<p><strong>ವಿಜಯಪುರ: </strong>ನಗರದ ಹದಗೆಟ್ಟ ರಸ್ತೆಗಳ ದುರಸ್ಥಿಗೆ ಆಗ್ರಹಿಸಿ ಎಸ್ಯುಸಿಐ ಕಮ್ಯುನಿಸ್ಟ್ ಪಕ್ಷದ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಎದುರುಶುಕ್ರವಾರ ಪ್ರತಿಭಟನೆ ನಡೆಸಲಾಯಿತು.</p>.<p>ಹದಗೆಟ್ಟಿರುವ ನಗರದ ರಸ್ತೆಗಳಿಗೆ ಡಾಂಬರ್ ಹಾಕಿಸಬೇಕು,ರಸ್ತೆ ಬದಿಯಲ್ಲಿ ಚರಂಡಿ ನಿರ್ಮಿಸಬೇಕು,ರಸ್ತೆಗಳನ್ನುದೂಳು ಮುಕ್ತಗೊಳಿಸಬೇಕು, ಜನರ ಜೀವ ಕಾಪಾಡಬೇಕು ಎಂದು ಆಗ್ರಹಿಸಿದರು.ಮಹಾನಗರ ಪಾಲಿಕೆ ವಿರುದ್ಧ ಧಿಕ್ಕಾರ ಕೂಗಿದರು.</p>.<p>ಜಿಲ್ಲಾ ಕಾರ್ಯದರ್ಶಿ ಬಿ. ಭಗವಾನರೆಡ್ಡಿ ಮಾತನಾಡಿ, ಐತಿಹಾಸಿಕ ಸ್ಮಾರಕಗಳಿಂದಾಗಿ ಜಗತ್ತನ್ನೇ ತನ್ನೆಡೆ ಸೆಳೆದುಕೊಂಡ ವಿಜಯಪುರ ಈಗ, ಹದಗೆಟ್ಟ ರಸ್ತೆಗಳ ನಗರ ಎಂಬ ಕುಖ್ಯಾತಿಗೆ ಕಾರಣವಾಗಿದೆ ಎಂದು ಹೇಳಿದರು.</p>.<p>ನಗರದ ಎಲ್ಲ ರಸ್ತೆಗಳು ಜನಸಾಮಾನ್ಯರ ಓಡಾಡಕ್ಕೆ ಸುರಕ್ಷಿತವಾಗಿಲ್ಲ. ಮಕ್ಕಳು, ಹಿರಿಯ ನಾಗರಿಕರು, ಮಹಿಳೆಯರು, ಅಂಗವಿಕಲರು, ವಾಹನ ಚಾಲಕರು ಅಂಗೈಯಲ್ಲಿ ಜೀವ ಹಿಡಿದು ಓಡಾಡಬೇಕಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು.</p>.<p>ರಸ್ತೆಗಳ ದುರಸ್ತಿಗೆ ಸರ್ಕಾರದಿಂದ ಅಗತ್ಯವಿರುವಷ್ಟು ಹಣ ಬಿಡುಗಡೆಗೊಂಡಿದ್ದರೂ ಕೂಡ ಮಹಾನಗರ ಪಾಲಿಕೆಯು ಹಣವಿಲ್ಲ ಎಂಬ ನೆಪವೊಡ್ಡುತ್ತಿದೆ. ಕೇವಲ ತೇಪೆ ಹಚ್ಚುವ ಕೆಲಸಗಳು ಮಾತ್ರ ನಡೆದಿವೆ. ಶಾಶ್ವತ ಪರಿಹಾರ ಮರೀಚಿಕೆಯಾಗಿದೆ. ಈ ಕೂಡಲೇ ಜಿಲ್ಲಾಧಿಕಾರಿಗಳು ಮುತುವರ್ಜಿ ವಹಿಸಿ, ಸಮರೋಪಾದಿಯಲ್ಲಿ ಹದಗೆಟ್ಟ ರಸ್ತೆಗಳ ದುರಸ್ಥಿಗೆ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದರು.