ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಜಯಪುರ | ಟಯರ್ ಕಾರ್ಖಾನೆ ಮುಚ್ಚಲು ಆಗ್ರಹ, ಪ್ರತಿಭಟನೆ  

Published 23 ಏಪ್ರಿಲ್ 2024, 16:15 IST
Last Updated 23 ಏಪ್ರಿಲ್ 2024, 16:15 IST
ಅಕ್ಷರ ಗಾತ್ರ

ವಿಜಯಪುರ: ತಾಲ್ಲೂಕಿನ ಮದಭಾವಿ ತಾಂಡಾ.1ರ ಹತ್ತಿರದ ಟಯರ್ ಕಾರ್ಖಾನೆಯನ್ನು ಬಂದ್ ಮಾಡಿ, ಇಲ್ಲದಿದ್ದರೆ ಚುನಾವಣಾ ಬಹಿಷ್ಕಾರಕ್ಕೆ ಸಮ್ಮತಿ ನೀಡಿ ಎಂದು ಆಗ್ರಹಿಸಿ ಗ್ರಾಮಸ್ಥರು ಮಂಗಳವಾರ ಪ್ರತಿಭಟನೆ ನಡೆಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.

ಮದಬಾವಿ ಗ್ರಾಮ ಪಂಚಾಯಿತಿ ಸದಸ್ಯ ಪ್ರಕಾಶ ರಾಠೋಡ ಮಾತನಾಡಿ, ‘ಜಿಲ್ಲಾಡಳಿತ ಕೂಡಲೇ ಸಂಬಂಧಿಸಿದ ಅಧಿಕಾರಿಗಳಿಂದ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಬೇಕು. ಕಾರ್ಖಾನೆ ಬಂದ್ ಮಾಡಬೇಕು, ಇಲ್ಲ ಬೇರೆಡೆಗೆ ಸ್ಥಳಾಂತರಿಸಬೇಕು ಎಂದು ಆಗ್ರಹಿಸಿದರು.

ಕಾರ್ಖಾನೆಯಿಂದ ಗ್ರಾಮದ ಮಕ್ಕಳಿಗೆ, ಮಹಿಳೆಯರಿಗೆ, ವಯೋವೃದ್ಧರಿಗೆ ಸಮಸ್ಯೆಯಾಗುತ್ತಿದೆ. ಗ್ರಾಮಸ್ಥರಿಗೆ ಗಂಟಲು ಉರಿ, ಉಸಿರಾಟದ ತೊಂದರೆ, ಹೃದಯ ಸಂಬಂಧಿ ಕಾಯಿಲೆ, ಪಾರ್ಶ್ವವಾಯು ಸೇರಿದಂತೆ ಅನೇಕ ಸಮಸ್ಯೆ ಎದುರಿಸುವಂತಾಗಿದೆ ಎಂದರು.

ಸ್ಥಳಕ್ಕೆ ಹೆಚ್ಚುವರಿ ಜಿಲ್ಲಾಧಿಕಾರಿ ಮಹಾದೇವ ಮುರಗಿ ಆಗಮಿಸಿ, ‘ಟಯರ್ ಕಾರ್ಖಾನೆಗೆ ಸಂಬಂಧಿಸಿ ಅಲ್ಲಿನ ಗ್ರಾಮ ಲೆಕ್ಕಾಧಿಕಾರಿ, ಪಿಡಿಒ ಹಾಗೂ ಚುನಾವಣಾಧಿಕಾರಿಗಳಿಂದ ವರದಿ ತರೆಸಿ, ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿಗಳಿಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಪತ್ರ ಕಳುಹಿಸಲಾಗಿದೆ. ಯಾರೂ ಚುನಾವಣಾ ಬಹಿಷ್ಕಾರ ಮಾಡಬಾರದು, ಇದು ಸಂವಿಧಾನದಡಿ ಒಳ್ಳೆಯ ನಾಯಕರನ್ನು ಆರಿಸಲು ಇರುವ ಬಹುದೊಡ್ಡ ಹಕ್ಕಾಗಿದೆ’ ಎಂದು ಮನವರಿಕೆ ಮಾಡಿದರು. 

ಗ್ರಾಮ ಪಂಚಾಯಿತಿ ಸದಸ್ಯ ಪಾಂಡುರಂಗ ರಾಠೋಡ, ಮೇಘು ರಾಠೋಡ, ಪ್ರಕಾಶ ರಾಠೋಡ, ಉತ್ತಮ ರಾಠೋಡ, ಖೀರು ರಾಠೋಡ, ಕೃಷ್ಣಾ ಚವ್ಹಾಣ, ಗಂಗಾರಾಮ ಚವ್ಹಾಣ, ರಮೇಶ ರಾಠೋಡ, ಗೋಪಾಲ ನಾಯಕ, ಬಾಸು ರಾಠೋಡ, ಲಕ್ಷ್ಮಣ ನಾಯಕ, ಠಾಕರು ರಾಠೋಡ ಸೇರಿದಂತೆ ಅನೇಕರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT