<p><strong>ದೇವರಹಿಪ್ಪರಗಿ</strong>: ಇಲಾಖೆಯಲ್ಲಿ ಯಾವುದೇ ಸಿಬ್ಬಂದಿ ಸೇವಾತತ್ಪರತೆಯ ಮೂಲಕ ನಿಷ್ಕಳಂಕ ಸೇವೆ ಸಲ್ಲಿಸುವುದು ಇತರರಿಗೆ ಮಾದರಿಯಾಗಿದೆ ಎಂದು ಜಿಲ್ಲಾ ಅಂಚೆ ಅಧಿಕ್ಷಕ ಮಹಾಂತೇಶ ತೋಗರಿ ಹೇಳಿದರು.</p>.<p>ಪಟ್ಟಣದ ಅಂಚೆ ಕಚೇರಿಯಲ್ಲಿ ಗುರುವಾರ ಸೇವಾ ನಿವೃತ್ತರಾದ ಡಾಕ್ಸೇವಕ ವೆಂಕಟೇಶ ಕುಲಕರ್ಣಿ ಅವರ ಬೀಳ್ಕೊಡುವ ಸಮಾರಂಭದಲ್ಲಿ ಮಾತನಾಡಿದರು.</p>.<p>ಪಟ್ಟಣದಲ್ಲಿ ತಮ್ಮ ಸತತ 35 ವರ್ಷಗಳ ಕಾಲ ನಿಷ್ಕಳಂಕ ಸೇವೆಯ ಮೂಲಕ ಮನೆಮಾತಾಗಿರುವ ವೆಂಕಟೇಶ ಕುಲಕರ್ಣಿ ಅವರ ನಿವೃತ್ತಿ ಜೀವನ ಸುಖಮಯವಾಗಿರಲಿ ಎಂದರು.</p>.<p>ಸನ್ಮಾನಿತರ ಪರ ಸುಪ್ರೀಯಾ ಕುಲಕರ್ಣಿ ಮಾತನಾಡಿ, ತಂದೆಯ ಸೇವೆಯ ಸಾರ್ಥಕತೆಗೆ ಇಲಾಖೆ ಪರವಾಗಿ ಸಂದ ಗೌರವಕ್ಕೆ ಅಭಿನಂದನೆ ಸಲ್ಲಿಸಿದರು.</p>.<p>ಅಂಚೆ ನಿರೀಕ್ಷಕ ಕರಣ ಎಂ.ಜಿ. ಶಾರದಾ ಹೆಡಜೋಳ, ಮನೋಹರ ಪೋಳ, ಅಮರೇಶ ಕಲಶೆಟ್ಟಿ, ಬಸಯ್ಯ ಸ್ಥಾವರಮಠ, ಭಾಗ್ಯ ಪುರವಂತರಮಠ, ಕೀರ್ತಿ ಪಾಟೀಲ, ಸುವರ್ಣ ಕಲಾಲ್, ಸುನಂದಾ ಬಿರಾದಾರ, ಪ್ರವೀಣ ಕುಲಕರ್ಣಿ, ಬಿ.ಟಿ.ಮಾದರ, ರಾಮನಗೌಡ ಬಿರಾದಾರ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260504-26-2040722732</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದೇವರಹಿಪ್ಪರಗಿ</strong>: ಇಲಾಖೆಯಲ್ಲಿ ಯಾವುದೇ ಸಿಬ್ಬಂದಿ ಸೇವಾತತ್ಪರತೆಯ ಮೂಲಕ ನಿಷ್ಕಳಂಕ ಸೇವೆ ಸಲ್ಲಿಸುವುದು ಇತರರಿಗೆ ಮಾದರಿಯಾಗಿದೆ ಎಂದು ಜಿಲ್ಲಾ ಅಂಚೆ ಅಧಿಕ್ಷಕ ಮಹಾಂತೇಶ ತೋಗರಿ ಹೇಳಿದರು.</p>.<p>ಪಟ್ಟಣದ ಅಂಚೆ ಕಚೇರಿಯಲ್ಲಿ ಗುರುವಾರ ಸೇವಾ ನಿವೃತ್ತರಾದ ಡಾಕ್ಸೇವಕ ವೆಂಕಟೇಶ ಕುಲಕರ್ಣಿ ಅವರ ಬೀಳ್ಕೊಡುವ ಸಮಾರಂಭದಲ್ಲಿ ಮಾತನಾಡಿದರು.</p>.<p>ಪಟ್ಟಣದಲ್ಲಿ ತಮ್ಮ ಸತತ 35 ವರ್ಷಗಳ ಕಾಲ ನಿಷ್ಕಳಂಕ ಸೇವೆಯ ಮೂಲಕ ಮನೆಮಾತಾಗಿರುವ ವೆಂಕಟೇಶ ಕುಲಕರ್ಣಿ ಅವರ ನಿವೃತ್ತಿ ಜೀವನ ಸುಖಮಯವಾಗಿರಲಿ ಎಂದರು.</p>.<p>ಸನ್ಮಾನಿತರ ಪರ ಸುಪ್ರೀಯಾ ಕುಲಕರ್ಣಿ ಮಾತನಾಡಿ, ತಂದೆಯ ಸೇವೆಯ ಸಾರ್ಥಕತೆಗೆ ಇಲಾಖೆ ಪರವಾಗಿ ಸಂದ ಗೌರವಕ್ಕೆ ಅಭಿನಂದನೆ ಸಲ್ಲಿಸಿದರು.</p>.<p>ಅಂಚೆ ನಿರೀಕ್ಷಕ ಕರಣ ಎಂ.ಜಿ. ಶಾರದಾ ಹೆಡಜೋಳ, ಮನೋಹರ ಪೋಳ, ಅಮರೇಶ ಕಲಶೆಟ್ಟಿ, ಬಸಯ್ಯ ಸ್ಥಾವರಮಠ, ಭಾಗ್ಯ ಪುರವಂತರಮಠ, ಕೀರ್ತಿ ಪಾಟೀಲ, ಸುವರ್ಣ ಕಲಾಲ್, ಸುನಂದಾ ಬಿರಾದಾರ, ಪ್ರವೀಣ ಕುಲಕರ್ಣಿ, ಬಿ.ಟಿ.ಮಾದರ, ರಾಮನಗೌಡ ಬಿರಾದಾರ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260504-26-2040722732</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>