<p><strong>ವಿಜಯಪುರ</strong>: ವೇತನ ಹೆಚ್ಚಳ, ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆ ಆಗ್ರಹಿಸಿ ಸಾರಿಗೆ ನೌಕರರು ವಿಜಯಪುರ ಜಿಲ್ಲಾ ವಿಭಾಗೀಯ ನಿಯಂತ್ರಣಾಧಿಕಾರಿಗಳ ಕಚೇರಿ ಎದುರು ಮಂಗಳವಾರ ಧರಣಿ ನಡೆಸಿದರು.</p>.<p>ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿಯಿಂದ ವಿವಿಧ ಬೇಡಿಕೆಗಳ ಮನವಿಯನ್ನು ಜಿಲ್ಲಾ ವಿಭಾಗೀಯ ನಿಯಂತ್ರಣಾಧಿಕಾರಿಗೆ ಸಲ್ಲಿಸಿದರು.</p>.<p>ಸಾರಿಗೆ ನಿಗಮಗಳ ಆಡಳಿತ ಮಂಡಳಿ ಹಾಗೂ ಸಾರಿಗೆ ಇಲಾಖೆ ಸಾರಿಗೆ ನೌಕರರ ಬೇಡಿಕೆಗಳನ್ನು ಈಡೇರಿಸಲು ಪ್ರಮಾಣಿಕ ಪ್ರಯತ್ನ ಮಾಡುತ್ತಿಲ್ಲ ಎಂದು ಆರೋಪಿಸಿದರು.</p>.<p>ಮೂಲ ವೇತನಕ್ಕೆ ವಿ.ಡಿ.ಎ ವಿಲೀನಗೊಳಿಸಿ, ಪರಿಷ್ಕೃತ ಮೂಲ ವೇತನದ ಶೇ 25 ರಷ್ಟನ್ನು ಹೆಚ್ಚಳ ಮಾಡಿ, ವೇತನ ಶ್ರೇಣಿಯನ್ನು ಸಿದ್ಧಪಡಿಸಬೇಕು ಎಂದು ಒತ್ತಾಯಿಸಿದರು.</p>.<p>ಮುಷ್ಕರ ಸಂದರ್ಭದಲ್ಲಿ ಸೇವೆಯಿಂದ ವಜಾಗೊಂಡ ನೌಕರರನ್ನು ಯಾವುದೇ ಷರತ್ತಿಲ್ಲದೇ ಮರುನೇಮಕ ಮಾಡಬೇಕು ಎಂದು ಒತ್ತಾಯಿಸಿದರು.</p>.<p>ಮುಷ್ಕರದ ಸಂದರ್ಭದಲ್ಲಿ ವರ್ಗಾವಣೆ ಶಿಕ್ಷೆಗೆ ಒಳಗಾದ ಸಿಬ್ಬಂದಿ, ನೌಕರರನ್ನು ಮಾತೃ ಅಥವಾ ಮೂಲ ಘಟಕಕ್ಕೆ ವರ್ಗಾವಣೆ ಮಾಡಬೇಕು, ಹೆಚ್ಚುವರಿ ಕೆಲಸದ ಅವಧಿಗೆ ಓವರ್ ಟೈಮ್ ಭತ್ಯೆ ನೀಡಬೇಕು ಎಂದು ಆಗ್ರಹಿಸಿದರು.</p>.<p>ಆಡಳಿತ ವರ್ಗ ಏಕಪಕ್ಷೀಯ ನಿರ್ಧಾರಗಳ ಮೂಲಕ ಕಾರ್ಮಿಕರ ಸೇವಾ ಪರಿಸ್ಥಿತಿಗಳ ಬದಲಾವಣೆಯನ್ನು ಜಾರಿಗೊಳಿಸುವುದನ್ನು ನಿಲ್ಲಿಸಬೇಕು, ಯಾವುದೇ ಸೇವಾ ಪರಿಸ್ಥಿತಿಗಳ ಬದಲಾವಣೆಯನ್ನು ಕಾರ್ಮಿಕ ಸಂಘನೆಟಗಳ ಜೊತೆ ಚರ್ಚಿಸಿ, ಉಭಯ ಪಕ್ಷಗಳಿಗೂ ಸಮ್ಮತವಾದ ಅಂಶಗಳನ್ನು ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.