<p><strong>ಆಲಮೇಲ</strong>: ‘ಇಂದಿರಾ ಕ್ಯಾಂಟೀನ್ ಯೋಜನೆ ಜಾರಿಗೆ ತರುವ ಮೂಲಕ ಬಡವರ ಹಸಿವು ಮುಕ್ತಗೊಳಿಸಿರುವ ಶ್ರೇಯಸ್ಸು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲುತ್ತದೆ’ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.</p>.<p>ಇಂಡಿ ರಸ್ತೆಯ ಯುಕೆಪಿ ಕ್ಯಾಂಪಿನ ಆವರಣದ ತಹಶೀಲ್ದಾರ್ ಕಚೇರಿ ಹತ್ತಿರ ನಿರ್ಮಾಣಗೊಂಡಿರುವ ಇಂದಿರಾ ಕ್ಯಾಂಟೀನ್ ಅನ್ನು ಶನಿವಾರ ಉದ್ಘಾಟಿಸಿ ಮಾತನಾಡಿದರು.</p>.<p>‘ಈ ಯೋಜನೆಯನ್ನು ಬಿಜೆಪಿ ಮತ್ತು ಸಮ್ಮಿಶ್ರ ಸರ್ಕಾರ ಸ್ಥಗಿತಗೊಳಿಸಿತ್ತು. ಸಿದ್ದರಾಮಯ್ಯನವರ ಸರ್ಕಾರ ಮತ್ತೆ ಅಧಿಕಾರಕ್ಕೆ ಬಂದು ಪುನಃ ಯೋಜನೆ ಆರಂಭಿಸಿ ಬಡವರಿಗೆ ಅನುಕೂಲ ಒದಗಿಸಿದೆ’ ಎಂದರು.<br /><br />‘ಆಲಮೇಲದ ಬಹುದಿನಗಳ ಕನಸಾದ ತೋಟಗಾರಿಕೆ ಕಾಲೇಜು ಮತ್ತು ಕಡಣಿ ಬ್ರೀಜ್ ನಿರ್ಮಾಣ ಕಾಮಗಾರಿಗೆ ಎರಡ ಮೂರು ತಿಂಗಳಲ್ಲಿ ಚಾಲನೆ ನೀಡಲಾಗುವುದು. ಶಾಸಕರ ವಿಶೇಷ ಅನುದಾನದಲ್ಲಿ ₹50 ಕೋಟಿಯನ್ನು ಸಿಂದಗಿ ಕ್ಷೇತ್ರಕ್ಕೆ ನೀಡಿದ್ದು, ಅದರಲ್ಲಿ ಆಲಮೇಲ ಪಟ್ಟಣಕ್ಕೆ ಬಹುತೇಕ ಅನುದಾನ ನೀಡುವ ಮೂಲಕ ಅಭಿವೃದ್ದಿ ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡುವೆ’ ಎಂದು ಹೇಳಿದರು.</p>.<p>ಪಟ್ಟಣ ಪಂಚಾಯಿತಿ ಅಧ್ಯಕ್ಷ ಸಾಧಿಕ ಸುಂಬಡ ಮಾತನಾಡಿದರು.</p>.<p>ಸಾನ್ನಿಧ್ಯ ವಹಿಸಿದ್ದ ಹಿರೇಮಠದ ಚಂದ್ರಶೇಖರ ಸ್ವಾಮೀಜಿ, ಜಿಲ್ಲಾ ಯೋಜಾನಾಧಿಕಾರಿ ಸೌದಾಗರ, ತಹಶೀಲ್ದಾರ್ ಕೆ. ವಿಜಯಕುಮಾರ ಮಾತನಾಡಿದರು.</p>.