು, ಮುಖ್ಯ ಅಡುಗೆದಾರರು, ಅಡುಗೆ ಸಹಾಯಕರು, ವಾರ್ಡನ್ಗಳು ಸೇರಿದಂತೆ ಹೊರಗುತ್ತಿಗೆ ಆಧಾರದಡಿ ಕಾರ್ಯನಿರ್ವಹಿಸುತ್ತಿರುವವರಿಗೆ ಆರೋಗ್ಯ ವಿಮೆ ಯೋಜನೆ ಸೌಲಭ್ಯ ಒದಗಿಸಿಕೊಡುವಂತೆ ಅಧಿಕಾರಿಗಳಿಗೆ ತಿಳಿಸಿದರು.</p>.<p>ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ನಿಂಗಪ್ಪ ಗೋಠೆ, ಮುಖ್ಯ ಲೆಕ್ಕಾಧಿಕಾರಿ ರಾಮಣ್ಣ ಅಥಣಿ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಪುಂಡಲಿಕ ಮಾನವರ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬದ್ರುದ್ದೀನ ಸೌದಾಗರ, ಪುರಸಭೆಯ ಮುಖ್ಯಾಧಿಕಾರಿಗಳು, ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ವಿಜಯಪುರ: ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪ ಯೋಜನೆಯ ಅನುದಾನವನ್ನು ಲ್ಯಾಪ್ಸ್ ಆಗದಂತೆ ಸಮರ್ಪಕ ಬಳಕೆಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚನೆ ನೀಡಿದರು.</p>.<p>ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ 2024-25ನೇ ಸಾಲಿನ ವಿಶೇಷ ಘಟಕ ಯೋಜನೆಯ ಹಾಗೂ ಗಿರಿಜನ ಉಪ ಯೋಜನೆಯ ಕೇಂದ್ರ, ರಾಜ್ಯ ಹಾಗೂ ಜಿಲ್ಲಾ ವಲಯ ಯೋಜನೆ ಕಾರ್ಯಕ್ರಮಗಳ ಇಲಾಖಾವಾರು ಆಗಸ್ಟ್-2024 ರ ಅಂತ್ಯದವರೆಗೆ ಸಾಧಿಸಿದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.</p>.<p>ಸದ್ಯ ವಿವಿಧ ಇಲಾಖೆಗಳಿಗೆ ಬಿಡುಗಡೆಯಾದ ಅನುದಾನ ಸಮರ್ಪಕವಾಗಿ ಬಳಸಿಕೊಂಡು ಕಾಮಗಾರಿಗಳನ್ನು ತ್ವರಿತವಾಗಿ ಮುಗಿಸುವಂತೆ ಸೂಚಿಸಿ, ಇನ್ನುಳಿದ ಬಾಕಿ ಕಾಮಗಾರಿಗಳನ್ನು ತ್ವರಿತ ಗತಿಯಲ್ಲಿ ಪೂರ್ಣಗೊಳಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದರು.</p>.<p>ನಂತರ ನಡೆದ ಮ್ಯಾನುವಲ್ ಸ್ಕಾೃವೆಂಜರ್ ನಿಯೋಜನೆ ನಿಷೇಧ ಮತ್ತು ಪುನರ್ವಸತಿ ಅಧಿನಿಯಮ-2013 ಸಭೆಯಲ್ಲಿ ಜಿಲ್ಲಾಧಿಕಾರಿ ಮಾತನಾಡಿ, ಜಿಲ್ಲೆಯ ಎಲ್ಲ ಪೌರ ಕಾರ್ಮಿಕರಿಗೆ ವಸತಿ, ಆರೋಗ್ಯ ಹಾಗೂ ಸುರಕ್ಷಾ ಕವಚಗಳನ್ನು ಒದಗಿಸಲು ಸೂಕ್ತ ಕ್ರಮ ವಹಿಸಬೇಕು ಎಂದು ಹೇಳಿದರು.</p>.<p>ಹೊರಗುತ್ತಿಗೆ ಆಧಾರದಲ್ಲಿರುವ ಪೌರ ಕಾರ್ಮಿಕರಿಗೆ ಸಮರ್ಪಕವಾಗಿ ಇಪಿಎಫ್, ಇಎಸ್ಐ ಕಟಾವು ಕುರಿತು ನಿಯತಮಿತವಾಗಿ ಪರಿಶೀಲಿಸಿ ಪ್ರತಿ ಮೂರು ತಿಂಗಳಿಗೊಮ್ಮೆ ಪೌರ ಕಾರ್ಮಿಕರ ಆರೋಗ್ಯ ತಪಾಸಣೆಯನ್ನು ತಜ್ಞ ವೈದ್ಯರಿಂದ ನಡೆಸಬೇಕು ಎಂದು ಸೂಚಿಸಿದರು.</p>.<p>ಜಿಲ್ಲೆಯ ಪೌರ ಕಾರ್ಮಿಕರು, ಅಂಗನವಾಡಿ ಕಾರ್ಯಕರ್ತೆಯರು, ಸ್ವಸಹಾಯ ಸಂಘದ ಸದಸ್ಯರು, ಮುಖ್ಯ ಅಡುಗೆದಾರರು, ಅಡುಗೆ ಸಹಾಯಕರು, ವಾರ್ಡನ್ಗಳು ಸೇರಿದಂತೆ ಹೊರಗುತ್ತಿಗೆ ಆಧಾರದಡಿ ಕಾರ್ಯನಿರ್ವಹಿಸುತ್ತಿರುವವರಿಗೆ ಆರೋಗ್ಯ ವಿಮೆ ಯೋಜನೆ ಸೌಲಭ್ಯ ಒದಗಿಸಿಕೊಡುವಂತೆ ಅಧಿಕಾರಿಗಳಿಗೆ ತಿಳಿಸಿದರು.</p>.<p>ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ನಿಂಗಪ್ಪ ಗೋಠೆ, ಮುಖ್ಯ ಲೆಕ್ಕಾಧಿಕಾರಿ ರಾಮಣ್ಣ ಅಥಣಿ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಪುಂಡಲಿಕ ಮಾನವರ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬದ್ರುದ್ದೀನ ಸೌದಾಗರ, ಪುರಸಭೆಯ ಮುಖ್ಯಾಧಿಕಾರಿಗಳು, ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>