<p>ದೇವರಹಿಪ್ಪರಗಿ: ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರ ಕೂಡಲೇ ಉದ್ಘಾಟನೆ ಮಾಡುವಂತೆ ಆಗ್ರಹಿಸಿ ನಮ್ಮ ಕರ್ನಾಟಕ ಸೇನೆ ಹಾಗೂ ರೈತಸಂಘ ಪದಾಧಿಕಾರಿಗಳು ತಹಶೀಲ್ದಾರ್ ನಿಂಗಪ್ಪ ಬಿರಾದಾರ ಅವರಿಗೆ ಮನವಿ ಸಲ್ಲಿಸಿದರು.</p>.<p>ಪಟ್ಟಣದ ತಹಶೀಲ್ದಾರ್ ಕಾರ್ಯಾಲಯಕ್ಕೆ ಬುಧವಾರ ಆಗಮಿಸಿದ ನಮ್ಮ ಕರ್ನಾಟಕ ಸೇನೆ ಹಾಗೂ ರೈತಸಂಘದ ಪದಾಧಿಕಾರಿಗಳು ಸಮುದಾಯ ಆರೋಗ್ಯ ಕೇಂದ್ರದ ಉದ್ಘಾಟನೆ ಕುರಿತು ತಹಶೀಲ್ದಾರ್ ಗಮನ ಸೆಳೆದರು.</p>.<p>ರಾಜ್ಯ ರೈತ ಸಂಘದ ಯುವ ಸಂಚಾಲಕ ಸಿದ್ಧನಗೌಡ ಪಾಟೀಲ ಮಾತನಾಡಿ, ಸಮುದಾಯ ಆರೋಗ್ಯ ಕೇಂದ್ರದ ನೂತನ ಕಟ್ಟಡ ಪೂರ್ಣಗೊಂಡು 6 ತಿಂಗಳಾದರೂ ಶಾಸಕರಾಗಲಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಉದ್ಘಾಟನೆಗೆ ಕ್ರಮ ವಹಿಸುತ್ತಿಲ್ಲ. ಈ ಬಗ್ಗೆ ಈಗಾಗಲೇ ಜಿಲ್ಲಾ ಉಸ್ತುವಾರಿ ಸಚಿವರನ್ನು ಭೇಟಿ ಮಾಡಿ ಮನವಿ ಮಾಡಿದ್ದೇವೆ ಅದಾಗ್ಯೂ ಯಾವುದೇ ನಿರ್ಧಾರವಾಗಿಲ್ಲ. ಹೀಗೆ ಉದ್ಘಾಟನೆಗೆ ವಿಳಂಬ ಮಾಡಿದ್ದಲ್ಲಿ ಏ.30ರಿಂದ ತಹಶೀಲ್ದಾರ್ ಕಾರ್ಯಾಲಯದ ಎದುರು ಸಂಘಟನೆಗಳಿಂದ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿ ಮನವಿ ಸಲ್ಲಿಸಿದರು.</p>.<p>ನಮ್ಮ ಕರ್ನಾಟಕ ಸೇನೆ ತಾಲ್ಲೂಕು ಘಟಕದ ಅಧ್ಯಕ್ಷ ಹಸನ್ ನಧಾಫ್, ಅವೋಗೇಶ್ವರಶ್ರೀ, ಹಮೀದ್ ಮುಲ್ಲಾ, ಶಂಕರಗೌಡ ಹಿರೇಗೌಡರ, ಚಿದಾನಂದ ಬಜಂತ್ರಿ, ದಾವಲ್ಸಾಬ್ ಹೆಬ್ಬಾಳ, ಸಂಗನಗೌಡ ಬಿರಾದಾರ, ಮಲ್ಲಿಕಾರ್ಜುನ ಭಜಂತ್ರಿ, ದಾದಾ ಬೇಪಾರಿ, ಅಬೂಬಕರ್ ಯಲಗಾರ, ಮಲ್ಲು ಬಿರಾದಾರ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260417-26-743712708</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ದೇವರಹಿಪ್ಪರಗಿ: ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರ ಕೂಡಲೇ ಉದ್ಘಾಟನೆ ಮಾಡುವಂತೆ ಆಗ್ರಹಿಸಿ ನಮ್ಮ ಕರ್ನಾಟಕ ಸೇನೆ ಹಾಗೂ ರೈತಸಂಘ ಪದಾಧಿಕಾರಿಗಳು ತಹಶೀಲ್ದಾರ್ ನಿಂಗಪ್ಪ ಬಿರಾದಾರ ಅವರಿಗೆ ಮನವಿ ಸಲ್ಲಿಸಿದರು.</p>.<p>ಪಟ್ಟಣದ ತಹಶೀಲ್ದಾರ್ ಕಾರ್ಯಾಲಯಕ್ಕೆ ಬುಧವಾರ ಆಗಮಿಸಿದ ನಮ್ಮ ಕರ್ನಾಟಕ ಸೇನೆ ಹಾಗೂ ರೈತಸಂಘದ ಪದಾಧಿಕಾರಿಗಳು ಸಮುದಾಯ ಆರೋಗ್ಯ ಕೇಂದ್ರದ ಉದ್ಘಾಟನೆ ಕುರಿತು ತಹಶೀಲ್ದಾರ್ ಗಮನ ಸೆಳೆದರು.</p>.<p>ರಾಜ್ಯ ರೈತ ಸಂಘದ ಯುವ ಸಂಚಾಲಕ ಸಿದ್ಧನಗೌಡ ಪಾಟೀಲ ಮಾತನಾಡಿ, ಸಮುದಾಯ ಆರೋಗ್ಯ ಕೇಂದ್ರದ ನೂತನ ಕಟ್ಟಡ ಪೂರ್ಣಗೊಂಡು 6 ತಿಂಗಳಾದರೂ ಶಾಸಕರಾಗಲಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಉದ್ಘಾಟನೆಗೆ ಕ್ರಮ ವಹಿಸುತ್ತಿಲ್ಲ. ಈ ಬಗ್ಗೆ ಈಗಾಗಲೇ ಜಿಲ್ಲಾ ಉಸ್ತುವಾರಿ ಸಚಿವರನ್ನು ಭೇಟಿ ಮಾಡಿ ಮನವಿ ಮಾಡಿದ್ದೇವೆ ಅದಾಗ್ಯೂ ಯಾವುದೇ ನಿರ್ಧಾರವಾಗಿಲ್ಲ. ಹೀಗೆ ಉದ್ಘಾಟನೆಗೆ ವಿಳಂಬ ಮಾಡಿದ್ದಲ್ಲಿ ಏ.30ರಿಂದ ತಹಶೀಲ್ದಾರ್ ಕಾರ್ಯಾಲಯದ ಎದುರು ಸಂಘಟನೆಗಳಿಂದ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿ ಮನವಿ ಸಲ್ಲಿಸಿದರು.</p>.<p>ನಮ್ಮ ಕರ್ನಾಟಕ ಸೇನೆ ತಾಲ್ಲೂಕು ಘಟಕದ ಅಧ್ಯಕ್ಷ ಹಸನ್ ನಧಾಫ್, ಅವೋಗೇಶ್ವರಶ್ರೀ, ಹಮೀದ್ ಮುಲ್ಲಾ, ಶಂಕರಗೌಡ ಹಿರೇಗೌಡರ, ಚಿದಾನಂದ ಬಜಂತ್ರಿ, ದಾವಲ್ಸಾಬ್ ಹೆಬ್ಬಾಳ, ಸಂಗನಗೌಡ ಬಿರಾದಾರ, ಮಲ್ಲಿಕಾರ್ಜುನ ಭಜಂತ್ರಿ, ದಾದಾ ಬೇಪಾರಿ, ಅಬೂಬಕರ್ ಯಲಗಾರ, ಮಲ್ಲು ಬಿರಾದಾರ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260417-26-743712708</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>