<p><strong>ವಿಜಯಪುರ: </strong>ಖಾಸಗಿ ಆಸ್ಪತ್ರೆಯಲ್ಲಿ ಸಂಭವಿಸುವ ಎಲ್ಲ ಬಗೆಯ ಸಾವುಗಳ ಕುರಿತು ಅದೇ ದಿನವೇ ಜಿಲ್ಲಾಡಳಿತಕ್ಕೆ ವರದಿ ನೀಡಬೇಕು ಎಂದು ಜಿಲ್ಲಾಧಿಕಾರಿ ಪಿ.ಸುನೀಲ್ಕುಮಾರ್ ಸೂಚಿಸಿದರು.</p>.<p>ನಗರದ ನೇಮಗೌಡ ಆಸ್ಪತ್ರೆಗೆ ಮಂಗಳವಾರವಿಶೇಷ ತಜ್ಞರ ಸಮಿತಿಯೊಂದಿಗೆ ಭೇಟಿ ನೀಡಿ ಡೆತ್ ಆಡಿಟ್ ಕುರಿತು ಪರಿಶೀಲನಾ ಸಭೆ ನಡೆಸಿದ ಅವರು, ಆಸ್ಪತ್ರೆಗೆ ದಾಖಲಾದ ತೀವ್ರತರನಾದ ರೋಗ ಲಕ್ಷಣಗಳನ್ನು ಹೊಂದಿರುವ ರೋಗಿಗಳಿಗೆ ತಕ್ಷಣ ಚಿಕಿತ್ಸೆಯನ್ನು ಪ್ರಾರಂಭಿಸಿ, ಸಾವಿನ ಪ್ರಮಾಣವನ್ನು ಕಡಿಮೆ ಮಾಡಲು ತಿಳಿಸಿದರು.</p>.<p>ಆಕ್ಸಿಜನ್ ದಾಸ್ತಾನನ್ನು ಸಾಕಷ್ಟು ಪ್ರಮಾಣದಲ್ಲಿ ಸಂಗ್ರಹಿಸಿ ಇಟ್ಟುಕೊಳ್ಳಬೇಕು. ಆಕ್ಸಿಜನ್ ಕೊರತೆಯಿಂದಾಗಿ ಯಾವುದೇ ರೋಗಿಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಹಾಗೂ ಜಿಲ್ಲಾಡಳಿತದೊಂದಿಗೆ ಆಕ್ಸಿಜನ್ ಏಜೆನ್ಸಿಗಳ ಜೊತೆಗೆ ನಿರಂತರವಾಗಿ ಸಂಪರ್ಕದಲ್ಲಿರುವಂತೆ ಸೂಚಿಸಿದರು.</p>.<p>ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಮಹೇಂದ್ರ ಕಾಪಸೆ, ಜಿಲ್ಲೆಯಲ್ಲಿ ಇದುವರೆಗೆ 36 ಕಪ್ಪು ಶಿಲೀಂಧ್ರ ಪ್ರಕರಣಗಳು ಕಂಡುಬಂದಿವೆ ಎಂದು ತಿಳಿಸಿದರು.</p>.<p>ರೋಗನಿರೋಧಕ ಶಕ್ತಿ ಕಡಿಮೆಯಾದ ವ್ಯಕ್ತಿಗಳಿಗೆ ಕಪ್ಪು ಶಿಲೀಂಧ್ರ ರೋಗವು ಕಂಡುಬರುತ್ತಿದೆ. ಕಪ್ಪು ಶಿಲೀಂಧ್ರ ಪೀಡಿತರು ಬಿ.ಎಲ್. ಡಿ.ಇ ವೈದ್ಯಕೀಯ ಮಹಾ ವಿದ್ಯಾಲಯದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಸ್ಪತ್ರೆಯಲ್ಲಿ ಪ್ರತ್ಯೇಕ ವಾರ್ಡ್ಗಳನ್ನು ಮೀಸಲಿರಿಸಲು ಸೂಚಿಸಲಾಗಿದೆ ಎಂದು ತಿಳಿಸಿದರು.</p>.<p>ಜಿಲ್ಲಾ ಆಸ್ಪತ್ರೆ ಮತ್ತು ಖಾಸಗಿ ಆಸ್ಪತ್ರೆಯಲ್ಲಿ ರೆಮ್ ಡಿಸಿವಿರ್ ಇಂಜೆಕ್ಷನ್ ಕೊರತೆಯಾಗದಂತೆ ಎಚ್ಚರ ವಹಿಸಿ ಎಂದು ಜಿಲ್ಲಾಧಿಕಾರಿ ಸೂಚಿಸಿದರು.</p>.<p>ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ಶರಣಪ್ಪ ಕಟ್ಟಿ, ಡಾ.ಸಂತೋಷ್ ನೇಮಗೌಡ, ಡಾ. ರಾಜೇಂದ್ರಕುಮಾರ್, ಡಾ. ಎಸ್.ಎಲ್. ಲಕ್ಕಣ್ಣವರ, ಡಾ.