‘ಆಕಾಂಕ್ಷಿಗಳಿಗೆ ಸರ್ಕಾರದಿಂದ ಅನ್ಯಾಯ’
ದಲಿತ ವಿದ್ಯಾರ್ಥಿ ಪರಿಷತ್ ಸುಮಾರು ನಿರುದ್ಯೋಗಿ ಯುವಕರ ಪರವಾಗಿ ಎರಡು ವರ್ಷದಿಂದ ಹೋರಾಟ ಮಾಡುತ್ತಾ ಬಂದಿದೆ. ಆದರೆ ನಮ್ಮನ್ನಾಳುವ ಸರ್ಕಾರಗಳು ನಮ್ಮ ಕಷ್ಟಗಳನ್ನ ಅರ್ಥಮಾಡಿಕೊಳ್ಳದೆ ಇವತ್ತು ಬೀದಿಯಲ್ಲಿ ನಿಲ್ಲಿಸುವ ರೀತಿಯಲ್ಲಿ ನಮ್ಮನ್ನ ನೋಡಿಕೊಳ್ಳುತ್ತಿದ್ದಾರೆ ಇದರಿಂದ ಸರ್ಕಾರಕ್ಕೆ ನಾಚಿಕೆಯಾಗಬೇಕು ಎಂದು ಡಿವಿಪಿ ಜಿಲ್ಲಾ ಸಂಚಾಲಕ ಅಕ್ಷಯ ಕುಮಾರ ಅಜಮನಿ ಹೇಳಿದರು. ವಿದ್ಯಾರ್ಥಿ ಯುವ ಜನರು ತಮ್ಮ ಊರನ್ನು ಬಿಟ್ಟು ಸಂಬಂಧಿಕರನ್ನು ಬಿಟ್ಟು ತಂದೆ-ತಾಯಿ ಎಲ್ಲರನ್ನೂ ಬಿಟ್ಟು ನಗರಗಳಿಗೆ ಬಂದು ನಾನೇನಾದರೂ ಒಂದು ಸರ್ಕಾರಿ ಹುದ್ದೆಗಳನ್ನು ಪಡೆದು ಸಾಧನೆ ಮಾಡಬೇಕೆನ್ನುವ ಹಂಬಲದಲ್ಲಿರುವ ಉದ್ಯೋಗ ಆಕಾಂಕ್ಷಿಗಳಿಗೆ ಈಗಿನ ಸರ್ಕಾರಗಳು ಉದ್ಯೋಗ ನೀಡದೆ ಸತಾಯಿಸುತ್ತಿರುವುದು ಮತ್ತು ಅವರ ಜೀವನವನ್ನು ನಾಶ ಮಾಡುತ್ತಿರುವುದು ಖಂಡನೀಯ ಎಂದರು.