</p>.<p>ಎಲ್ಲ ಸಾರಿಗೆ ನೌಕರರಿಗೂ ಪಾಳಿ ವ್ಯವಸ್ಥೆ ಜಾರಿ ಮಾಡಬೇಕು ಹಾಗೂ ರಿಯಾಯಿತಿ ದರದಲ್ಲಿ ಕ್ಯಾಂಟಿನ್ ಸೌಲಭ್ಯ ನೀಡಬೇಕು. ಮಹಿಳಾ ನೌಕರರಿಗೆ ಘಟಕ, ಬಸ್ ನಿಲ್ದಾಣಗಳಲ್ಲಿ, ಟರ್ಮಿನಲ್ಗಳಲ್ಲಿ ವಿಶ್ರಾಂತಿ ಕೊಠಡಿ, ಶೌಚಾಲಯ ವ್ಯವಸ್ಥೆ, ಕುಡಿಯುವ ನೀರು, ಶಿಶುಪಾಲನಾ ಕೇಂದ್ರ ವ್ಯವಸ್ಥೆ ಮಾಡಿಕೊಡಬೇಕು ಎಂದರು.</p>.<p>ಮಹಿಳಾ ನೌಕರರಿಗೆ ಅವರ ಆಯ್ಕೆಯ ಪ್ರಕಾರ ಗುಣಮಟ್ಟದ ಸೀರೆ ಅಥವಾ ಡ್ರೆಸ್ ಮೆಟರಿಯಲ್ ಕೊಡಬೇಕು, ಮಹಿಳಾ ನೌಕರರಿಗೆ ಯಾವುದೇ ಸಂದರ್ಭದಲ್ಲಿಯೂ 8 ಗಂಟೆಗಿಂತ ಅಧಿಕ ಅವಧಿಗೆ ಕರ್ತವ್ಯಕ್ಕೆ ನಿಯೋಜಿಸಬಾರದು ಎಂದು ಒತ್ತಾಯಿಸಿದರು. </p>.<p>ಭವಿಷ್ಯ ನಿಧಿ, ಪೆನ್ಷನ್ ಬದಲು ಸಂಸ್ಥೆಯೇ ತನ್ನ ಎಲ್ಲಾ ನಿವೃತ್ತ ನೌಕರರಿಗೂ ಸೂಕ್ತವಾದ ತುಟ್ಟಿ ಭತ್ಯೆ, ಎಲ್ಲ ಕಾರ್ಮಿಕರಿಗೂ ಗ್ರಾಚ್ಯುಟಿ ಪಾವತಿಸಬೇಕು ಎಂದು ಮನವಿ ಮಾಡಿದರು.</p>.<p>ರಾಜ್ಯ ಸರ್ಕಾರ ವಾಯವ್ಯ ಮತ್ತು ಕಲ್ಯಾಣ ಕರ್ನಾಟಕ ನಿಗಮಗಳಲ್ಲಿ ಖಾಸಗಿಯವರಿಗೆ ವಹಿಸಲು ಉದ್ದೇಶಿಸಿರುವ ಮಾರ್ಗಗಳನ್ನು ಸಾರಿಗೆ ನಿಗಮಗಳಿಗೆ ಉಳಿಸಬೇಕು ಎಂದು ಒತ್ತಾಯಿಸಿದರು.</p>.<p>ಕೆಎಸ್ಆರ್ಟಿಸಿ, ಬಿಎಂಟಿಸಿ, ವಾಯವ್ಯ ಹಾಗೂ ಕಲ್ಯಾಣ ಕರ್ನಾಟಕ ಸಾರಿಗೆ ಹೆಸರಿಲ್ಲಿ ಪ್ರತ್ಯೇಕವಾಗಿ ಸಿಬ್ಬಂದಿ ನೇಮಿಸುವುದನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದರು.</p>.<p>ನಾಲ್ಕೂ ಸಾರಿಗೆ ನಿಗಮಗಳಲ್ಲಿ ಖಾಲಿ ಇರುವ ಎಲ್ಲಾ ಹುದ್ದೆಗಳನ್ನೂ ಕೂಡಲೇ ಭರ್ತಿ ಮಾಡಬೇಕು ಎಂದರು.</p>.