<p><strong>ವಿಜಯಪುರ:</strong> ಕೋವಿಡ್ ಲಾಕ್ಡೌನ್ ಪರಿಣಾಮ ಬಡವರು, ಕೂಲಿ ಕಾರ್ಮಿಕರು ತೀವ್ರ ಸಂಕಷ್ಟದಲ್ಲಿ ಸಿಲುಕಿದ್ದು, ಸರ್ಕಾರ ನೆರವಿಗೆ ಬರಬೇಕು ಎಂದು ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಭೀಮಶಿ ಕಲಾದಗಿ ಆಗ್ರಹಿಸಿದ್ದಾರೆ.</p>.<p>ಹಣವಿಲ್ಲದ ಪರಿಣಾಮ ಆಕ್ಸಿಜನ್ ಮತ್ತು ಔಷಧ ಸಿಗಲಾರದೆ ಸಾಯುತ್ತಿದ್ದಾರೆ. ಕೊವಿಡ್ದಿಂದ ಮರಣ ಹೊಂದಿದ ಕಾರ್ಮಿಕರಿಗೆ ಸರ್ಕಾರ ₹5 ಲಕ್ಷ ಪರಿಹಾರ ಹಣವನ್ನು ನೀಡಬೇಕು ಹಾಗೂ ಉಚಿತವಾಗಿ 10 ಕೆ.ಜಿ ಅಕ್ಕಿ, 3 ಕೆ.ಜಿ ಜೋಳ, 2 ಕೆ.ಜಿ ಗೋಧಿ ಕೂಡಲೇ ವಿತರಿಸಬೇಕು ಎಂದು ಆಗ್ರಹಿಸಿದರು.</p>.<p>ಗುಳೆ ಹೋದ ಕೂಲಿಕಾರ್ಮಿಕರಿಗೆ ತಮ್ಮ ಜಿಲ್ಲೆ ಮತ್ತು ಹಳ್ಳಿಗಳಿಗೆ ಹೋಗಲು ಸರಿಯಾದ ವ್ಯವಸ್ಥೆ ಮಾಡಬೇಕು ಎಂದರು.</p>.<p>ಕೇಂದ್ರ ಸರ್ಕಾರ ಬೆಲೆ ಏರಿಕೆಯಿಂದ ತತ್ತರಿಸಿದ ಕಾರ್ಮಿಕರಿಗೆ ₹ 21 ಸಾವಿರ ವೇತನ ನೀಡಬೇಕು. ಕೆ.ಎಸ್.ಆರ್.ಟಿ.ಸಿ. ನೌಕರರಿಗೆ ವರ್ಗಾವಣೆ ಮಾಡಿದ್ದನ್ನು ರದ್ದು ಪಡಿಸಿ 6ನೇ ವೇತನ ಜಾರಿ ಮಾಡಬೇಕು ಎಂದು ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ:</strong> ಕೋವಿಡ್ ಲಾಕ್ಡೌನ್ ಪರಿಣಾಮ ಬಡವರು, ಕೂಲಿ ಕಾರ್ಮಿಕರು ತೀವ್ರ ಸಂಕಷ್ಟದಲ್ಲಿ ಸಿಲುಕಿದ್ದು, ಸರ್ಕಾರ ನೆರವಿಗೆ ಬರಬೇಕು ಎಂದು ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಭೀಮಶಿ ಕಲಾದಗಿ ಆಗ್ರಹಿಸಿದ್ದಾರೆ.</p>.<p>ಹಣವಿಲ್ಲದ ಪರಿಣಾಮ ಆಕ್ಸಿಜನ್ ಮತ್ತು ಔಷಧ ಸಿಗಲಾರದೆ ಸಾಯುತ್ತಿದ್ದಾರೆ. ಕೊವಿಡ್ದಿಂದ ಮರಣ ಹೊಂದಿದ ಕಾರ್ಮಿಕರಿಗೆ ಸರ್ಕಾರ ₹5 ಲಕ್ಷ ಪರಿಹಾರ ಹಣವನ್ನು ನೀಡಬೇಕು ಹಾಗೂ ಉಚಿತವಾಗಿ 10 ಕೆ.ಜಿ ಅಕ್ಕಿ, 3 ಕೆ.ಜಿ ಜೋಳ, 2 ಕೆ.ಜಿ ಗೋಧಿ ಕೂಡಲೇ ವಿತರಿಸಬೇಕು ಎಂದು ಆಗ್ರಹಿಸಿದರು.</p>.<p>ಗುಳೆ ಹೋದ ಕೂಲಿಕಾರ್ಮಿಕರಿಗೆ ತಮ್ಮ ಜಿಲ್ಲೆ ಮತ್ತು ಹಳ್ಳಿಗಳಿಗೆ ಹೋಗಲು ಸರಿಯಾದ ವ್ಯವಸ್ಥೆ ಮಾಡಬೇಕು ಎಂದರು.</p>.<p>ಕೇಂದ್ರ ಸರ್ಕಾರ ಬೆಲೆ ಏರಿಕೆಯಿಂದ ತತ್ತರಿಸಿದ ಕಾರ್ಮಿಕರಿಗೆ ₹ 21 ಸಾವಿರ ವೇತನ ನೀಡಬೇಕು. ಕೆ.ಎಸ್.ಆರ್.ಟಿ.ಸಿ. ನೌಕರರಿಗೆ ವರ್ಗಾವಣೆ ಮಾಡಿದ್ದನ್ನು ರದ್ದು ಪಡಿಸಿ 6ನೇ ವೇತನ ಜಾರಿ ಮಾಡಬೇಕು ಎಂದು ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>