<p><strong>ಸಿಂದಗಿ:</strong> ಪಟ್ಟಣದ ನೆಲೆ ಪ್ರಕಾಶನ ಸಂಸ್ಥೆಯ ಅಂಗ ಸಂಸ್ಥೆಯಾದ ಎಂ.ಎಂ.ಪಡಶೆಟ್ಟಿ ಸಾಂಸ್ಕೃತಿಕ ಪ್ರತಿಷ್ಠಾನದ 2024ನೇ ಸಾಲಿನ ‘ದೇಶಿ ಸನ್ಮಾನ’ ಪ್ರಶಸ್ತಿಗೆ ಬಾಗಲಕೋಟೆ ಜಿಲ್ಲೆಯ ಜಮಖಂಡಿ ನಗರದ ಹಿರಿಯ ಜಾನಪದ ವಿದ್ವಾಂಸ ಸಂಗಮೇಶ ಬಿರಾದಾರ ಭಾಜನರಾಗಿದ್ದಾರೆ.</p>.<p>ಪ್ರಶಸ್ತಿ ₹11 ಸಾವಿರ ನಗದು, ಪ್ರಶಸ್ತಿ ಫಲಕ ಹಾಗೂ ಪುರಸ್ಕೃತರ ಜೀವನ ಸಾಧನೆಯ ಕುರಿತಾದ ಗ್ರಂಥ ಒಳಗೊಂಡಿದೆ. ಪ್ರಶಸ್ತಿ ಪ್ರದಾನ ಸಮಾರಂಭ ನವೆಂಬರ್ನಲ್ಲಿ ಸಿಂದಗಿ ಪಟ್ಟಣದಲ್ಲಿ ನಡೆಯಲಿದೆ.</p>.<p>ಪ್ರಶಸ್ತಿ ಆಯ್ಕೆ ಸಮಿತಿಯಲ್ಲಿ ನಾಡಿನ ಹಿರಿಯ ಜಾನಪದ ವಿದ್ವಾಂಸ ಶ್ರೀರಾಮ ಇಟ್ಟಣ್ಣವರ, ಎಂ.ಎಸ್.ಮದಭಾವಿ ಇದ್ದಾರೆ.</p>.<p>ಸಂಗಮೇಶ ಬಿರಾದಾರ ಅವರು ಜಾನಪದವೂ ಸೇರಿದಂತೆ ಕವಿತೆ, ವಿಮರ್ಶೆ, ಜೀವನ ಚರಿತ್ರೆ, ಸಂಪಾದನೆ ಮುಂತಾದ ಸಾಹಿತ್ಯ ಕ್ಷೇತ್ರದಲ್ಲಿ ಸಾಧನೆ ಮಾಡಿದ್ದಾರೆ.</p>.<p>‘ಚಾಪ ಹಾಕತೀವ ಡಪ್ಪಿನ ಮ್ಯಾಲ’ ಎನ್ನುವ ಹೆಸರಿನ ಮೂರು ಸಂಪುಟಗಳನ್ನು ಜಾನಪದ ಲೋಕಕ್ಕೆ ನೀಡಿದ್ದಾರೆ. ‘ತೇರದಾಳದ ಲಾವಣಿಕಾರರು’ ಅವರ ಮತ್ತೊಂದು ಮಹತ್ವದ ಕೃತಿ. ಇಂಥ ವಿದ್ವಾಂಸರಿಗೆ ಪ್ರಶಸ್ತಿ ನೀಡಲು ಪ್ರತಿಷ್ಠಾನ ಹೆಮ್ಮೆ ಪಡುತ್ತದೆ ಎಂದು ಸಂಚಾಲಕ ಚನ್ನಪ್ಪ ಕಟ್ಟಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿಂದಗಿ:</strong> ಪಟ್ಟಣದ ನೆಲೆ ಪ್ರಕಾಶನ ಸಂಸ್ಥೆಯ ಅಂಗ ಸಂಸ್ಥೆಯಾದ ಎಂ.ಎಂ.ಪಡಶೆಟ್ಟಿ ಸಾಂಸ್ಕೃತಿಕ ಪ್ರತಿಷ್ಠಾನದ 2024ನೇ ಸಾಲಿನ ‘ದೇಶಿ ಸನ್ಮಾನ’ ಪ್ರಶಸ್ತಿಗೆ ಬಾಗಲಕೋಟೆ ಜಿಲ್ಲೆಯ ಜಮಖಂಡಿ ನಗರದ ಹಿರಿಯ ಜಾನಪದ ವಿದ್ವಾಂಸ ಸಂಗಮೇಶ ಬಿರಾದಾರ ಭಾಜನರಾಗಿದ್ದಾರೆ.</p>.<p>ಪ್ರಶಸ್ತಿ ₹11 ಸಾವಿರ ನಗದು, ಪ್ರಶಸ್ತಿ ಫಲಕ ಹಾಗೂ ಪುರಸ್ಕೃತರ ಜೀವನ ಸಾಧನೆಯ ಕುರಿತಾದ ಗ್ರಂಥ ಒಳಗೊಂಡಿದೆ. ಪ್ರಶಸ್ತಿ ಪ್ರದಾನ ಸಮಾರಂಭ ನವೆಂಬರ್ನಲ್ಲಿ ಸಿಂದಗಿ ಪಟ್ಟಣದಲ್ಲಿ ನಡೆಯಲಿದೆ.</p>.<p>ಪ್ರಶಸ್ತಿ ಆಯ್ಕೆ ಸಮಿತಿಯಲ್ಲಿ ನಾಡಿನ ಹಿರಿಯ ಜಾನಪದ ವಿದ್ವಾಂಸ ಶ್ರೀರಾಮ ಇಟ್ಟಣ್ಣವರ, ಎಂ.ಎಸ್.ಮದಭಾವಿ ಇದ್ದಾರೆ.</p>.<p>ಸಂಗಮೇಶ ಬಿರಾದಾರ ಅವರು ಜಾನಪದವೂ ಸೇರಿದಂತೆ ಕವಿತೆ, ವಿಮರ್ಶೆ, ಜೀವನ ಚರಿತ್ರೆ, ಸಂಪಾದನೆ ಮುಂತಾದ ಸಾಹಿತ್ಯ ಕ್ಷೇತ್ರದಲ್ಲಿ ಸಾಧನೆ ಮಾಡಿದ್ದಾರೆ.</p>.<p>‘ಚಾಪ ಹಾಕತೀವ ಡಪ್ಪಿನ ಮ್ಯಾಲ’ ಎನ್ನುವ ಹೆಸರಿನ ಮೂರು ಸಂಪುಟಗಳನ್ನು ಜಾನಪದ ಲೋಕಕ್ಕೆ ನೀಡಿದ್ದಾರೆ. ‘ತೇರದಾಳದ ಲಾವಣಿಕಾರರು’ ಅವರ ಮತ್ತೊಂದು ಮಹತ್ವದ ಕೃತಿ. ಇಂಥ ವಿದ್ವಾಂಸರಿಗೆ ಪ್ರಶಸ್ತಿ ನೀಡಲು ಪ್ರತಿಷ್ಠಾನ ಹೆಮ್ಮೆ ಪಡುತ್ತದೆ ಎಂದು ಸಂಚಾಲಕ ಚನ್ನಪ್ಪ ಕಟ್ಟಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>