<p>ಯುನೈಟೆಡ್ ಇಂಡಿಯಾ ಇನ್ಶ್ಯೂರೆನ್ಸ್ ಕಂಪನಿಯ ವಿಮಾ ಮೊತ್ತವನ್ನು ನೌಕರರ ವೇತನದಿಂದ ಕಡಿತ ಮಾಡುವುದನ್ನು ನಿಲ್ಲಿಸಿ, ವಿಮಾ ಮೊತ್ತವನ್ನು ಸಂಸ್ಥೆ ಭರಿಸಬೇಕು ಹಾಗೂ ಈಗಾಗಲೇ ನೌಕರರ ವೇತನದಿಂದ ಕಡಿತ ಮಾಡಿರುವ ವಿಮಾ ಮೊತ್ತವನ್ನು ಆಯಾ ನೌಕರರಿಗೆ ಮರು ಪಾವತಿ ಮಾಡಬೇಕು ಎಂದು ಆಗ್ರಹಿಸಿದರು. </p>.<p class="Subhead">ಎಂದಿನಂತೆ ಬಸ್ ಸಂಚಾರ:</p>.<p>ಜಿಲ್ಲೆಯಲ್ಲಿ ಬಸ್ಗಳು ಎಂದಿನಂತೆ ಸಂಚರಿಸಿದವು. ನಗರದಿಂದ ಇತರೆಡೆಗೆ ತೆರಳುವ ಪ್ರಯಾಣಿಕರಿಗೆ ಯಾವುದೇ ಸಮಸ್ಯೆಯಾಗಿಲ್ಲ. ಚಾಲಕರು, ನಿರ್ವಾಹಕರು ಕರ್ತವ್ಯಕ್ಕೆ ಹಾಜರಾಗಿದ್ದರು. ಸಂಘಟನೆಗಳ ಮುಖಂಡರು, ಪದಾಧಿಕಾರಿಗಳು ಮಾತ್ರ ಧರಣಿಯಲ್ಲಿ ಭಾಗವಹಿಸಿದ್ದರು.</p>.<p>ಮುಖಂಡರಾದ ಎಂ.ಎಚ್.ಅಗರಖೇಡ, ಆರ್.ಎಂ.ಮಡ್ಡಿಮನಿ, ಅರುಣಕುಮಾರ ಎಂ.ಹಿರೇಮಠ, ಎಸ್.ಆರ್.ಚವ್ಹಾಣ, ಆರ್.ಲಿಂಗದಳ್ಳಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ</strong>: ವೇತನ ಹೆಚ್ಚಳ, ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆ ಆಗ್ರಹಿಸಿ ಸಾರಿಗೆ ನೌಕರರು ವಿಜಯಪುರ ಜಿಲ್ಲಾ ವಿಭಾಗೀಯ ನಿಯಂತ್ರಣಾಧಿಕಾರಿಗಳ ಕಚೇರಿ ಎದುರು ಮಂಗಳವಾರ ಧರಣಿ ನಡೆಸಿದರು.</p>.<p>ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿಯಿಂದ ವಿವಿಧ ಬೇಡಿಕೆಗಳ ಮನವಿಯನ್ನು ಜಿಲ್ಲಾ ವಿಭಾಗೀಯ ನಿಯಂತ್ರಣಾಧಿಕಾರಿಗೆ ಸಲ್ಲಿಸಿದರು.</p>.<p>ಸಾರಿಗೆ ನಿಗಮಗಳ ಆಡಳಿತ ಮಂಡಳಿ ಹಾಗೂ ಸಾರಿಗೆ ಇಲಾಖೆ ಸಾರಿಗೆ ನೌಕರರ ಬೇಡಿಕೆಗಳನ್ನು ಈಡೇರಿಸಲು ಪ್ರಮಾಣಿಕ ಪ್ರಯತ್ನ ಮಾಡುತ್ತಿಲ್ಲ ಎಂದು ಆರೋಪಿಸಿದರು.</p>.<p>ಮೂಲ ವೇತನಕ್ಕೆ ವಿ.ಡಿ.ಎ ವಿಲೀನಗೊಳಿಸಿ, ಪರಿಷ್ಕೃತ ಮೂಲ ವೇತನದ ಶೇ 25 ರಷ್ಟನ್ನು ಹೆಚ್ಚಳ ಮಾಡಿ, ವೇತನ ಶ್ರೇಣಿಯನ್ನು ಸಿದ್ಧಪಡಿಸಬೇಕು ಎಂದು ಒತ್ತಾಯಿಸಿದರು.