<p>ಅಳ್ಳೋಳ್ಳಿಮಠದ ಶ್ರೀಶೈಲಯ್ಯ ಸ್ವಾಮೀಜಿ, ಅಧಿಕಾರಿ ವಿದ್ಯಾಧರ ನ್ಯಾಮಗೊಂಡ, ಪಟ್ಟಣ ಪಂಚಾಯಿತಿ ಇಒ ಸುರೇಶ ನಾಯಕ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಆಲಮೇಲ</strong>: ‘ಇಂದಿರಾ ಕ್ಯಾಂಟೀನ್ ಯೋಜನೆ ಜಾರಿಗೆ ತರುವ ಮೂಲಕ ಬಡವರ ಹಸಿವು ಮುಕ್ತಗೊಳಿಸಿರುವ ಶ್ರೇಯಸ್ಸು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲುತ್ತದೆ’ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.</p>.<p>ಇಂಡಿ ರಸ್ತೆಯ ಯುಕೆಪಿ ಕ್ಯಾಂಪಿನ ಆವರಣದ ತಹಶೀಲ್ದಾರ್ ಕಚೇರಿ ಹತ್ತಿರ ನಿರ್ಮಾಣಗೊಂಡಿರುವ ಇಂದಿರಾ ಕ್ಯಾಂಟೀನ್ ಅನ್ನು ಶನಿವಾರ ಉದ್ಘಾಟಿಸಿ ಮಾತನಾಡಿದರು.</p>.<p>‘ಈ ಯೋಜನೆಯನ್ನು ಬಿಜೆಪಿ ಮತ್ತು ಸಮ್ಮಿಶ್ರ ಸರ್ಕಾರ ಸ್ಥಗಿತಗೊಳಿಸಿತ್ತು. ಸಿದ್ದರಾಮಯ್ಯನವರ ಸರ್ಕಾರ ಮತ್ತೆ ಅಧಿಕಾರಕ್ಕೆ ಬಂದು ಪುನಃ ಯೋಜನೆ ಆರಂಭಿಸಿ ಬಡವರಿಗೆ ಅನುಕೂಲ ಒದಗಿಸಿದೆ’ ಎಂದರು.<br /><br />‘ಆಲಮೇಲದ ಬಹುದಿನಗಳ ಕನಸಾದ ತೋಟಗಾರಿಕೆ ಕಾಲೇಜು ಮತ್ತು ಕಡಣಿ ಬ್ರೀಜ್ ನಿರ್ಮಾಣ ಕಾಮಗಾರಿಗೆ ಎರಡ ಮೂರು ತಿಂಗಳಲ್ಲಿ ಚಾಲನೆ ನೀಡಲಾಗುವುದು. ಶಾಸಕರ ವಿಶೇಷ ಅನುದಾನದಲ್ಲಿ ₹50 ಕೋಟಿಯನ್ನು ಸಿಂದಗಿ ಕ್ಷೇತ್ರಕ್ಕೆ ನೀಡಿದ್ದು, ಅದರಲ್ಲಿ ಆಲಮೇಲ ಪಟ್ಟಣಕ್ಕೆ ಬಹುತೇಕ ಅನುದಾನ ನೀಡುವ ಮೂಲಕ ಅಭಿವೃದ್ದಿ ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡುವೆ’ ಎಂದು ಹೇಳಿದರು.</p>.<p>ಪಟ್ಟಣ ಪಂಚಾಯಿತಿ ಅಧ್ಯಕ್ಷ ಸಾಧಿಕ ಸುಂಬಡ ಮಾತನಾಡಿದರು.</p>.<p>ಸಾನ್ನಿಧ್ಯ ವಹಿಸಿದ್ದ ಹಿರೇಮಠದ ಚಂದ್ರಶೇಖರ ಸ್ವಾಮೀಜಿ, ಜಿಲ್ಲಾ ಯೋಜಾನಾಧಿಕಾರಿ ಸೌದಾಗರ, ತಹಶೀಲ್ದಾರ್ ಕೆ. ವಿಜಯಕುಮಾರ ಮಾತನಾಡಿದರು.</p>.<p>ಅಳ್ಳೋಳ್ಳಿಮಠದ ಶ್ರೀಶೈಲಯ್ಯ ಸ್ವಾಮೀಜಿ, ಅಧಿಕಾರಿ ವಿದ್ಯಾಧರ ನ್ಯಾಮಗೊಂಡ, ಪಟ್ಟಣ ಪಂಚಾಯಿತಿ ಇಒ ಸುರೇಶ ನಾಯಕ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>