</p>.<p>ವಿಜಯಪುರ ಜಿಲ್ಲಾ ಸಮಿತಿ ಸದಸ್ಯ ಬಾಳೂ ಜೇವೂರ ಮಾತನಾಡಿ, ಕೊರೊನಾ, ಅತಿವೃಷ್ಟಿ, ಬರ ಎಂತಲ್ಲ ನೆಪಗಳನ್ನು ಹೇಳುತ್ತಾ ನಗರದಲ್ಲಿ ಯಾವ ಕೆಲಸವು ನಡೆಯುತ್ತಿಲ್ಲ ಎಂದು ದೂರಿದರು.</p>.<p>ಪ್ರತಿಭಟನೆ ಬಳಿಕ ಪಕ್ಷದ ಕಾರ್ಯಕರ್ತರು ಜಿಲ್ಲಾಧಿಕಾರಿ ಮತ್ತು ಮಹಾನಗರ ಪಾಲಿಕೆ ಆಯುಕ್ತರಿಗೆ ಭೇಟಿ ಮಾಡಿ ಸಮಸ್ಯೆಗಳ ಬಗ್ಗೆ ಚರ್ಚಿಸಿದರು.</p>.<p>ಜಿಲ್ಲಾ ಸಮಿತಿ ಸದಸ್ಯರಾದ ಸಿದ್ದಲಿಂಗ ಬಾಗೆವಾಡಿ, ಭರತಕುಮಾರ ಎಚ್.ಟಿ, ಮಲ್ಲಿಕಾರ್ಜುನ ಎಚ್.ಟಿ, ಕಾರ್ಯಕರ್ತರಾದ ಕಾವೇರಿ ರಜಪೂತ, ಸುರೇಖಾ ಕಡಪಟ್ಟಿ, ಆಕಾಶ, ಶೋಭಾ ಎಸ್, ಬೌರಮ್ಮ ಪಡಶೆಟ್ಟಿ, ಗುರುಬಾಯಿ ಬಿರಾದಾರ, ಮಹಾದೇವಿ, ರೇಣುಕಾ, ಪೀರ ಜಮಾದಾರ, ನಜೀರ್ ಪಟೇಲಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ: </strong>ನಗರದ ಹದಗೆಟ್ಟ ರಸ್ತೆಗಳ ದುರಸ್ಥಿಗೆ ಆಗ್ರಹಿಸಿ ಎಸ್ಯುಸಿಐ ಕಮ್ಯುನಿಸ್ಟ್ ಪಕ್ಷದ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಎದುರುಶುಕ್ರವಾರ ಪ್ರತಿಭಟನೆ ನಡೆಸಲಾಯಿತು.</p>.<p>ಹದಗೆಟ್ಟಿರುವ ನಗರದ ರಸ್ತೆಗಳಿಗೆ ಡಾಂಬರ್ ಹಾಕಿಸಬೇಕು,ರಸ್ತೆ ಬದಿಯಲ್ಲಿ ಚರಂಡಿ ನಿರ್ಮಿಸಬೇಕು,ರಸ್ತೆಗಳನ್ನುದೂಳು ಮುಕ್ತಗೊಳಿಸಬೇಕು, ಜನರ ಜೀವ ಕಾಪಾಡಬೇಕು ಎಂದು ಆಗ್ರಹಿಸಿದರು.ಮಹಾನಗರ ಪಾಲಿಕೆ ವಿರುದ್ಧ ಧಿಕ್ಕಾರ ಕೂಗಿದರು.</p>.<p>ಜಿಲ್ಲಾ ಕಾರ್ಯದರ್ಶಿ ಬಿ. ಭಗವಾನರೆಡ್ಡಿ ಮಾತನಾಡಿ, ಐತಿಹಾಸಿಕ ಸ್ಮಾರಕಗಳಿಂದಾಗಿ ಜಗತ್ತನ್ನೇ ತನ್ನೆಡೆ ಸೆಳೆದುಕೊಂಡ ವಿಜಯಪುರ ಈಗ, ಹದಗೆಟ್ಟ ರಸ್ತೆಗಳ ನಗರ ಎಂಬ ಕುಖ್ಯಾತಿಗೆ ಕಾರಣವಾಗಿದೆ ಎಂದು ಹೇಳಿದರು.