</p>.<p>ಮುಷ್ಕರ ಸಂದರ್ಭದಲ್ಲಿ ಸೇವೆಯಿಂದ ವಜಾಗೊಂಡ ನೌಕರರನ್ನು ಯಾವುದೇ ಷರತ್ತಿಲ್ಲದೇ ಮರುನೇಮಕ ಮಾಡಬೇಕು ಎಂದು ಒತ್ತಾಯಿಸಿದರು.</p>.<p>ಮುಷ್ಕರದ ಸಂದರ್ಭದಲ್ಲಿ ವರ್ಗಾವಣೆ ಶಿಕ್ಷೆಗೆ ಒಳಗಾದ ಸಿಬ್ಬಂದಿ, ನೌಕರರನ್ನು ಮಾತೃ ಅಥವಾ ಮೂಲ ಘಟಕಕ್ಕೆ ವರ್ಗಾವಣೆ ಮಾಡಬೇಕು, ಹೆಚ್ಚುವರಿ ಕೆಲಸದ ಅವಧಿಗೆ ಓವರ್ ಟೈಮ್ ಭತ್ಯೆ ನೀಡಬೇಕು ಎಂದು ಆಗ್ರಹಿಸಿದರು.</p>.<p>ಆಡಳಿತ ವರ್ಗ ಏಕಪಕ್ಷೀಯ ನಿರ್ಧಾರಗಳ ಮೂಲಕ ಕಾರ್ಮಿಕರ ಸೇವಾ ಪರಿಸ್ಥಿತಿಗಳ ಬದಲಾವಣೆಯನ್ನು ಜಾರಿಗೊಳಿಸುವುದನ್ನು ನಿಲ್ಲಿಸಬೇಕು, ಯಾವುದೇ ಸೇವಾ ಪರಿಸ್ಥಿತಿಗಳ ಬದಲಾವಣೆಯನ್ನು ಕಾರ್ಮಿಕ ಸಂಘನೆಟಗಳ ಜೊತೆ ಚರ್ಚಿಸಿ, ಉಭಯ ಪಕ್ಷಗಳಿಗೂ ಸಮ್ಮತವಾದ ಅಂಶಗಳನ್ನು ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.</p>.<p>ಎಲ್ಲ ಸಾರಿಗೆ ನೌಕರರಿಗೂ ಪಾಳಿ ವ್ಯವಸ್ಥೆ ಜಾರಿ ಮಾಡಬೇಕು ಹಾಗೂ ರಿಯಾಯಿತಿ ದರದಲ್ಲಿ ಕ್ಯಾಂಟಿನ್ ಸೌಲಭ್ಯ ನೀಡಬೇಕು. ಮಹಿಳಾ ನೌಕರರಿಗೆ ಘಟಕ, ಬಸ್ ನಿಲ್ದಾಣಗಳಲ್ಲಿ, ಟರ್ಮಿನಲ್ಗಳಲ್ಲಿ ವಿಶ್ರಾಂತಿ ಕೊಠಡಿ, ಶೌಚಾಲಯ ವ್ಯವಸ್ಥೆ, ಕುಡಿಯುವ ನೀರು, ಶಿಶುಪಾಲನಾ ಕೇಂದ್ರ ವ್ಯವಸ್ಥೆ ಮಾಡಿಕೊಡಬೇಕು ಎಂದರು.</p>.<p>ಮಹಿಳಾ ನೌಕರರಿಗೆ ಅವರ ಆಯ್ಕೆಯ ಪ್ರಕಾರ ಗುಣಮಟ್ಟದ ಸೀರೆ ಅಥವಾ ಡ್ರೆಸ್ ಮೆಟರಿಯಲ್ ಕೊಡಬೇಕು, ಮಹಿಳಾ ನೌಕರರಿಗೆ ಯಾವುದೇ ಸಂದರ್ಭದಲ್ಲಿಯೂ 8 ಗಂಟೆಗಿಂತ ಅಧಿಕ ಅವಧಿಗೆ ಕರ್ತವ್ಯಕ್ಕೆ ನಿಯೋಜಿಸಬಾರದು ಎಂದು ಒತ್ತಾಯಿಸಿದರು. </p>.<p>ಭವಿಷ್ಯ ನಿಧಿ, ಪೆನ್ಷನ್ ಬದಲು ಸಂಸ್ಥೆಯೇ ತನ್ನ ಎಲ್ಲಾ ನಿವೃತ್ತ ನೌಕರರಿಗೂ ಸೂಕ್ತವಾದ ತುಟ್ಟಿ ಭತ್ಯೆ, ಎಲ್ಲ ಕಾರ್ಮಿಕರಿಗೂ ಗ್ರಾಚ್ಯುಟಿ ಪಾವತಿಸಬೇಕು ಎಂದು ಮನವಿ ಮಾಡಿದರು.