<p><strong>ದೇವರಹಿಪ್ಪರಗಿ:</strong> ಇಲ್ಲಿನ ಸರ್ಕಾರಿ ಹೆಣ್ಣುಮಕ್ಕಳ ಪ್ರಾಥಮಿಕ ಶಾಲೆಗೆ ಸಿಂದಗಿ ಕ್ಷೇತ್ರ ಶಿಕ್ಷಣಾಕಾರಿ ಮಹಾಂತೇಶ ಯಡ್ರಾಮಿ ಸೋಮವಾರ ಭೇಟಿ ನೀಡಿ, ಅಲ್ಲಿನ ಸಮಸ್ಯೆ ಕುರಿತು ಪರಿಶೀಲಿಸಿದರು.</p>.<p>ಮುಖ್ಯಶಿಕ್ಷಕಿ ಮಹಾನಂದಾ ಕುಂಬಾರ ಆವರಣದಲ್ಲಿ ಸಂಗ್ರಹವಾಗುವ ನೀರಿನ ಸಮಸ್ಯೆ ಬಗ್ಗೆ ಮಾಹಿತಿ ನೀಡಿ, 'ಏಳೆಂಟು ವರ್ಷಗಳ ಹಿಂದೆ ಪಟ್ಟಣ ಪಂಚಾಯಿತಿ ವತಿಯಿಂದ ಚರಂಡಿ, ಸಿಸಿ ರಸ್ತೆ ನಿರ್ಮಿಸುವಾಗ ಶಾಲಾ ಆವರಣಕ್ಕಿಂತ ಎತ್ತರದಲ್ಲಿ ಚರಂಡಿ ನಿರ್ಮಿಸಿದ್ದರಿಂದ ಶಾಲೆಯ ಆವರಣಕ್ಕೆ ನೀರು ಹರಿದು ಬರುತ್ತದೆ. ಈ ಬಗ್ಗೆ ಪಟ್ಟಣ ಪಂಚಾಯಿತಿ ಅಧಿಕಾರಿಗಳ ಗಮನಕ್ಕೆ ತರಲಾಗಿದೆ. ಕಳೆದ ಎರಡು ವರ್ಷಗಳ ಹಿಂದೆ ಪಟ್ಟಣ ಪಂಚಾಯಿತಿಯವರು ನೀರು ನಿಲ್ಲುವ ಜಾಗಕ್ಕೆ ತಾತ್ಕಾಲಿಕವಾಗಿ ಗರಸು ಹಾಕಿಸಿದ್ದಾರೆ’ ಎಂದು ತಿಳಿಸಿದರು.</p>.<p>ಸಹಶಿಕ್ಷಕರು ಹಾಗೂ ಎಸ್ಡಿಎಂಸಿ ಸದಸ್ಯರನ್ನೊಳಗೊಂಡು ತಕ್ಷಣ ಸಭೆ ಕರೆದು, ಆವರಣದ ಒಂದು ಮೂಲೆಯಲ್ಲಿ ಜೆಸಿಬಿ ಮೂಲಕ ಗುಂಡಿ ತೋಡಿಸಿ, ಕಲ್ಲು ಮಣ್ಣು ತುಂಬಿಸಿ, ನೀರು ಇಂಗುವಂತೆ ವ್ಯವಸ್ಥೆ ಕಲ್ಪಿಸಬೇಕು ಎಂದು ಕ್ಷೇತ್ರಶಿಕ್ಷಣಾಧಿಕಾರಿ ಮುಖ್ಯಶಿಕ್ಷಕರಿಗೆ ಸೂಚಿಸಿದ್ದಾಗಿ ತಿಳಿಸಿದರು.</p>.<p>'ಶಾಲಾ ಆವರಣ ಜಲಾವೃತ; ಮಕ್ಕಳ ಪರದಾಟ' ಶೀರ್ಷಿಕೆಯಡಿ ‘ಪ್ರಜಾವಾಣಿ’ ಜುಲೈ 20ರ ಸಂಚಿಕೆಯಲ್ಲಿ ವರದಿ ಪ್ರಕಟಿಸಲಾಗಿತ್ತು. ಈ ವರದಿ ಗಮನಿಸಿದ ಕ್ಷೇತ್ರ ಶಿಕ್ಷಣಾಕಾರಿ ಶಾಲೆಗೆ ಭೇಟಿ ನೀಡಿ ಸಮಸ್ಯೆಗೆ ಪರಿಹಾರ ಸೂಚಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದೇವರಹಿಪ್ಪರಗಿ:</strong> ಇಲ್ಲಿನ ಸರ್ಕಾರಿ ಹೆಣ್ಣುಮಕ್ಕಳ ಪ್ರಾಥಮಿಕ ಶಾಲೆಗೆ ಸಿಂದಗಿ ಕ್ಷೇತ್ರ ಶಿಕ್ಷಣಾಕಾರಿ ಮಹಾಂತೇಶ ಯಡ್ರಾಮಿ ಸೋಮವಾರ ಭೇಟಿ ನೀಡಿ, ಅಲ್ಲಿನ ಸಮಸ್ಯೆ ಕುರಿತು ಪರಿಶೀಲಿಸಿದರು.</p>.<p>ಮುಖ್ಯಶಿಕ್ಷಕಿ ಮಹಾನಂದಾ ಕುಂಬಾರ ಆವರಣದಲ್ಲಿ ಸಂಗ್ರಹವಾಗುವ ನೀರಿನ ಸಮಸ್ಯೆ ಬಗ್ಗೆ ಮಾಹಿತಿ ನೀಡಿ, 'ಏಳೆಂಟು ವರ್ಷಗಳ ಹಿಂದೆ ಪಟ್ಟಣ ಪಂಚಾಯಿತಿ ವತಿಯಿಂದ ಚರಂಡಿ, ಸಿಸಿ ರಸ್ತೆ ನಿರ್ಮಿಸುವಾಗ ಶಾಲಾ ಆವರಣಕ್ಕಿಂತ ಎತ್ತರದಲ್ಲಿ ಚರಂಡಿ ನಿರ್ಮಿಸಿದ್ದರಿಂದ ಶಾಲೆಯ ಆವರಣಕ್ಕೆ ನೀರು ಹರಿದು ಬರುತ್ತದೆ. ಈ ಬಗ್ಗೆ ಪಟ್ಟಣ ಪಂಚಾಯಿತಿ ಅಧಿಕಾರಿಗಳ ಗಮನಕ್ಕೆ ತರಲಾಗಿದೆ. ಕಳೆದ ಎರಡು ವರ್ಷಗಳ ಹಿಂದೆ ಪಟ್ಟಣ ಪಂಚಾಯಿತಿಯವರು ನೀರು ನಿಲ್ಲುವ ಜಾಗಕ್ಕೆ ತಾತ್ಕಾಲಿಕವಾಗಿ ಗರಸು ಹಾಕಿಸಿದ್ದಾರೆ’ ಎಂದು ತಿಳಿಸಿದರು.</p>.<p>ಸಹಶಿಕ್ಷಕರು ಹಾಗೂ ಎಸ್ಡಿಎಂಸಿ ಸದಸ್ಯರನ್ನೊಳಗೊಂಡು ತಕ್ಷಣ ಸಭೆ ಕರೆದು, ಆವರಣದ ಒಂದು ಮೂಲೆಯಲ್ಲಿ ಜೆಸಿಬಿ ಮೂಲಕ ಗುಂಡಿ ತೋಡಿಸಿ, ಕಲ್ಲು ಮಣ್ಣು ತುಂಬಿಸಿ, ನೀರು ಇಂಗುವಂತೆ ವ್ಯವಸ್ಥೆ ಕಲ್ಪಿಸಬೇಕು ಎಂದು ಕ್ಷೇತ್ರಶಿಕ್ಷಣಾಧಿಕಾರಿ ಮುಖ್ಯಶಿಕ್ಷಕರಿಗೆ ಸೂಚಿಸಿದ್ದಾಗಿ ತಿಳಿಸಿದರು.</p>.<p>'ಶಾಲಾ ಆವರಣ ಜಲಾವೃತ; ಮಕ್ಕಳ ಪರದಾಟ' ಶೀರ್ಷಿಕೆಯಡಿ ‘ಪ್ರಜಾವಾಣಿ’ ಜುಲೈ 20ರ ಸಂಚಿಕೆಯಲ್ಲಿ ವರದಿ ಪ್ರಕಟಿಸಲಾಗಿತ್ತು. ಈ ವರದಿ ಗಮನಿಸಿದ ಕ್ಷೇತ್ರ ಶಿಕ್ಷಣಾಕಾರಿ ಶಾಲೆಗೆ ಭೇಟಿ ನೀಡಿ ಸಮಸ್ಯೆಗೆ ಪರಿಹಾರ ಸೂಚಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>