<p><em>ಪ್ರಜಾವಾಣಿವಾರ್ತೆ</em></p>.<p>ದೇವರಹಿಪ್ಪರಗಿ: ಗ್ರಾಮೀಣ ಜನತೆ ಕಾನೂನಿನ ಜ್ಞಾನ ಹಾಗೂ ಅರಿವು ಹೊಂದುವುದು ಇಂದು ಅಗತ್ಯವಾಗಿದೆ ಎಂದು ಹಿರಿಯ ನ್ಯಾಯಾಧೀಶ ನಾಗೇಶ ಮೋಗೆರ್ ಹೇಳಿದರು.</p>.<p>ತಾಲ್ಲೂಕಿನ ಚಿಕ್ಕರೂಗಿ ಗ್ರಾಮದಲ್ಲಿ ಸಿಂದಗಿ ತಾಲ್ಲೂಕು ವಕೀಲರ ಸಂಘದಡಿ ಗುರುವಾರ ಜರುಗಿದ ಕಾನೂನು ಅರಿವು, ನೆರವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>ಪ್ರತಿಯೊಬ್ಬರು ತಮ್ಮ ಮಕ್ಕಳಿಗೆ ಗುಣಮಟ್ಟದ ಶಿಕ್ಷಣವನ್ನು ಕೊಡಿಸಬೇಕು. ಅಪರಾಧ ಚಟುವಟಿಕೆಗಳಿಂದ ದೂರವಿರಬೇಕು. ಇಂದು ವರದಕ್ಷಿಣೆ ನೀಡುವುದು ಹಾಗೂ ತೆಗೆದುಕೊಳ್ಳುವುದು ಎರಡು ಅಪರಾಧಗಳೆನ್ನಿಸಿವೆ. ಆದ್ದರಿಂದ ಗ್ರಾಮವನ್ನು ವರದಕ್ಷಿಣೆ ಮುಕ್ತವಾಗಿಸಲು ತಾವೆಲ್ಲರೂ ಮುಂದಾಗಬೇಕು ಎಂದು ಸಲಹೆ ನೀಡಿದರು</p>.<p>ನ್ಯಾಯಾಧೀಶೆ ಪಂಕಜಾ ಕೊಣ್ಣೂರ ಮಾತನಾಡಿ, ಚಿಕ್ಕ ಮಕ್ಕಳಿಗೆ ವಾಹನ ಚಾಲನೆ ಮಾಡಲು ಕೊಡಬೇಡಿ. ಒಂದು ವೇಳೆ ನೀಡಿದರೆ ಅದಕ್ಕೆ ನ್ಯಾಯಾಲಯದಿಂದ ದಂಡ ವಿಧಿಸಲಾಗುತ್ತದೆ. ಮದ್ಯಪಾನ ಮಾಡಿ ವಾಹನ ಚಾಲನೆ ಮಾಡಬೇಡಿ ಎಂದು ಕಾನೂನಾತ್ಮಕ ವಿಚಾರಗಳನ್ನು ತಿಳಿಸಿದರು.</p>.<p>ಸಿಂದಗಿ ವಕೀಲರ ಸಂಘದ ಅಧ್ಯಕ್ಷ ಎಸ್.ಬಿ.ಪಾಟೀಲ ಹಾಗೂ ಸರ್ಕಾರಿ ವಕೀಲ ಬಿ.ಜಿ.ನೆಲ್ಲಗಿ ಮಾತನಾಡಿ, ವರದಕ್ಷಿಣೆ ಮತ್ತು ಭೂಮಿಯ ಸಂರಕ್ಷಣೆ ಬಗ್ಗೆ ವಿಚಾರಗಳನ್ನು ತಿಳಿಹೇಳಿದರು.</p>.<p>ವಕೀಲ ಶ್ರೀಶೈಲ ಮುಳಜಿ (ಚಿಕ್ಕರೂಗಿ) ಮಾತನಾಡಿ, ನಮ್ಮ ಯುವಕರು ಕಾನೂನನ್ನು ಗೌರವಿಸಬೇಕು ಹಾಗೂ ಪಾಲಿಸಬೇಕು. ಕಾನೂನಿನ ವಿರುದ್ಧ ಯಾವುದೇ ಚಟುವಟಿಕೆ ಮಾಡಿದರೆ ಅದರ ಪರಿಣಾಮ ನಾವೇ ಎದುರಿಸಬೇಕಾಗುತ್ತದೆ ಎಂದರು.</p>.<p>ವಕೀಲರುಗಳಾದ ಕಾಶೀನಾಥ ಚವ್ಹಾಣ, ರವಿ ನಾಯಕ, ಬಿ.ಎಸ್.ಬಿರಾದಾರ, ಪಿಕೆಪಿಎಸ್ ಅಧ್ಯಕ್ಷ ನಾಗಣ್ಣ ಮುಳಜಿ, ಪಿಡಿಓ ಶಿವಾನಂದ ಮುಲಿಮನಿ, ಎಸ್.ಎಂ.ಆನಂದಿ, ವಿಶ್ವನಾಥ್ ಚಂಡಕಿ ಶಂಕರಗೌಡ ಪಾಟೀಲ, ಮಲ್ಲಿಕಾರ್ಜುನ ಚಂಡಕಿ, ದೇವಾನಂದ ಬಾಗಲಕೋಟ, ಕುಮಾರಗೌಡ ಬಿರಾದಾರ, ಚಿದಾನಂದ ಬಿರಾದಾರ, ಕಲ್ಲು ನಾಟೀಕಾರ, ಶರಣಪ್ಪ ಕುಂಬಾರ, ಬಸವರಾಜ ಕುಂಬಾರ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260502-26-449732907</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><em>ಪ್ರಜಾವಾಣಿವಾರ್ತೆ</em></p>.