ಸಂತೋಷ ನಂದಿ, ಪೀಟರ್ ಅಲೆಗ್ಸಾಂಡರ್ ಸಭೆಯಲ್ಲಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ: </strong>ಖಾಸಗಿ ಆಸ್ಪತ್ರೆಯಲ್ಲಿ ಸಂಭವಿಸುವ ಎಲ್ಲ ಬಗೆಯ ಸಾವುಗಳ ಕುರಿತು ಅದೇ ದಿನವೇ ಜಿಲ್ಲಾಡಳಿತಕ್ಕೆ ವರದಿ ನೀಡಬೇಕು ಎಂದು ಜಿಲ್ಲಾಧಿಕಾರಿ ಪಿ.ಸುನೀಲ್ಕುಮಾರ್ ಸೂಚಿಸಿದರು.</p>.<p>ನಗರದ ನೇಮಗೌಡ ಆಸ್ಪತ್ರೆಗೆ ಮಂಗಳವಾರವಿಶೇಷ ತಜ್ಞರ ಸಮಿತಿಯೊಂದಿಗೆ ಭೇಟಿ ನೀಡಿ ಡೆತ್ ಆಡಿಟ್ ಕುರಿತು ಪರಿಶೀಲನಾ ಸಭೆ ನಡೆಸಿದ ಅವರು, ಆಸ್ಪತ್ರೆಗೆ ದಾಖಲಾದ ತೀವ್ರತರನಾದ ರೋಗ ಲಕ್ಷಣಗಳನ್ನು ಹೊಂದಿರುವ ರೋಗಿಗಳಿಗೆ ತಕ್ಷಣ ಚಿಕಿತ್ಸೆಯನ್ನು ಪ್ರಾರಂಭಿಸಿ, ಸಾವಿನ ಪ್ರಮಾಣವನ್ನು ಕಡಿಮೆ ಮಾಡಲು ತಿಳಿಸಿದರು.</p>.<p>ಆಕ್ಸಿಜನ್ ದಾಸ್ತಾನನ್ನು ಸಾಕಷ್ಟು ಪ್ರಮಾಣದಲ್ಲಿ ಸಂಗ್ರಹಿಸಿ ಇಟ್ಟುಕೊಳ್ಳಬೇಕು. ಆಕ್ಸಿಜನ್ ಕೊರತೆಯಿಂದಾಗಿ ಯಾವುದೇ ರೋಗಿಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಹಾಗೂ ಜಿಲ್ಲಾಡಳಿತದೊಂದಿಗೆ ಆಕ್ಸಿಜನ್ ಏಜೆನ್ಸಿಗಳ ಜೊತೆಗೆ ನಿರಂತರವಾಗಿ ಸಂಪರ್ಕದಲ್ಲಿರುವಂತೆ ಸೂಚಿಸಿದರು.</p>.<p>ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಮಹೇಂದ್ರ ಕಾಪಸೆ, ಜಿಲ್ಲೆಯಲ್ಲಿ ಇದುವರೆಗೆ 36 ಕಪ್ಪು ಶಿಲೀಂಧ್ರ ಪ್ರಕರಣಗಳು ಕಂಡುಬಂದಿವೆ ಎಂದು ತಿಳಿಸಿದರು.</p>.<p>ರೋಗನಿರೋಧಕ ಶಕ್ತಿ ಕಡಿಮೆಯಾದ ವ್ಯಕ್ತಿಗಳಿಗೆ ಕಪ್ಪು ಶಿಲೀಂಧ್ರ ರೋಗವು ಕಂಡುಬರುತ್ತಿದೆ. ಕಪ್ಪು ಶಿಲೀಂಧ್ರ ಪೀಡಿತರು ಬಿ.ಎಲ್. ಡಿ.ಇ ವೈದ್ಯಕೀಯ ಮಹಾ ವಿದ್ಯಾಲಯದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಸ್ಪತ್ರೆಯಲ್ಲಿ ಪ್ರತ್ಯೇಕ ವಾರ್ಡ್ಗಳನ್ನು ಮೀಸಲಿರಿಸಲು ಸೂಚಿಸಲಾಗಿದೆ ಎಂದು ತಿಳಿಸಿದರು.</p>.<p>ಜಿಲ್ಲಾ ಆಸ್ಪತ್ರೆ ಮತ್ತು ಖಾಸಗಿ ಆಸ್ಪತ್ರೆಯಲ್ಲಿ ರೆಮ್ ಡಿಸಿವಿರ್ ಇಂಜೆಕ್ಷನ್ ಕೊರತೆಯಾಗದಂತೆ ಎಚ್ಚರ ವಹಿಸಿ ಎಂದು ಜಿಲ್ಲಾಧಿಕಾರಿ ಸೂಚಿಸಿದರು.</p>.<p>ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ಶರಣಪ್ಪ ಕಟ್ಟಿ, ಡಾ.ಸಂತೋಷ್ ನೇಮಗೌಡ, ಡಾ. ರಾಜೇಂದ್ರಕುಮಾರ್, ಡಾ. ಎಸ್.ಎಲ್. ಲಕ್ಕಣ್ಣವರ, ಡಾ.ಸಂತೋಷ ನಂದಿ, ಪೀಟರ್ ಅಲೆಗ್ಸಾಂಡರ್ ಸಭೆಯಲ್ಲಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>