</p>.<p>ರಾಜ್ಯ ಸರ್ಕಾರ ವಾಯವ್ಯ ಮತ್ತು ಕಲ್ಯಾಣ ಕರ್ನಾಟಕ ನಿಗಮಗಳಲ್ಲಿ ಖಾಸಗಿಯವರಿಗೆ ವಹಿಸಲು ಉದ್ದೇಶಿಸಿರುವ ಮಾರ್ಗಗಳನ್ನು ಸಾರಿಗೆ ನಿಗಮಗಳಿಗೆ ಉಳಿಸಬೇಕು ಎಂದು ಒತ್ತಾಯಿಸಿದರು.</p>.<p>ಕೆಎಸ್ಆರ್ಟಿಸಿ, ಬಿಎಂಟಿಸಿ, ವಾಯವ್ಯ ಹಾಗೂ ಕಲ್ಯಾಣ ಕರ್ನಾಟಕ ಸಾರಿಗೆ ಹೆಸರಿಲ್ಲಿ ಪ್ರತ್ಯೇಕವಾಗಿ ಸಿಬ್ಬಂದಿ ನೇಮಿಸುವುದನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದರು.</p>.<p>ನಾಲ್ಕೂ ಸಾರಿಗೆ ನಿಗಮಗಳಲ್ಲಿ ಖಾಲಿ ಇರುವ ಎಲ್ಲಾ ಹುದ್ದೆಗಳನ್ನೂ ಕೂಡಲೇ ಭರ್ತಿ ಮಾಡಬೇಕು ಎಂದರು.</p>.<p>ಯುನೈಟೆಡ್ ಇಂಡಿಯಾ ಇನ್ಶ್ಯೂರೆನ್ಸ್ ಕಂಪನಿಯ ವಿಮಾ ಮೊತ್ತವನ್ನು ನೌಕರರ ವೇತನದಿಂದ ಕಡಿತ ಮಾಡುವುದನ್ನು ನಿಲ್ಲಿಸಿ, ವಿಮಾ ಮೊತ್ತವನ್ನು ಸಂಸ್ಥೆ ಭರಿಸಬೇಕು ಹಾಗೂ ಈಗಾಗಲೇ ನೌಕರರ ವೇತನದಿಂದ ಕಡಿತ ಮಾಡಿರುವ ವಿಮಾ ಮೊತ್ತವನ್ನು ಆಯಾ ನೌಕರರಿಗೆ ಮರು ಪಾವತಿ ಮಾಡಬೇಕು ಎಂದು ಆಗ್ರಹಿಸಿದರು. </p>.<p class="Subhead">ಎಂದಿನಂತೆ ಬಸ್ ಸಂಚಾರ:</p>.<p>ಜಿಲ್ಲೆಯಲ್ಲಿ ಬಸ್ಗಳು ಎಂದಿನಂತೆ ಸಂಚರಿಸಿದವು. ನಗರದಿಂದ ಇತರೆಡೆಗೆ ತೆರಳುವ ಪ್ರಯಾಣಿಕರಿಗೆ ಯಾವುದೇ ಸಮಸ್ಯೆಯಾಗಿಲ್ಲ. ಚಾಲಕರು, ನಿರ್ವಾಹಕರು ಕರ್ತವ್ಯಕ್ಕೆ ಹಾಜರಾಗಿದ್ದರು. ಸಂಘಟನೆಗಳ ಮುಖಂಡರು, ಪದಾಧಿಕಾರಿಗಳು ಮಾತ್ರ ಧರಣಿಯಲ್ಲಿ ಭಾಗವಹಿಸಿದ್ದರು.</p>.<p>ಮುಖಂಡರಾದ ಎಂ.ಎಚ್.ಅಗರಖೇಡ, ಆರ್.ಎಂ.ಮಡ್ಡಿಮನಿ, ಅರುಣಕುಮಾರ ಎಂ.ಹಿರೇಮಠ, ಎಸ್.ಆರ್.ಚವ್ಹಾಣ, ಆರ್.ಲಿಂಗದಳ್ಳಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>