ಬುಧವಾರ, 27 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜೈನಮುನಿ ಹತ್ಯೆ; ಆರೋಪಿಗಳಿಗೆ ಶಿಕ್ಷೆಗೆ ಆಗ್ರಹ 

Published 12 ಜುಲೈ 2023, 14:33 IST
Last Updated 12 ಜುಲೈ 2023, 14:33 IST
ಅಕ್ಷರ ಗಾತ್ರ

ವಿಜಯಪುರ: ಚಿಕ್ಕೋಡಿ ತಾಲ್ಲೂಕಿನ ಹಿರೇಕೋಡಿ ಗ್ರಾಮದ ಜೈನ ಮುನಿಯನ್ನು ಕ್ರೂರವಾಗಿ ಹತ್ಯೆಗೈದ ಕಟುಕರನ್ನು 3 ತಿಂಗಳ ಒಳಗಡೆ ಬಹಿರಂಗ ಗಲ್ಲುಶಿಕ್ಷೆಗೆ ಗುರಿಪಡಿಸುವಂತೆ ಅಲ್-ಹಜ್ ಅಭ್ಯಾಸಲಿ ಎಲ್. ಚೌಧರಿ ಆಗ್ರಹಿಸಿದರು.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಹಿರೇಕೋಡಿ ಗ್ರಾಮದ ನಂದಿ ಪರ್ವತ ಆಶ್ರಮದ ಜೈನಮುನಿ ಕಾಮಕುಮಾರ ನಂದಿ ಮಹಾರಾಜರನ್ನು ಅಮಾನುಷವಾಗಿ ಕೊಲೆ ಮಾಡಿದ್ದು ದುಖಃದ ಸಂಗತಿ. ಇದು ನಾಡಿನ ಸರ್ವ ಜನತೆಗೆ ದಿಗ್ಧಮೆ ಉಂಟು ಮಾಡಿದೆ. ಆದ್ದರಿಂದ ಮುಖ್ಯಮಂತ್ರಿಗಳು ಹೆಚ್ಚಿಗೆ ಸಮಯ ತೆಗೆದುಕೊಳ್ಳದೇ 3 ತಿಂಗಳ ಒಳಗಡೆ ಫಾಸ್ಟ್ ಟ್ರ್ಯಾಕ್ ಕೋರ್ಟಿನಿಂದ ಕೊಲೆಗಡಕರಿಗೆ ಮರಣ ದಂಡನೆಯಾಗಬೇಕು.

ಜೈನಮುನಿ ಕಾಮಕುಮಾರ ನಂದಿ ಮಹಾರಾಜನ್ನು ಕೊಲೆ ಮಾಡಿದ ಕಟುಕರಿಗೆ ಕೇವಲ 6 ಗಂಟೆಯಲ್ಲಿ ಹೆಡೆಮೂರಿ ಕಟ್ಟಿದ್ದು, ರಾಜ್ಯದ ಸಮರ್ಥ ಪೊಲೀಸರಿಗೆ ಸಿಬ್ಬಂದಿಗಳಿಗೆ ಅಭಿನಂದನೆ ಸಲ್ಲಿಸುತ್ತೇನೆ. ಇಂತಹ ಕೃತ್ಯದಲ್ಲಿ ಭಾಗಿಯಾದ ಕ್ರೂರಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕೆಂದು ಆಗ್ರಹಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT