<p><strong>ಹೊರ್ತಿ</strong>: ‘ಗ್ರಾಮಾಭಿವೃದ್ಧಿಗೆ ಸಹಕರಿಸಿದ ಅಧ್ಯಕ್ಷ , ಉಪಾಧ್ಯಕ್ಷ ಮತ್ತು ಸರ್ವ ಸದಸ್ಯರ ಪರಸ್ಪರ ಸಹಕಾರ ಶ್ಲಾಘನೀಯ' ಎಂದು ಹೊರ್ತಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮಹೇಶ ಟಿ. ನಾಯಕ ಹೇಳಿದರು.</p>.<p>ಇಲ್ಲಿನ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷ ಮತ್ತು ಎಲ್ಲ ಸದಸ್ಯರಿಗೆ ಸನ್ಮಾನಿಸಿ, ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಮಲ್ಲೇಸಿ ಭೋಸಗಿ ಮಾತನಾಡಿ, ‘ಗ್ರಾಮದ ಅಭಿವೃದ್ಧಿಯಲ್ಲಿ ಸರ್ವ ಸದಸ್ಯರ ಸಹಕಾರ, ಒಗ್ಗಟ್ಟಿನ ಮನೋಭಾವ ಮುಖ್ಯ. ಇದರಿಂದ ಗ್ರಾಮ ಅಭಿವೃದ್ಧಿ ಕಾಣಲು ಸಾಧ್ಯವಾಗುತ್ತದೆ. ಎಲ್ಲರ ಸಹಕಾರದಿಂದ ಸಾಕಷ್ಟು ಅಭಿವೃದ್ಧಿ ಕಾರ್ಯ ಕೈಗೊಂಡಿದ್ದೇವೆ’ ಎಂದು ಹೇಳಿದರು.</p>.<p>ಕಾರ್ಯಕ್ರಮದ ಮುನ್ನ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಸದಸ್ಯರನ್ನು ಪಿಡಿಒ ಮಹೇಶ ನಾಯಕ ಸನ್ಮಾನಿಸಿದರು.</p>.<p>ಗ್ರಾಮ ಪಂಚಾಯಿತಿ ಅಧ್ಯಕ್ಷ ಜಯಶ್ರೀ ಭೋಸಗಿ, ಉಪಾಧ್ಯಕ್ಷ ರಾಜು ವಡ್ಡರ, ಕಾರ್ಯದರ್ಶಿ ಯಲ್ಲಪ್ಪ ಗಾ ಡಿವಡ್ಡರ, ಮಹಾದೇವ ರಾಠೋಡ, ಶ್ರೀಶೈಲ ಭೋಸಗಿ, ಸುರೇಶ ಅಳ್ಳಿಮೋರೆ, ಪವನ ಕುಲಕರ್ಣಿ, ವಿಠಲ ಬಬಲಾದ, ಮೈಬುಬ ಇಂಡಿ ಮತ್ತು ಗ್ರಾಮಸ್ಥರು ಇದ್ದರು.</p>.<p>ಪವನ ಕುಲಕರ್ಣಿ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಸುರೇಶ ಅಳ್ಳಿಮೋರೆ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊರ್ತಿ</strong>: ‘ಗ್ರಾಮಾಭಿವೃದ್ಧಿಗೆ ಸಹಕರಿಸಿದ ಅಧ್ಯಕ್ಷ , ಉಪಾಧ್ಯಕ್ಷ ಮತ್ತು ಸರ್ವ ಸದಸ್ಯರ ಪರಸ್ಪರ ಸಹಕಾರ ಶ್ಲಾಘನೀಯ' ಎಂದು ಹೊರ್ತಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮಹೇಶ ಟಿ. ನಾಯಕ ಹೇಳಿದರು.</p>.<p>ಇಲ್ಲಿನ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷ ಮತ್ತು ಎಲ್ಲ ಸದಸ್ಯರಿಗೆ ಸನ್ಮಾನಿಸಿ, ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಮಲ್ಲೇಸಿ ಭೋಸಗಿ ಮಾತನಾಡಿ, ‘ಗ್ರಾಮದ ಅಭಿವೃದ್ಧಿಯಲ್ಲಿ ಸರ್ವ ಸದಸ್ಯರ ಸಹಕಾರ, ಒಗ್ಗಟ್ಟಿನ ಮನೋಭಾವ ಮುಖ್ಯ. ಇದರಿಂದ ಗ್ರಾಮ ಅಭಿವೃದ್ಧಿ ಕಾಣಲು ಸಾಧ್ಯವಾಗುತ್ತದೆ. ಎಲ್ಲರ ಸಹಕಾರದಿಂದ ಸಾಕಷ್ಟು ಅಭಿವೃದ್ಧಿ ಕಾರ್ಯ ಕೈಗೊಂಡಿದ್ದೇವೆ’ ಎಂದು ಹೇಳಿದರು.</p>.<p>ಕಾರ್ಯಕ್ರಮದ ಮುನ್ನ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಸದಸ್ಯರನ್ನು ಪಿಡಿಒ ಮಹೇಶ ನಾಯಕ ಸನ್ಮಾನಿಸಿದರು.</p>.<p>ಗ್ರಾಮ ಪಂಚಾಯಿತಿ ಅಧ್ಯಕ್ಷ ಜಯಶ್ರೀ ಭೋಸಗಿ, ಉಪಾಧ್ಯಕ್ಷ ರಾಜು ವಡ್ಡರ, ಕಾರ್ಯದರ್ಶಿ ಯಲ್ಲಪ್ಪ ಗಾ ಡಿವಡ್ಡರ, ಮಹಾದೇವ ರಾಠೋಡ, ಶ್ರೀಶೈಲ ಭೋಸಗಿ, ಸುರೇಶ ಅಳ್ಳಿಮೋರೆ, ಪವನ ಕುಲಕರ್ಣಿ, ವಿಠಲ ಬಬಲಾದ, ಮೈಬುಬ ಇಂಡಿ ಮತ್ತು ಗ್ರಾಮಸ್ಥರು ಇದ್ದರು.</p>.<p>ಪವನ ಕುಲಕರ್ಣಿ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಸುರೇಶ ಅಳ್ಳಿಮೋರೆ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>