<p><strong>ವಿಜಯಪುರ:</strong> ಕಲಬುರ್ಗಿ ಜಿಲ್ಲಾಧಿಕಾರಿಗಳನ್ನು ಪಾಕಿಸ್ತಾನದಿಂದ ಬಂದವರು ಎಂಬ ಹೇಳಿಕೆ ನೀಡಿರುವ ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ ಅವರ ಮೇಲೆ ಕಾನೂನು ಕ್ರಮ ಜರುಗಿಸುವಂತೆ ಆಗ್ರಹಿಸಿ ಬುಧವಾರ ವಿಜಯಪುರ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಪದಾಧಿಕಾರಿಗಳು ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.</p>.<p>ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಜಿಲ್ಲಾಧ್ಯಕ್ಷ ಶಕೀಲ್ ಬಾಗಮಾರೆ ಮಾತನಾಡಿ, ವಿಧಾನ ಪರಿಷತ್ ಸದಸ್ಯರಾಗಿರುವ ಎನ್. ರವಿಕುಮಾರ ಅವರು ಕಲಬುರ್ಗಿ ಜಿಲ್ಲಾಧಿಕಾರಿಗಳನ್ನು ಪಾಕಿಸ್ತಾನಿ ಎಂದು ಕರೆಯುವ ಮೂಲಕ ದೊಡ್ಡ ತಪ್ಪು ಮಾಡಿದ್ದಾರೆ. ಈ ದೇಶದ ಹೆಮ್ಮೆಯ ನಾಗರಿಕರಾಗಿರುವ, ಜವಾಬ್ದಾರಿಯುತ ಸ್ಥಾನದಲ್ಲಿರುವ ಓರ್ವ ಮಹಿಳಾ ಅಧಿಕಾರಿಯನ್ನು ಈ ರೀತಿ ಹೇಳಿಕೆ ನೀಡಿರುವುದು ಖಂಡನೀಯ ಎಂದರು.</p>.<p>ಪ್ರತಿಯೊಬ್ಬರು ಈ ದೇಶದ ಹೆಮ್ಮೆಯ ನಾಗರಿಕರು, ದೇಶಾಭಿಮಾನಿಗಳು, ಈ ದೇಶದ ನಿವಾಸಿಗಳನ್ನೇ ಪಾಕಿಸ್ತಾನಿ ಎಂದು ಕರೆದರೆ ಮನಸ್ಸಿಗೂ ನೋವುಂಟಾಗುತ್ತದೆ. ವಿಧಾನ ಪರಿಷತ್ ಎಂಬುದು ಚಿಂತಕರ ಚಾವಡಿ ಎಂದು ಕರೆಯಲಾಗುತ್ತದೆ, ಇಂತಹ ಪವಿತ್ರ ಮೇಲ್ಮನೆಯ ಸದಸ್ಯನಾಗಿರುವ ಎನ್.ರವಿಕುಮಾರ ತಮ್ಮ ನಾಲಿಗೆ ಹರಬಿಟ್ಟಿರುವುದು ಖಂಡನೀಯ ಎಂದರು.</p>.<p>ಈ ರೀತಿಯ ಮನಸ್ಥಿತಿ ಇರುವವರು ಮೇಲ್ಮನೆಯ ಸದಸ್ಯರಾಗಿ ಇರಲು ಅರ್ಹರಲ್ಲ. ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ವಿಧಾನ ಪರಿಷತ್ ಸದಸ್ಯರಾದ ಎನ್. ರವಿಕುಮಾರ ಅವರ ಮೇಲೆ ಎಫ್ಐಆರ್ ದಾಖಲಿಸುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಬೇಕು, ಅವರ ಮೇಲೆ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.</p>.<p>ವಕೀಲರಾದ ಎನ್.