</p>.<p>ನಗರದ ಎಲ್ಲ ರಸ್ತೆಗಳು ಜನಸಾಮಾನ್ಯರ ಓಡಾಡಕ್ಕೆ ಸುರಕ್ಷಿತವಾಗಿಲ್ಲ. ಮಕ್ಕಳು, ಹಿರಿಯ ನಾಗರಿಕರು, ಮಹಿಳೆಯರು, ಅಂಗವಿಕಲರು, ವಾಹನ ಚಾಲಕರು ಅಂಗೈಯಲ್ಲಿ ಜೀವ ಹಿಡಿದು ಓಡಾಡಬೇಕಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು.</p>.<p>ರಸ್ತೆಗಳ ದುರಸ್ತಿಗೆ ಸರ್ಕಾರದಿಂದ ಅಗತ್ಯವಿರುವಷ್ಟು ಹಣ ಬಿಡುಗಡೆಗೊಂಡಿದ್ದರೂ ಕೂಡ ಮಹಾನಗರ ಪಾಲಿಕೆಯು ಹಣವಿಲ್ಲ ಎಂಬ ನೆಪವೊಡ್ಡುತ್ತಿದೆ. ಕೇವಲ ತೇಪೆ ಹಚ್ಚುವ ಕೆಲಸಗಳು ಮಾತ್ರ ನಡೆದಿವೆ. ಶಾಶ್ವತ ಪರಿಹಾರ ಮರೀಚಿಕೆಯಾಗಿದೆ. ಈ ಕೂಡಲೇ ಜಿಲ್ಲಾಧಿಕಾರಿಗಳು ಮುತುವರ್ಜಿ ವಹಿಸಿ, ಸಮರೋಪಾದಿಯಲ್ಲಿ ಹದಗೆಟ್ಟ ರಸ್ತೆಗಳ ದುರಸ್ಥಿಗೆ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದರು.</p>.<p>ವಿಜಯಪುರ ಜಿಲ್ಲಾ ಸಮಿತಿ ಸದಸ್ಯ ಬಾಳೂ ಜೇವೂರ ಮಾತನಾಡಿ, ಕೊರೊನಾ, ಅತಿವೃಷ್ಟಿ, ಬರ ಎಂತಲ್ಲ ನೆಪಗಳನ್ನು ಹೇಳುತ್ತಾ ನಗರದಲ್ಲಿ ಯಾವ ಕೆಲಸವು ನಡೆಯುತ್ತಿಲ್ಲ ಎಂದು ದೂರಿದರು.</p>.<p>ಪ್ರತಿಭಟನೆ ಬಳಿಕ ಪಕ್ಷದ ಕಾರ್ಯಕರ್ತರು ಜಿಲ್ಲಾಧಿಕಾರಿ ಮತ್ತು ಮಹಾನಗರ ಪಾಲಿಕೆ ಆಯುಕ್ತರಿಗೆ ಭೇಟಿ ಮಾಡಿ ಸಮಸ್ಯೆಗಳ ಬಗ್ಗೆ ಚರ್ಚಿಸಿದರು.</p>.<p>ಜಿಲ್ಲಾ ಸಮಿತಿ ಸದಸ್ಯರಾದ ಸಿದ್ದಲಿಂಗ ಬಾಗೆವಾಡಿ, ಭರತಕುಮಾರ ಎಚ್.ಟಿ, ಮಲ್ಲಿಕಾರ್ಜುನ ಎಚ್.ಟಿ, ಕಾರ್ಯಕರ್ತರಾದ ಕಾವೇರಿ ರಜಪೂತ, ಸುರೇಖಾ ಕಡಪಟ್ಟಿ, ಆಕಾಶ, ಶೋಭಾ ಎಸ್, ಬೌರಮ್ಮ ಪಡಶೆಟ್ಟಿ, ಗುರುಬಾಯಿ ಬಿರಾದಾರ, ಮಹಾದೇವಿ, ರೇಣುಕಾ, ಪೀರ ಜಮಾದಾರ, ನಜೀರ್ ಪಟೇಲಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>