<p>ದೇವರಹಿಪ್ಪರಗಿ: ಗ್ರಾಮೀಣ ಜನತೆ ಕಾನೂನಿನ ಜ್ಞಾನ ಹಾಗೂ ಅರಿವು ಹೊಂದುವುದು ಇಂದು ಅಗತ್ಯವಾಗಿದೆ ಎಂದು ಹಿರಿಯ ನ್ಯಾಯಾಧೀಶ ನಾಗೇಶ ಮೋಗೆರ್ ಹೇಳಿದರು.</p>.<p>ತಾಲ್ಲೂಕಿನ ಚಿಕ್ಕರೂಗಿ ಗ್ರಾಮದಲ್ಲಿ ಸಿಂದಗಿ ತಾಲ್ಲೂಕು ವಕೀಲರ ಸಂಘದಡಿ ಗುರುವಾರ ಜರುಗಿದ ಕಾನೂನು ಅರಿವು, ನೆರವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>ಪ್ರತಿಯೊಬ್ಬರು ತಮ್ಮ ಮಕ್ಕಳಿಗೆ ಗುಣಮಟ್ಟದ ಶಿಕ್ಷಣವನ್ನು ಕೊಡಿಸಬೇಕು. ಅಪರಾಧ ಚಟುವಟಿಕೆಗಳಿಂದ ದೂರವಿರಬೇಕು. ಇಂದು ವರದಕ್ಷಿಣೆ ನೀಡುವುದು ಹಾಗೂ ತೆಗೆದುಕೊಳ್ಳುವುದು ಎರಡು ಅಪರಾಧಗಳೆನ್ನಿಸಿವೆ. ಆದ್ದರಿಂದ ಗ್ರಾಮವನ್ನು ವರದಕ್ಷಿಣೆ ಮುಕ್ತವಾಗಿಸಲು ತಾವೆಲ್ಲರೂ ಮುಂದಾಗಬೇಕು ಎಂದು ಸಲಹೆ ನೀಡಿದರು</p>.<p>ನ್ಯಾಯಾಧೀಶೆ ಪಂಕಜಾ ಕೊಣ್ಣೂರ ಮಾತನಾಡಿ, ಚಿಕ್ಕ ಮಕ್ಕಳಿಗೆ ವಾಹನ ಚಾಲನೆ ಮಾಡಲು ಕೊಡಬೇಡಿ. ಒಂದು ವೇಳೆ ನೀಡಿದರೆ ಅದಕ್ಕೆ ನ್ಯಾಯಾಲಯದಿಂದ ದಂಡ ವಿಧಿಸಲಾಗುತ್ತದೆ. ಮದ್ಯಪಾನ ಮಾಡಿ ವಾಹನ ಚಾಲನೆ ಮಾಡಬೇಡಿ ಎಂದು ಕಾನೂನಾತ್ಮಕ ವಿಚಾರಗಳನ್ನು ತಿಳಿಸಿದರು.</p>.<p>ಸಿಂದಗಿ ವಕೀಲರ ಸಂಘದ ಅಧ್ಯಕ್ಷ ಎಸ್.ಬಿ.ಪಾಟೀಲ ಹಾಗೂ ಸರ್ಕಾರಿ ವಕೀಲ ಬಿ.ಜಿ.ನೆಲ್ಲಗಿ ಮಾತನಾಡಿ, ವರದಕ್ಷಿಣೆ ಮತ್ತು ಭೂಮಿಯ ಸಂರಕ್ಷಣೆ ಬಗ್ಗೆ ವಿಚಾರಗಳನ್ನು ತಿಳಿಹೇಳಿದರು.</p>.<p>ವಕೀಲ ಶ್ರೀಶೈಲ ಮುಳಜಿ (ಚಿಕ್ಕರೂಗಿ) ಮಾತನಾಡಿ, ನಮ್ಮ ಯುವಕರು ಕಾನೂನನ್ನು ಗೌರವಿಸಬೇಕು ಹಾಗೂ ಪಾಲಿಸಬೇಕು. ಕಾನೂನಿನ ವಿರುದ್ಧ ಯಾವುದೇ ಚಟುವಟಿಕೆ ಮಾಡಿದರೆ ಅದರ ಪರಿಣಾಮ ನಾವೇ ಎದುರಿಸಬೇಕಾಗುತ್ತದೆ ಎಂದರು.</p>.<p>ವಕೀಲರುಗಳಾದ ಕಾಶೀನಾಥ ಚವ್ಹಾಣ, ರವಿ ನಾಯಕ, ಬಿ.ಎಸ್.ಬಿರಾದಾರ, ಪಿಕೆಪಿಎಸ್ ಅಧ್ಯಕ್ಷ ನಾಗಣ್ಣ ಮುಳಜಿ, ಪಿಡಿಓ ಶಿವಾನಂದ ಮುಲಿಮನಿ, ಎಸ್.ಎಂ.ಆನಂದಿ, ವಿಶ್ವನಾಥ್ ಚಂಡಕಿ ಶಂಕರಗೌಡ ಪಾಟೀಲ, ಮಲ್ಲಿಕಾರ್ಜುನ ಚಂಡಕಿ, ದೇವಾನಂದ ಬಾಗಲಕೋಟ, ಕುಮಾರಗೌಡ ಬಿರಾದಾರ, ಚಿದಾನಂದ ಬಿರಾದಾರ, ಕಲ್ಲು ನಾಟೀಕಾರ, ಶರಣಪ್ಪ ಕುಂಬಾರ, ಬಸವರಾಜ ಕುಂಬಾರ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260502-26-449732907</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>