ಬಿ. ಕಾಸರ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಚಾಂದಸಾಬ ಗಡಗಲಾವ, ಮುನ್ನಾ ಭಕ್ಷಿ, ಸರ್ಫರಾಜ್ ಅಗಸಬಾಳ, ಹಮೀದ್ ಮನಗೂಳಿ, ಇಮ್ತಿಯಾಜ್ ಮುಲ್ಲಾ, ಆಬೀದ್ ಇಳಕಲ್ ಮೊದಲಾದವರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ:</strong> ಕಲಬುರ್ಗಿ ಜಿಲ್ಲಾಧಿಕಾರಿಗಳನ್ನು ಪಾಕಿಸ್ತಾನದಿಂದ ಬಂದವರು ಎಂಬ ಹೇಳಿಕೆ ನೀಡಿರುವ ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ ಅವರ ಮೇಲೆ ಕಾನೂನು ಕ್ರಮ ಜರುಗಿಸುವಂತೆ ಆಗ್ರಹಿಸಿ ಬುಧವಾರ ವಿಜಯಪುರ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಪದಾಧಿಕಾರಿಗಳು ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.</p>.<p>ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಜಿಲ್ಲಾಧ್ಯಕ್ಷ ಶಕೀಲ್ ಬಾಗಮಾರೆ ಮಾತನಾಡಿ, ವಿಧಾನ ಪರಿಷತ್ ಸದಸ್ಯರಾಗಿರುವ ಎನ್. ರವಿಕುಮಾರ ಅವರು ಕಲಬುರ್ಗಿ ಜಿಲ್ಲಾಧಿಕಾರಿಗಳನ್ನು ಪಾಕಿಸ್ತಾನಿ ಎಂದು ಕರೆಯುವ ಮೂಲಕ ದೊಡ್ಡ ತಪ್ಪು ಮಾಡಿದ್ದಾರೆ. ಈ ದೇಶದ ಹೆಮ್ಮೆಯ ನಾಗರಿಕರಾಗಿರುವ, ಜವಾಬ್ದಾರಿಯುತ ಸ್ಥಾನದಲ್ಲಿರುವ ಓರ್ವ ಮಹಿಳಾ ಅಧಿಕಾರಿಯನ್ನು ಈ ರೀತಿ ಹೇಳಿಕೆ ನೀಡಿರುವುದು ಖಂಡನೀಯ ಎಂದರು.</p>.<p>ಪ್ರತಿಯೊಬ್ಬರು ಈ ದೇಶದ ಹೆಮ್ಮೆಯ ನಾಗರಿಕರು, ದೇಶಾಭಿಮಾನಿಗಳು, ಈ ದೇಶದ ನಿವಾಸಿಗಳನ್ನೇ ಪಾಕಿಸ್ತಾನಿ ಎಂದು ಕರೆದರೆ ಮನಸ್ಸಿಗೂ ನೋವುಂಟಾಗುತ್ತದೆ. ವಿಧಾನ ಪರಿಷತ್ ಎಂಬುದು ಚಿಂತಕರ ಚಾವಡಿ ಎಂದು ಕರೆಯಲಾಗುತ್ತದೆ, ಇಂತಹ ಪವಿತ್ರ ಮೇಲ್ಮನೆಯ ಸದಸ್ಯನಾಗಿರುವ ಎನ್.ರವಿಕುಮಾರ ತಮ್ಮ ನಾಲಿಗೆ ಹರಬಿಟ್ಟಿರುವುದು ಖಂಡನೀಯ ಎಂದರು.</p>.<p>ಈ ರೀತಿಯ ಮನಸ್ಥಿತಿ ಇರುವವರು ಮೇಲ್ಮನೆಯ ಸದಸ್ಯರಾಗಿ ಇರಲು ಅರ್ಹರಲ್ಲ. ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ವಿಧಾನ ಪರಿಷತ್ ಸದಸ್ಯರಾದ ಎನ್. ರವಿಕುಮಾರ ಅವರ ಮೇಲೆ ಎಫ್ಐಆರ್ ದಾಖಲಿಸುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಬೇಕು, ಅವರ ಮೇಲೆ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.</p>.<p>ವಕೀಲರಾದ ಎನ್.ಬಿ. ಕಾಸರ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಚಾಂದಸಾಬ ಗಡಗಲಾವ, ಮುನ್ನಾ ಭಕ್ಷಿ, ಸರ್ಫರಾಜ್ ಅಗಸಬಾಳ, ಹಮೀದ್ ಮನಗೂಳಿ, ಇಮ್ತಿಯಾಜ್ ಮುಲ್ಲಾ, ಆಬೀದ್ ಇಳಕಲ್ ಮೊದಲಾದವರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>