ಬುಧವಾರ, 1 ಅಕ್ಟೋಬರ್ 2025
×
ADVERTISEMENT
ADVERTISEMENT

ವಿಜಯಪುರ: ಸರ್ಕಾರಿ ಹುದ್ದೆ ಭರ್ತಿಗೆ ಯುವಕರ ಆಗ್ರಹ

Published : 1 ಅಕ್ಟೋಬರ್ 2025, 7:41 IST
Last Updated : 1 ಅಕ್ಟೋಬರ್ 2025, 7:41 IST
ಫಾಲೋ ಮಾಡಿ
Comments
ರಾಜ್ಯದ ಎಲ್ಲಾ ಇಲಾಖೆಗಳಲ್ಲಿ ಖಾಲಿ ಇರುವ ಸರ್ಕಾರಿ ಹುದ್ದೆಗಳಿಗೆ ಒಂದು ವಾರದಲ್ಲಿ ನೋಟಿಫಿಕೇಶನ್ ಮಾಡಬೇಕು   
ಶ್ರೀನಾಥ ಪೂಜಾರಿಅಧ್ಯಕ್ಷ ಡಿವಿಪಿ ರಾಜ್ಯ ಘಟಕ
‘ಆಕಾಂಕ್ಷಿಗಳಿಗೆ ಸರ್ಕಾರದಿಂದ ಅನ್ಯಾಯ’
ದಲಿತ ವಿದ್ಯಾರ್ಥಿ ಪರಿಷತ್ ಸುಮಾರು ನಿರುದ್ಯೋಗಿ ಯುವಕರ ಪರವಾಗಿ ಎರಡು ವರ್ಷದಿಂದ ಹೋರಾಟ ಮಾಡುತ್ತಾ ಬಂದಿದೆ. ಆದರೆ ನಮ್ಮನ್ನಾಳುವ ಸರ್ಕಾರಗಳು ನಮ್ಮ ಕಷ್ಟಗಳನ್ನ ಅರ್ಥಮಾಡಿಕೊಳ್ಳದೆ ಇವತ್ತು ಬೀದಿಯಲ್ಲಿ ನಿಲ್ಲಿಸುವ ರೀತಿಯಲ್ಲಿ ನಮ್ಮನ್ನ ನೋಡಿಕೊಳ್ಳುತ್ತಿದ್ದಾರೆ ಇದರಿಂದ ಸರ್ಕಾರಕ್ಕೆ ನಾಚಿಕೆಯಾಗಬೇಕು ಎಂದು ಡಿವಿಪಿ ಜಿಲ್ಲಾ ಸಂಚಾಲಕ ಅಕ್ಷಯ ಕುಮಾರ ಅಜಮನಿ ಹೇಳಿದರು. ವಿದ್ಯಾರ್ಥಿ ಯುವ ಜನರು ತಮ್ಮ ಊರನ್ನು ಬಿಟ್ಟು ಸಂಬಂಧಿಕರನ್ನು ಬಿಟ್ಟು ತಂದೆ-ತಾಯಿ ಎಲ್ಲರನ್ನೂ ಬಿಟ್ಟು ನಗರಗಳಿಗೆ ಬಂದು ನಾನೇನಾದರೂ ಒಂದು ಸರ್ಕಾರಿ ಹುದ್ದೆಗಳನ್ನು ಪಡೆದು ಸಾಧನೆ ಮಾಡಬೇಕೆನ್ನುವ ಹಂಬಲದಲ್ಲಿರುವ ಉದ್ಯೋಗ ಆಕಾಂಕ್ಷಿಗಳಿಗೆ ಈಗಿನ ಸರ್ಕಾರಗಳು ಉದ್ಯೋಗ ನೀಡದೆ ಸತಾಯಿಸುತ್ತಿರುವುದು ಮತ್ತು ಅವರ ಜೀವನವನ್ನು ನಾಶ ಮಾಡುತ್ತಿರುವುದು ಖಂಡನೀಯ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT