‘ರಸ್ತೆ ಅತಿಕ್ರಮಣದಲ್ಲಿ ಅಂಗಡಿ ಕಳೆದುಕೊಂಡಿರುವರಿಗೆ ಹಾಗೂ ಉಳಿದವರಿಗೆ ಹಂಚಿಕೆ ಮಾಡುವ ವಿಷಯ ಬರೆಯಲಾಗಿದೆ. ಈ ಮಳಿಗೆಗಳನ್ನು ಉಳಿದ ಸಮುದಾಯಗಳಿಗೆ ಹಂಚಿಕೆ ಮಾಡಲು ಬರುವುದೇ ಇಲ್ಲ. 2020–21ನೇ ಸಾಲಿನಲ್ಲಿ ಲೋಕೋಪಯೋಗಿ ಇಲಾಖೆಯ ಎಸ್.ಇ.ಪಿ, ಟಿ.ಎಸ್.ಪಿ ಅಡಿಯಲ್ಲಿ ₹ 3.56 ಕೋಟಿ ವೆಚ್ಚದಲ್ಲಿ ಈ ಮಳಿಗೆ ನಿರ್ಮಿಸಿ 2022 ರಲ್ಲಿ ಕಾಮಗಾರಿ ಪೂರ್ಣಗೊಳಿಸಿ, ಮಹಾನಗರ ಪಾಲಿಕೆಗೆ ಹಸ್ತಾಂತರಿಸಿದೆ. ಹೀಗಿರುವಾಗ ಎಸ್.ಸಿ. ಸಮುದಾಯಕ್ಕೆ ಉಪ ಜೀವನ ಹಾಗೂ ಸ್ವ ಉದ್ಯೋಗಕ್ಕೆ ಅನುಕೂಲವಾಗಲು ಈ ಮಳಿಗೆ ಹಂಚಿಕೆಯಾಗಬೇಕು. ಆದರೆ ಈ ವಿಷಯವಾಗಿ ಮಹಾನಗರಪಾಲಿಕೆ ಬೇರೆ ನಿಲುವು ತಾಳಿ ಸಾಮಾನ್ಯ ಸಭೆಯ ಅಜೆಂಡಾದಲ್ಲಿ ಈ ವಿಷಯವನ್ನೇ ಉಲ್ಲೇಖಿಸಿಲ್ಲ’ ಎಂದು ಅವರು ಹೇಳಿದ್ದಾರೆ.